ಪಟ್ಟಣದ ಸಮಗ್ರ ಅಭಿವೃದ್ದಿಗೆ ಕ್ರಮ
Team Udayavani, Dec 6, 2021, 6:10 PM IST
ಸಿಂದಗಿ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ತರುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ರಮೇಶ ಭೂಸನೂರ ಹೇಳಿದರು.
ಪಟ್ಟಣದ ವಾರ್ಡ್ ನಂ.19ರಲ್ಲಿನ ಕೆಸರು ಗದ್ದೆಯಂತಾಗಿರುವ ರಸ್ತೆಗಳು, ಚರಂಡಿ ಅವ್ಯವಸ್ಥೆ, ಅಭಿವೃದ್ಧಿಯಾಗದ ಉದ್ಯಾನವನಗಳು ಹೀಗೆ ಹಲವು ಸಮಸ್ಯೆ ರವಿವಾರ ವೀಕ್ಷಿಸಿ ಅವರು ಮಾತನಾಡಿದರು.
ವಾರ್ಡ್ ಜನತೆಯ ಬೇಡಿಕೆಯಂತೆ ಸಮಸ್ಯೆ ಆಲಿಸಿದ್ದು, ಪಟ್ಟಣದಲ್ಲಿ ಸಾಕಷ್ಟು ಕಡೆ ರಸ್ತೆಗಳು ಹಾಳಾಗಿವೆ. ಶೀಘ್ರ ಹದಗೆಟ್ಟ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ ಪಟ್ಟಣದಲ್ಲಿನ ಉದ್ಯಾನಗಳನ್ನು ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.
ಮಕ್ಕಳಿಗಾಗಿ ಕಿರಿಯ ಪ್ರಾಥಮಿಕ ಶಾಲೆ ಪ್ರಾರಂಭಿಸುವುದು, ಸೇವಾಲಾಲ ದೇವಸ್ಥಾನ ಹತ್ತಿರದಲ್ಲಿನ ಶಿವನ ದೇವಾಲಯ ಅಭಿವೃದ್ಧಿಪಡಿಸುವಂತೆ ವಾರ್ಡ್ ನಿವಾಸಿಗಳು ಶಾಸಕರಲ್ಲಿ ಮನವಿ ಮಾಡಿದರು.
ಈ ವೇಳೆ ಭೋಗರಾಜ, ಬಿಜೆಪಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಸಂತೋಷ ಲಮಾಣಿ, ಐ.ವೈ. ಲಕ್ಕೊಂಡ, ಆನಂದ ಕುರಡೆ, ಇಮಾಮ ಖತಿಬ, ಸಂತೋಷ ಒಣಕಿ, ಗೌಡಪ್ಪ ಲಕ್ಕೊಂಡ, ಶ್ಯಾಮ ಭಜಂತ್ರಿ, ರವಿ ಯಂಪೂರೆ, ಸುಧಿಧೀರ ಪಟ್ಟಣಶೆಟ್ಟಿ, ವಿನಾಯಕ ದೇವರಮನಿ ಸೇರಿದಂತೆ ವಾರ್ಡ್ ನಿವಾಸಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?