ಯುಗಾದಿ ಬಳಿಕ ರಾಜ್ಯದಲ್ಲಿ CM ಬದಲಾವಣೆ; ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿ:ಯತ್ನಾಳ್
Team Udayavani, Jan 30, 2021, 5:36 PM IST
ವಿಜಯಪುರ : ಮುಂಬರುವ ಯುಗಾದಿ ಬಳಿಕ ಹೊಸ ವರ್ಷದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದು, ಉತ್ತರ ಕರ್ನಾಟಕ ಭಾಗದವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮತ್ತೊಮ್ಮೆ ಸಿ.ಎಂ ಬದಲಾವಣೆ ಕುರಿತು ಭವಿಷ್ಯ ನುಡಿದಿದ್ದಾರೆ.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂದಿನ ಯುಗಾದಿ ಹಬ್ಬದ ಬಳಿಕ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಬರುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ನಾನು ಮಂತ್ರಿ ಸ್ಥಾನ ಬೇಕು ಎಂದು ದಾವಣಗೆರೆಯಲ್ಲಿ ಮಾತನಾಡಿಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಿಲ್ಲ. ಮುಂದಿನ ಮಂತ್ರಿ ಸ್ಥಾನದಲ್ಲಿ ನಮ್ಮವರೇ ಬರುತ್ತಾರೆ, ಕಾಯಿರಿ.. ಎಂದು ಮತ್ತೊಮ್ಮೆ ಮಾರ್ಮಿಕವಾಗಿಯೇ ಉತ್ತರಿಸಿದರು.
ಇದನ್ನೂ ಓದಿ:ಮಹಾರಾಷ್ಟ್ರ ಬಸ್ಗೆ ಮಸಿ ಬಳಿದ ಸೇನೆ
ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ವಾಹನದ ಮೇಲೆ ಕಲ್ಲು ಎಸೆಯುವ ಮೂಲಕ ಬೆಂಗಳೂರು ಮತೀಯ ಗಲಭೆ ಸೃಷ್ಟಿಸುವ ಹಾಟ್ಸ್ಪಾಟ್ ಆಗುತ್ತಿದೆ ಎಂಬುದಕ್ಕೆ ಮತ್ತೊಮ್ಮೆ ಸಾಕ್ಷ ಒದಗಿಸಿದೆ. ರಾಜ್ಯದಲ್ಲಿ ಕೋಮು ಗಲಭೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗುತ್ತಿದೆ. ಕೋಮು ಗಲಭೆ ಸೃಷ್ಟಿಸುವವರ ಜೊತೆ ಮುಖ್ಯಮಂತ್ರಿ, ಗೃಹ ಸಚಿವರು ಸಲುಗೆಯ ಸ್ನೇಹ ಹೊಂದಿದರೆ ಇಂಥ ಸ್ಥಿತಿ ರಾಜ್ಯಕ್ಕೆ ತಪ್ಪಿದ್ದಲ್ಲ ಎಂದರು, ಇದಲ್ಲದೇ ಈ ಸಂದರ್ಭದಲ್ಲಿ ಪ್ರಸ್ತುತ ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ ಎಂದು ವಿಪಕ್ಷಗಳ ವಿರುದ್ಧವೂ ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ