ಮುದ್ದೇಬಿಹಾಳ ಸಾವಯವ, ಸಮಗ್ರ ಕೃಷಿ ತರಬೇತಿ, ಸಂಶೋಧನೆ ಕೇಂದ್ರಕ್ಕೆ ಮನವಿ: ನಡಹಳ್ಳಿ
Team Udayavani, Feb 22, 2021, 4:33 PM IST
ವಿಜಯಪುರ: ಮುದ್ದೇಬಿಹಾಳದಲ್ಲಿ ಸಾವಯವ ಕೃಷಿ ತರಬೇತಿ ಕೇಂದ್ರ, ಸಮಗ್ರ ಕೃಷಿ ಸಂಶೋಧನೆ-ತರಬೇತಿ ಕೇಂದ್ರ ಸ್ಥಾಪಿಸಲು ಮಂಗಳವಾರ ಮುದ್ದೇಬಿಹಾಳ ತಾಲೂಕಿಗೆ ಆಗಮಿಸುತ್ತಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗರ ಮನವಿ ಸಲ್ಲಿಸುವುದಾಗಿ ಶಾಸಕರಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.
ಸೋಮವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುದ್ದೇಬಿಹಾಳ ತಾಲೂಕು ಸಮಗ್ರ ನೀರಾವರಿಯಾಗುತ್ತಿದ್ದು, ಸಮಗ್ರ ಅಭಿವೃದ್ದಿಯತ್ತ ದಾಪುಗಾಲು ಹಾಕುತ್ತಿದೆ. ಸರ್ಕಾರಿ ಜಮೀನು ಲಭ್ಯವಿದ್ದು, ಸಾವಯವ ಕೃಷಿಗೆ ಪೂರಕ ವಾತಾವರಣ ಇದೆ. ಸಾವಯವ ಹಾಗೂ ಸಮಗ್ರ ಕೃಷಿ ತರಬೇತಿ ಹಾಗೂ ಸಂಶೋಧನೆ ಕೇಂದ್ರಗಳನ್ನು ತೆರೆಯುವ ಬೇಡಿಕೆ ಜೊತೆಗೆ ಮನವರಿಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.
ಇದನ್ನೂ ಓದಿ:ಕುಡಿವ ನೀರು ಪೂರೈಸಲು ಖಾಸಗಿ ಬೋರ್ವೆಲ್ ಬಳಸಿಕೊಳ್ಳಿ
ಇನ್ನು ವಿಜಯಪುರ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಮುದ್ದೇಬಿಹಾಳಕ್ಕೆ ಸ್ಥಳಾಂತರಿಸಿದರೆ ರೈತರೊಂದಿಗೆ ಹೋರಾಟ ನಡೆಸುವುದಾಗಿ ಶಾಸಕ ದೇವಾನಂದ ಚವ್ಹಾಣ ಹೇಳಿಕೆಗೆ ಪ್ರತಿಕ್ರಿಯಿಸಲಾರೆ. ಸದರಿ ಕೇಂದ್ರ ಮುದ್ದೇಬಿಹಾಳಕ್ಕೆ ಸ್ಥಳಾಂತರಿಸಲು 4-5 ವರ್ಷಗಳ ಹಿಂದೆಯೇ ಆದೇಶವಾಗಿದ್ದು, ಸದರಿ ಆದೇಶ ಇನ್ನೂ ಜೀವಂತವಾಗಿದೆ. ಆದರೆ ಈ ಕೇಂದ್ರ ಸ್ಥಳಾಂತರದಿಂದ ನಮ್ಮ ಭಾಗದ ರೈತರಿಗೆ ಏನೂ ಪ್ರಯೋಜನ ಇಲ್ಲ. ಆದರೆ ನಮ್ಮ ರೈತರ ಕೋರಿಕೆಯಂತೆ ಬೇಡಿಕೆ ಇಡಲಿದ್ದು, ಮುದ್ದೇಬಿಹಾಳಕ್ಕೆ ಕೃಷಿ ವಿಸ್ತರಣಾ ಕೇಂದ್ರ ಸ್ಥಳಾಂತರದ ಸಗತ್ಯದ ಕುರಿತು ವಿಶ ಕೃಷಿ ಸಚಿವರ ಗಮನಕ್ಕೆ ತರುತ್ತೇನೆ. ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್