ಹತ್ಯಾಚಾರ ಖಂಡಿಸಿ ಆಲಮೇಲ ಬಂದ್


Team Udayavani, Dec 26, 2017, 12:03 PM IST

vij-2.jpg

ಆಲಮೇಲ: ವಿಜಯಪುರದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಘಟನೆ ಖಂಡಿಸಿ ವಿವಿಧ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಆಲಮೇಲ ಬಂದ್‌ ಯಶಸ್ವಿಯಾಯಿತು. ಬಂದ್‌ ಕರೆ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್‌ಗ‌ಳು ಮುಚ್ಚಿದ್ದವು.

ಸರಕಾರಿ ಬಸ್‌ ಹಾಗೂ ಖಾಸಗಿ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು ಪ್ರಯಾಣಿಕರು ಪರದಾಡುವಂತಾಯಿತು. ಅಂಬಿಗರ ಚೌಡಯ್ಯ ವೃತ್ತದಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್‌ ವೃತ್ತದಲ್ಲಿಬಹಿರಂಗ ಸಭೆಯಾಗಿ ಮಾರ್ಪಟ್ಟಿತು.

ಈ ವೇಳೆ ಸಂಘಟನೆಗಳ ಮುಖಂಡರಾದ ಚಂದ್ರಕಾಂತ ಸಿಂಗೆ, ಪರಶುರಾಮ ಕಾಂಬಳೆ, ವಿರುಪಾಕ್ಷ ಗುಬ್ಬೆವಾಡ, ಮಂಗಳಾ ಗುಡಿಮಠ ಸೇರಿದಂತೆ ಇತರರು ಮಾತನಾಡಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಸಾರ್ವಜನಿಕವಾಗಿ ಧರ್ಮದೇಟು ನೀಡಿ ಹತ್ಯೆ ಮಾಡಬೇಕು. ಆಗ ಕಾಮುಕರಿಗೆ ಭಯ ಹುಟ್ಟುತ್ತದೆ. ಕಾಮುಕರಿಗೆ ಕಾನೂನು ರೀತಿ ಶಿಕ್ಷೆಗಿಂತ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತ ಮತ್ತು ದಲಿತ ಮಹಿಳಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರಕಾರ ಕಾಮುಕರಿಗೆ ಕಠಿಣ ಶಿಕ್ಷೆ ನೀಡಬೇಕು. ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಕೆಲ ರಾಜಕಾರಣಿಗಳು ಬೆಂಬಲ ಇದೆ ಎಂದು ಹೇಳಲಾಗುತ್ತಿದ್ದು ಅತ್ಯಾಚಾರ ಎಸಗುವುದಕ್ಕಿಂತ ಬೆಂಬಲ ನೀಡುವುದು ದೊಡ್ಡ ತಪ್ಪು ಎಂದರು. 

ಹೆಣ್ಣು ಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ತಿರಗಾಡಬೇಕಾದರೆ ಭಯದಲ್ಲಿ ಇರಬೇಕಾಗಿದೆ. ಮೈ ಮುಟ್ಟಲು ಮುಂದಾದರೆ ರಾಣಿ ಚನ್ನಮ್ಮಳಂತೆ ಕಾಮುಕರಿಗೆ ಅಲ್ಲೆ ಅಂತ್ಯ ಕಾಣಿಸಬೇಕು. ಹೆಣ್ಣು ಮಕ್ಕಳು ಹೇಡಿಗಳಲ್ಲ ಎಂದು ತೋರಿಸಲು ಮುಂದಾಗಬೇಕು. ಆಗ ಕಾಮುಕರಿಗೆ ಭಯ ಹುಟ್ಟುತ್ತದೆ ಎಂದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ ಶಿವಾಚಾರ್ಯರು, ವಿರಕ್ತಮಠದ ಸ್ವಾಮಿಗಳು, ಡಾ| ಸಂದೀಪ ಪಾಟಿಲ, ಬಿ.ಆರ್‌. ಯಂಟಮಾನ, ಚಂದ್ರಕಾಂತ ಸಿಂಗೆ, ವಿದ್ಯಾವತಿ ಗೌರ, ಸೋಮುನಾಥ ಮೇಲಿನಮನಿ, ಅಕºರ್‌ ಮುಲ್ಲಾ, ಪ್ರದೀಪ ಯಂಟಮಾನ, ಭರತಕುಮಾರ ಯಂಟಮಾನ, ಹನುಮಂತ ಹೂಗಾರ, ಶಿವುಕುಮಾರ ಮೇಲಿನಮನಿ, ಶ್ರೀಕಾಂತ ಸೋಮಜಾಳ, ಶರಣು ಸಿಂಧೆ, ರಮೇಶ ಭಂಟನೂರ, ದೇವಪ್ಪ ಗುಣಾರಿ, ಹರೀಶ ಯಂಟಮಾನ, ಜೈಭೀಮ ನಾಯ್ಕೋಡಿ, ಹುಸೇನ್‌ ತಾಂಬೋಳಿ, ಶಶಿಧರ ಗಣಿಯಾರ, ಶಿವರಾಜ್‌ ಬೋರನಾಯಕ, ವಿಶ್ವನಾಥ ಹಿರೆಮಠ, ಅಮೃತ ಕೊಟ್ಟಳಗಿ, ರಾಜು ಮೇತ್ರಿ, ಹನುಮಂತ ಪೂಜಾರಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಹೊರ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಇಂಚಗೇರಿ: ವಿಜಯಪುರ ನಗರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಡಿಎಸ್ಸೆಸ್‌ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಸೋಮವಾರ ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. 

ಹೊರ್ತಿ ಗ್ರಾಮದ ರೇವಣಸಿದ್ದೇಶ್ವರ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗುತ್ತ ಗ್ರಾಮದ ಪ್ರಮುಖ ದಾರಿಗಳಲ್ಲಿ ಸಾಗಿ ಮಧ್ಯಾಹ್ನ 11ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿನ ಸಾರ್ವಜನಿಕರು ಅಂಗಡಿ ಮುಂಗಟ್ಟು ಬಂದ್‌ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲಿಸಿದರು.

ಈ ವೇಳೆ ಡಿಎಸ್ಸೆಸ್‌ ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ ಮಾತನಾಡಿ, ರಾಜ್ಯದಲ್ಲಿ ದಲಿತರ ಹಾಗೂ ವಿದ್ಯಾರ್ಥಿಗಳ ಮೇಲೆ ಮೇಲಿಂದ ಮೇಲೆ ದೌರ್ಜನ್ಯಗಳು ನಡೆಯುತ್ತಿರುವದು ಅಮಾನವೀಯ ಸಂಗತಿ. ಕೂಡಲೇ ಸರ್ಕಾರ ಅಪರಾಧಿಗಳನ್ನು ಬಂಧಿಸಿ ಗಲ್ಲು ಶಿಕ್ಷ ವಿ ಧಿಸಿಲು ಕ್ರಮ ಕೈಗೊಳ್ಳಬೇಕು ಎಂದರು.

ಮುಖಂಡರಾದ ಶ್ರೀಶೈಲಗೌಡ ಬಿರಾದಾರ, ಅಣ್ಣಪ್ಪ ಖೈನೂರ, ದಯಾಸಾಗರ ಪಾಟೀಲ, ಬಿ.ಡಿ. ಪಾಟೀಲ, ತಾಪಂ ಸದಸ್ಯ ಗಣಪತಿ ಬಾಣಿಕೋಲ, ಶ್ರೀನಿವಾಸ ಕಂದಗಲ್‌ ಮಾತನಾಡಿ, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಲು ಸರ್ಕಾರ ಕುಮ್ಮಕ್ಕು ನೀಡದೇ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಶೀಘ್ರವಾಗಿ ತನಿಖೆ ನಡೆಸಿ ಮೃತಳ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ರೂಪಿಸಿಬೇಕು ಎಂದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರಾದ ಸಂತೋಷ ತಳಕೇರಿ, ಕ್ಲಲಪ್ಪ ಅಂಜುಟಗಿ, ಮಹಾದೇವ ಬನಸೋಡೆ, ಸತೀಶ ಸಾವಳಸಂಗ, ಮಹಾದೇವ ಸಾವಳಸಂಗ, ದುಂಡಪ್ಪ ವಾಘಮೋಡೆ, ಪರುಶುರಾಮ ಕನ್ನೊಳ್ಳಿ, ಶ್ರೀಶೈಲ ವಟಾರೆ, ಸಿದ್ದಪ್ಪ ತಳಕೇರಿ, ಮಲ್ಲೇಶ ಬನಸೋಡೆ, ರಮೇಶ ನಿಂಬಾಳಕರ, ಸಾವಳಪ್ಪ ಕಿಣಗಿ, ಅಶೋಕ ತಳಕೇರಿ, ರೇವಣಸಿದ್ದ ಘೋಡಕೆ, ಶರಣು ಡೊಣಗಿ, ಶಿವಾನಂದ ಅಲಕೋಡೆ, ಬಸಪ್ಪ ಬಸನಾಳ, ಸಂಗಪ್ಪ ಭೋಸಗಿ, ಶ್ರೀಮಂತ ಪೂಜಾರಿ, ಶಿವಪುತ್ರ ತಳಕೇರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.