ಪ್ರತಿಫ‌ಲವಿಲ್ಲದೆ ಸಮಾಜ ಸೇವೆ ಮಾಡಲು ಸಲಹೆ


Team Udayavani, Jan 3, 2022, 2:35 PM IST

20blood

ಮುದ್ದೇಬಿಹಾಳ: ಸಮಾಜದಲ್ಲಿ ಸಮಸ್ಥಿತಿ ನಿರ್ಮಿಸಲು ತೋರುವ ಬದ್ಧತೆ ಹಾಗೂ ಕಾಳಜಿಗಳೇ ನಿಜವಾದ ಸಾಮಾಜಿಕ ಮೌಲ್ಯಗಳು. ಇದನ್ನರಿತು ಕೈಗೊಳ್ಳುವ ಕಾರ್ಯಗಳು ಪರಮ ಶ್ರೇಷ್ಠ ಎನಿಸುತ್ತವೆ. ಪರರಿಗೆ ಉಪಕಾರ ಬಯಸುವ ಗುಣಗಳು ನಮ್ಮೆಲ್ಲರಲ್ಲಿ ಮೈದಳಿಯುವುದು ಇಂದಿನ ಅವಶ್ಯಕತೆಯಾಗಿದೆ. ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಪ್ರತಿಫಲ ಬಯಸದೇ ಮಾಡುವ ಕಾರ್ಯಗಳೇ ನಿಜವಾದ ಸಮಾಜ ಸೇವೆ ಎನಿಸಿಕೊಳ್ಳುತ್ತವೆ ಎಂದು ಬಸರಕೋಡ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಸಂಗಮೇಶ ಕಮತರ ಹೇಳಿದರು.

ಬಸರಕೋಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜಯಪುರ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಪರಪ್ಪ ಮಾಸ್ತರ ಸಾವಯವ ಕೃಷಿ ವಿದ್ಯಾಪೀಠ ಹಾಗೂ ದಾಸೋಹಿ ಸಮಗ್ರ ಕೃಷಿಕರ ಆತ್ಮ ಗುಂಪು ಬಸರಕೋಡ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಂತಕ ಅರವಿಂದ ಕೊಪ್ಪರವರ 45ನೇ ಜನ್ಮ ದಿನೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶಾಲಾ ಮಕ್ಕಳಿಗೆ ಅನ್ನ ಸಂತರ್ಪಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಸತ್ಯ ಶುದ್ಧ ಕಾಯಕ ಮತ್ತು ದಾಸೋಹಗಳನ್ನು ಸಾಮಾಜಿಕ ಮೌಲ್ಯಗಳೆಂದು ಪ್ರತಿಪಾದಿಸಿದ ಬಸವಾದಿ ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜ ಕಟ್ಟುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅರವಿಂದ ಕೊಪ್ಪರವರ ಸೇವಾ ಕಾರ್ಯಗಳು ಮುಂದಿನ ಜನಾಂಗಕ್ಕೆ ದಾರಿ ದೀಪವಾಗಿವೆ ಎಂದರು.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ| ಶಿವುಕುಮಾರ ಜಂಗಮಶೆಟ್ಟಿ ಮಾತನಾಡಿ, ರಕ್ತದಾನದ ಬಗ್ಗೆ ಅನೇಕರಲ್ಲಿರುವ ತಪ್ಪು ಕಲ್ಪನೆಯಿಂದ ರಕ್ತದಾನದ ಮಹತ್ವ ಅರಿಯುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ರಕ್ತದಾನದಿಂದ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಮಾಣ ವೃದ್ಧಿಯಾಗುವುದಲ್ಲದೇ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ. ಶರೀರದಲ್ಲಿರುವ ಕೊಲೆಸ್ಟ್ರಾಲ್‌ ಕಡಿಮೆ ಮಾಡಿ ಹೃದಯದ ಆರೋಗ್ಯ ಕಾಪಾಡಲೂ ಸಹ ಇದು ಸಹಕರಿಸುವುದರ ಜೊತೆಗೆ ನಾಲ್ಕು ಜೀವಗಳನ್ನು ಉಳಿಸಿದ ಧನ್ಯತಾಭಾವ ಒದಗಿಸಿ ಕೊಡುವ ಶ್ರೇಷ್ಠ ಕಾರ್ಯವಾಗಿರುವುದರಿಂದ ಅರ್ಹತೆ ಇರುವ ಪ್ರತಿಯೊಬ್ಬರು ಸಮಯ ಮತ್ತು ಅಗತ್ಯಕ್ಕೆ ತಕ್ಕಂತೆ ರಕ್ತದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಬಸರಕೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಡಿ.ಎಸ್‌. ಚಳಗೇರಿ, ಸಮೂಹ ಸಂಪನ್ಮೂಲ ವ್ಯಕ್ತಿ ಈರಬಸಪ್ಪ ಕಾರಕೂನ, ಕಾರ್ಯಕ್ರಮ ಕೇಂದ್ರ ಬಿಂದು ಅರವಿಂದ ಕೊಪ್ಪ ಮಾತನಾಡಿದರು.

ಮಡಿವಾಳಪ್ಪ (ಮುತ್ತು) ತೋಟದ, ಸೋಮಲಿಂಗಪ್ಪ ಗಸ್ತಿಗಾರ, ಚಾಂದಬಾಷಾ ಮಾಳನೂರ, ಪ್ರಕಾಶ ಸೂಳಿಭಾವಿ, ಶಿಕ್ಷಕಿಯರಾದ ರೇಣುಕಾ ಚಿತ್ತವಾಡಗಿ, ಎಸ್‌.ಎಸ್‌. ಹೊಳಿ ವೇದಿಕೆಯಲ್ಲಿದ್ದರು. ಸೋಮಶೇಖರ ಹೊಸಮನಿ ಸ್ವಾಗತಿಸಿದರು. ರಶ್ಮಿ ಕೊಪ್ಪ ಪ್ರಾಸ್ತಾವಿಕ ಮಾತನಾಡಿದರು. ಕುಮಾರಸ್ವಾಮಿ ನಿರೂಪಿಸಿದರು. ಶಶಿಕಮಾರ ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.