ದುಶ್ಚಟ ತ್ಯಜಿಸಿ ಪುಣ್ಯಾತ್ಮರಾಗಿ: ಶ್ರೀ


Team Udayavani, Dec 3, 2018, 12:26 PM IST

vij-3.jpg

ಕಲಕೇರಿ: ದೇಶದ ಸಂಸ್ಕೃತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಇಲ್ಲಿನ ಪುಣ್ಯಭೂಮಿ ಅನೇಕ ಸಂತರ, ಶರಣರು, ಸತ್ಪುರುಷರ ನೆಲೆಬಿಡಾಗಿದೆ. ಮಠಮಾನ್ಯಗಳು, ಧರ್ಮಸಭೆಗಳು, ಪ್ರತಿಯೊಬ್ಬರಿಗೂ ಸಂಸ್ಕಾರವನ್ನು ಕಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಸಮೀಪದ ಸುಕ್ಷೇತ್ರ ಅಸ್ಕಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಶ್ರೀಶೈಲ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. 

ಪ್ರತಿಯೊಬ್ಬರು ನಮ್ಮ ದೇಹಕ್ಕೆ ಬೇಡವಾದ ದುಶ್ಚಟಗಳನ್ನು ತ್ಯಜಿಸಿ, ನಿತ್ಯ ಪುಣ್ಯಕಾರ್ಯದಲ್ಲಿ ತಮ್ಮನ್ನ ತಾವು ತೋಡಗಿಸಿಕೊಳ್ಳಬೇಕು. ಇದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಜಾತ್ರೆ-ಉತ್ಸವಗಳು ನಮ್ಮ ಸಂಸ್ಕೃತಿಯ ಪರಂಪರೆಯಾಗಿದ್ದು, ಅವುಗಳು ಸಮಾಜದಲ್ಲಿ ಸಾಮರಸ್ಯ ಉಂಟುಮಾಡಿ ಮನಸ್ಸಿಗೆ ನೆಮ್ಮದಿ ತಂದುಕೊಂಡುತ್ತವೆ. ಮುಖ್ಯವಾಗಿ ಪ್ರತಿಯೊಬ್ಬರು ಧರ್ಮವಂತರಾಗಬೇಕು.

ಗುರು-ಹಿರಿಯರನ್ನು ಪೂಜ್ಯನೀಯ ಭಾವದಿಂದ ಕಾಣವಂತವರಾಗಬೇಕು, ಧರ್ಮವನ್ನು ರಕ್ಷಣೆ ಮಾಡುವದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ನಾವು ಧರ್ಮವನ್ನು ರಕ್ಷಿಸಿದರೆ ಮಾತ್ರ ಧರ್ಮ ನಮ್ಮನ್ನು ರಕ್ಷಿಸುತ್ತದೆ. ಧರ್ಮದಿಂದ ವಿಶ್ವಕ್ಕೆ ಶಾಂತಿ ಸಿಗುತ್ತದೆ ಎಂದರು.
 
ಜಾಲಹಳ್ಳಿಯ ಜಯಶಾಂತಲಿಂಗೇಶ್ವರ ಶ್ರೀಗಳು, ಮಾಗಣಗೇರಿಯ ಡಾ| ವಿಶ್ವಾರಾಧ್ಯ ಶ್ರೀಗಳು ಮಾತನಾಡಿ, ಧರ್ಮಕಾರ್ಯಗಳು ಎಲ್ಲರನ್ನು ಸನ್ಮಾರ್ಗದತ್ತ ಕೊಂಡೊಯುತ್ತವೆ. ಪುರಾಣ ಪ್ರವಚನಗಳು ಪ್ರತಿಯೊಬ್ಬರು ಸಚ್ಚಾರಿತ್ರ್ಯದಿಂದ ಬದುಕು ಸಾಗಿಸುವುದನ್ನು ತಿಳಿಸುತ್ತವೆ. ದಾನ, ಧರ್ಮ, ಪರೋಪಕಾರದಿಂದ ಬದುಕನ್ನು ಸಾಗಿಸಬೇಕು. ಇದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಇದೀಗ ಅಸ್ಕಿ ಗ್ರಾಮ ಜಗದ್ಗುರು ಮಹಾಸನ್ನಿದಿ ಅವರ ಪಾದಸ್ಪರ್ಶದಿಂದ ಪಾವನಗೊಂಡಿದೆ ಎಂದು ಹೇಳಿದರು.

ವೀರುಪಾಕ್ಷೇಶ್ವರ ಶ್ರೀಗಳು, ಜಯಸಿದ್ದೇಶ್ವರ ಶ್ರೀಗಳು, ಶಾಂತ ಶಿವಯೋಗೇಶ್ವರ ಶ್ರೀಗಳು, ಗುರುಲಿಂಗ ಶ್ರೀಗಳು, ಗೌರಿಶಂಕರ ಶ್ರೀಗಳು, ಅಭಿನವ ಸಿದ್ದಲಿಂಗ ಶ್ರೀಗಳು, ಶಿವಭಸವ ಶ್ರೀಗಳು, ಶಿವಕುಮಾರ ಸ್ವಾಮಿಗಳು, ಗುರುಮೂರ್ತಿ ಹಿರೇಮಠ ಸಮ್ಮುಖ ವಹಿಸಿದ್ದರು. ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಚಾಯಾಗೋಳ, ಸಾಹೇಬಗೌಡ ಪಾಟೀಲ ಸಾಸನೂರ, ಜಿಪಂ ಸದಸ್ಯರಾದ ಬಸನಗೌಡ ವಣಕ್ಯಾಳ, ಸಿದ್ದು ಬುಳ್ಳಾ, ಡಾ| ಪ್ರಭುಗೌಡ ಬಿರಾದಾರ, ಸಿಂದಗಿ ಎಪಿಎಂಸಿ ಅಧ್ಯಕ್ಷ ಹಳ್ಳೆಪ್ಪಗೌಡ ಚೌದ್ರಿ ಮಾತನಾಡಿದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ, ಗ್ರಾಮದ ಹಿರಿಯರಿಗೆ, ದಾನಿಗಳಿಗೆ, ಗೌರಿಶಂಕರ ಜಾತ್ರಾ ಉತ್ಸವ ಸಮಿತಿಯವರನ್ನು ಶ್ರೀಶೈಲ ಜಗದ್ಗುರುಗಳು ಗೌರವಿಸಿದರು. ಚನ್ನಮ್ಮ ತಂಗಡಗಿ, ಸಿದ್ದರಾಮ ದೇವರು ಬೋರಗಿ, ಪ್ರಶಾಂತ ಹಾವರಗಿ, ಬಸವರಾಜ್‌ ಶಾಸ್ತ್ರೀ ಸೋಲಾಪುರ, ಮಡಿವಾಳಪ್ಪ ತಳವಾರ, ಡಾ| ಶಶಿಕಾಂತ ಭಾಗೇವಾಡಿ, ಆರ್‌.ಸಿ. ಪಾಟೀಲ, ಶ್ರೀಶೈಲ ಭಾಗೇವಾಡಿ, ಅಮರಯ್ಯ ಗವಾಯಿಗಳು ಹಿರೇಮಠ, ರಾಜಶೇಖರ್‌ ಗೆಜ್ಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಭುಗೌಡ ಬಿರಾದಾರ ಅಸ್ಕಿ ಸ್ವಾಗತಿಸಿದರು. ಶಾಂತಯ್ಯ ಹಿರೇಮಠ, ಎಚ್‌.ಎನ್‌. ಬಿರಾದಾರ, ಮಡಿವಾಳಪ್ಪ ತಳವಾರ ನಿರೂಪಿಸಿದರು. ಮುತ್ತು ಅಮರಖೇಡ ವಂದಿಸಿದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.