ಆದಾಯ ದ್ವಿಗುಣ ಮಾಡಿಕೊಳ್ಳಲು ಅನ್ನದಾತರಿಗೆ ಸಲಹೆ


Team Udayavani, Feb 1, 2022, 4:57 PM IST

29farmers

ಇಂಡಿ: ಭಾರತೀಯ ಜನತಾ ಪಕ್ಷದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಆದಾಯ ದ್ವಿಗುಣಗೊಳಿಸಲು ಸಾಕಷ್ಟು ಶ್ರಮಿಸುತ್ತಿವೆ. ರೈತರು ಸರ್ಕಾರದ ಯೋಜನೆಗಳ ಲಾಭ ಪಡೆದು ಆದಾಯ ದ್ವಿಗುಣಗೊಳಿಸಿಕೊಳ್ಳಲು ಮುಂದಾಗಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.

ಪಟ್ಟಣದ ಸಿಂದಗಿ ರಸ್ತೆಯ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರೈತ ಮೋರ್ಚಾ ಮಂಡಲ ಪದಾಧಿಕಾರಗಳ ವಿಶೇಷ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತಾಪಿ ವರ್ಗದವರು ಬೆಳೆ ಬೆಳೆಯುತ್ತಾರೆ. ಆದರೆ ಅವರಿಗೆ ಲಾಭ ಸಿಗುತ್ತಿಲ್ಲ. ಇಂದು ಕೃಷಿಯಲ್ಲಿ ರೈತರು ಸಾಕಷ್ಟು ತೊಂದರೆಗೀಡಾಗಿದ್ದಾರೆ. ಆದ್ದರಿಂದ ಸರ್ಕಾರ ರೈತರ ಆರ್ಥಿಕ ಸುಧಾರಣೆಗೆ ಆದಾಯದಲ್ಲಿ ದ್ವಿಗುಣ ಆಗುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಫಸಲ್‌ ಬೀಮಾ ಯೋಜನೆ, ಕಿಸಾನ್‌ ಸಮ್ಮಾನ್‌ ನಿಧಿ, ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ರೈತರಿಗೆ ಆತ್ಮವಿಶ್ವಾಸ ಮೂಡಿಸಿದ್ದಾರೆ ಎಂದರು.

ಆತ್ಮಯೋಜನೆ ನಿರ್ದೇಶಕ ಎಂ.ಬಿ. ಪಟ್ಟಣಶೆಟ್ಟಿ ಮಾತನಾಡಿ, ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿವೆ. ರೈತರು ಯಾವುದೇ ಬೆಳೆ ಬೆಳೆದರೂ ಮಾರುಕಟ್ಟೆಯಿಂದ ಹಿಡಿದು ದಲ್ಲಾಳಿಗಳ ಹಾವಳಿ ತಪ್ಪಿದ್ದಲ್ಲ. ಇಂತಹ ಸಂಕಷ್ಟಗಳನ್ನು ತಪ್ಪಿಸಲು ರೈತರು ನೇರವಾಗಿ ಗ್ರಾಹಕರ ಕೈ ಸೇರಬೇಕಾದರೆ ಸಮಾನ ರೈತರು ಒಗ್ಗೂಡಿ ಸಂಸ್ಕರಣೆ ಮಾಡಿ ನೇರ ಮಾರಾಟ ಮಾಡಿದರೆ ದ್ವಿಗುಣ ಲಾಭ ಪಡೆಯಲು ಸಾಧ್ಯ ಎಂದರು.

1972ರಲ್ಲಿ ಸರ್ಕಾರಗಳು ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಬೆಳೆಯಲಿ ಎಂಬ ಸದಾಶಯದಿಂದ ರೈತರಿಗೆ ಸಾಕಷ್ಟು ಸಹಾಯ ಸಹಕಾರ ಮಾಡಲಾಗುತ್ತಿತ್ತು. ಆದರೆ ಈಗ ರಾಜ್ಯ, ಕೇಂದ್ರ ಸರ್ಕಾರಗಳು ರೈತರು ಬೆಳೆದ ಪ್ರತಿಯೊಂದು ಬೆಳೆಗೆ ಯೋಗ್ಯ ಬೆಲೆ ಸಿಕ್ಕು ರೈತ ದ್ವಿಗುಣ ಲಾಭ ಪಡೆಯಲಿ ಎಂದು ರೈತರ ಹಿತರಕ್ಷಣೆಗೆ ಕೃಷಿ ಕಲ್ಯಾಣ ಯೋಜನೆಗಳನ್ನು ನೀಡುತ್ತಿದೆ. ಇದರ ಲಾಭ ಪಡೆದು ರೈತರು ಆರ್ಥಿಕ ಸಬಲರಾಗಬೇಕು ಎಂದರು.

ಬಿಜೆಪಿ ರೈತ ಮೋರ್ಚಾ ಮುಖಂಡೆ ಮಧು ಪಾಟೀಲ ಮಾತನಾಡಿ, ರೈತರ ಸಂಘಗಳನ್ನು ಹೋಬಳಿ ಮಟ್ಟದಲ್ಲಿ ಸ್ಥಾಪನೆ ಮಾಡಿ ರೈತರೂ ಒಗ್ಗೂಡಿ ತಾವು ಬೆಳೆದ ಬೆಳೆಗಳನ್ನು ಸಂಸ್ಕರಿಸಿ ಗ್ರಾಹಕರಿಗೆ ಮಾರಾಟ ಮಾಡಿದರೆ ರೈತರು ದ್ವಿಗುಣ ಲಾಭ ಪಡೆಯಬಹುದು. ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿಕೊಳ್ಳಬಹುದು. ರೈತ ಆರ್ಥಿಕವಾಗಿ ಬಲಾಡ್ಯನಾಗಲು ಸಾಧ್ಯ ಎಂದರು.

ಅನಿಲ ಜಮಾದಾರ, ರಾಮು ಜಾಧವ, ಸಿದ್ದು ಬುಳ್ಳಾ, ರಮೇಶ ಶಹಾಪೇಟಿ, ರಾಜೇಶ ಕಾಡೆ, ಸಿದ್ದಗೊಂಡ ಬಿರಾದಾರ, ಬಸವರಾಜ ಕಲ್ಲೂರ, ರಜನಿಕಾಂತ ಕಲ್ಲೂರ, ರವಿ ವಗ್ಗೆ, ಅಶೋಕ ಅಕಲಾದಿ, ಅನಿಲಗೌಡ ಬಿರಾದಾರ, ಸೋಮು ನಿಂಬರಗಿಮಠ, ಮಲ್ಲು ವಾಲೀಕಾರ, ಭೀಮಾಶಂಕರ ಆಳೂರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.