ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ


Team Udayavani, Apr 26, 2022, 5:45 PM IST

21airport

ವಿಜಯಪುರ: ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮೊದಲ ಹಾಗೂ ಎರಡನೇ ಹಂತದ 220 ಕೋಟಿ ರೂ. ಹಾಗೂ ಮೂರನೇ ಹಂತದ 120 ಕೋಟಿ ರೂ. ಕಾಮಗಾರಿ ಸೇರಿದಂತೆ 340 ಕೋಟಿ ರೂ.ನ ಎಲ್ಲ ಕಾಮಗಾರಿಗಳು ಪ್ರಸಕ್ತ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಹೀಗಾಗಿ ಜಿಲ್ಲೆಯ ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರು ಈ ಬಾರಿಯ ಸಂಕ್ರಾಂತಿಗೆ ವಿಮಾನದಲ್ಲೇ ಐತಿಹಾಸಿಕ ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಮದಭಾವಿ ಬಳಿ ನಿರ್ಮಾಣ ಹಂತದಲ್ಲಿರುವ ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯಪುರ ಎಂದರೆ ಗೋಲಗುಮ್ಮಟ. ಆದರೆ ಇನ್ನು ಗೋಲಗುಮ್ಮಟ ನೋಡಲು ಬರುವಂತೆ ವಿಜಯಪುರ ಜಿಲ್ಲೆಗೆ ಇಲ್ಲಿನ ವಿಮಾನ ನಿಲ್ದಾಣ ನೋಡಲೆಂದೇ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ವಿಶಿಷ್ಟ ವಿನ್ಯಾಸ ಹಾಗೂ ಗರಿಷ್ಠ ಗುಣಮಟ್ಟದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದರು.

2021 ಜನವರಿ 15ರಂದು ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯನ್ನು 220 ಕೋಟಿ ರೂ. ವೆಚ್ಚದಲ್ಲಿ ಎಟಿಆರ್‌-72 ದರ್ಜೆಯ ಎರಡು ಹಂತದ ಯೋಜನೆ ರೂಪಿಸಲಾಗಿತ್ತು. ಬಾಗಲಕೋಟೆ ಭಾಗದಲ್ಲಿ ದ್ರಾಕ್ಷಿ, ಲಿಂಬೆ, ದಳಿಂಬೆ, ಸಪೋಟಾ, ಸೀಬೆ ಹೀಗೆ ವೈವಿಧ್ಯಮಯ ತೋಟಗಾರಿಕೆ ಬೆಳೆ ಬೆಳೆಯುವ ಕಾರಣ ಸರಕು ವಿಮಾನಗಳ ಸರಕು ವಿಮಾನಗಳ ಇಳಿಯುವ-ಹಾರುವ ಸೌಲಭ್ಯ ಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 120 ಕೋಟಿ ರೂ. ಹೆಚ್ಚುವರಿ ಅನುದಾನದಲ್ಲಿ ಏರಬಸ್‌ 320 ದರ್ಜೆಯ ವಿಮಾನ ಇಳಿಯುವಂತೆ ಮೇಲ್ದರ್ಜೆಗೆ ಏರಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಮೇಲ್ದರ್ಜೆಗೆ ಏರಿಸಿದ ಕಾಮಗಾರಿಗೆ ಸಂಬಂಧಿ ಸಿದಂತೆ ಸರ್ಕಾರಕ್ಕೆ 120 ಕೋಟಿ ರೂ. ಹೆಚ್ಚುವರಿ ಅನುದಾನದ ವಿಸ್ತೃತ ವರದಿ ಸಲ್ಲಿಸಿದ್ದು, ಸರ್ಕಾರದ ತಾತ್ವಿಕ ಒಪ್ಪಿಗೆಯೂ ದೊರಕಿದೆ. ಒಟ್ಟು ಬೇಡಿಕೆಯ ಸಮಗ್ರ ಸಮೀಕ್ಷಾ ವರದಿಯ ಅನುಮೋದನೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಆರ್ಥಿಕ ಸಮಸ್ಯೆ ಇಲ್ಲ ಎಂದು ವಿವರ ನೀಡಿದರು.

ಪ್ರವಾಸಿಗರು ಗೋಲಗುಮ್ಮಟ ನೋಡಲು ಬರುವಂತೆ ವಿಜಯಪುರ ವಿಮಾನ ನಿಲ್ದಾಣ ನೋಡಲು ಬರಬೇಕು. ಅಷ್ಟೊಂದು ವಿಶಿಷ್ಟತೆಯ ಆಕರ್ಷಕ ವಿನ್ಯಾಸದೊಂದಿಗೆ ನಿಲ್ದಾಣ ನಿರ್ಮಾಣವಾಗಲಿದೆ. ಬೆಂಗಳೂರು ಮೂಲದ ಐಡೆಕ್‌ ಸಂಸ್ಥೆಗೆ ಕಾಮಗಾರಿಯ ನಿರ್ವಹಣೆ ಹಾಗೂ ಮಾರ್ಗದರ್ಶನದ ಜವಾಬ್ದಾರಿ ನೀಡಲಾಗಿದೆ. ಮೊದಲ ಹಂತದ ಕಾಮಗಾರಿ ವಿಜಯಪುರ ಮೂಲದ ಎಸ್‌.ಎಸ್‌. ಆಲೂರ ಕನಸ್ಟ್ರಕ್ಷನ್‌ ಸಂಸ್ಥೆಗೆ 2021 ಜನವರಿ ತಿಂಗಳಲ್ಲಿ ಕಾಮಗಾರಿ ವಹಿಸಲಾಗಿದೆ ಎಂದು ವಿವರಿಸಿದರು.

ಮೊಲದ ಹಂತದಲ್ಲಿ 95 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ರನ್‌ ವೇ, ಟ್ಯಾಕ್ಸಿ ವೇ, ಎಪ್ರಾನ್‌, ಇಸೋಲೇಷನ್‌ ಬೇ, ಕೂ ರಸ್ತೆ, ಪೆರಿಪೆರಲ್‌ ಸೇರಿದಂಥೆ ಇತರೆ ಕಾಮಗಾರಿಗಳು ಭರದಿಂದ ಸಾಗಿವೆ. ಎರಡನೇ ಹಂತದಲ್ಲಿ ಟರ್ಮಿನಲ್‌ ಕಟ್ಟಡ, ಎಟಿಸಿ ಟವರ್‌, ಸಿಎಫ್‌ಆರ್‌ ಕಟ್ಟಡ, ಕಾಂಪೌಂಡ್‌ ಗೋಡೆ ನಿರ್ಮಾಣ ಕಾಮಗಾರಿಯನ್ನು ಹೈದ್ರಾಬಾದ್‌ ಮೂಲದ ಕೆಎಂವಿ ಕನಸ್ಟ್ರಕ್ಷನ್‌ ಕಂಪನಿಗೆ ವಹಿಸಲಾಗಿದೆ. ಸದರಿ ಎಲ್ಲ ಕಾಮಗಾರಿಗಳು ಭರದಿಂದ ಸಾಗಿವೆ ಎಂದರು. ಉಳಿದಂತೆ ಭದ್ರತಾ ಪರಿಶೀಲನೆ, ವಿಮಾನ ಹಾರಾಟದ ಮಾಹಿತಿ ಫಲಕ ನಿರ್ಮಾಣ, 24×7 ನಿರಂತ ನೀರು ಪೂರೈಕೆ, ವಿದ್ಯುತ್‌ ಹಳೆಯ ಮಾರ್ಗ ಸ್ಥಳಾಂತರ, ನಿರಂತರ ವಿದ್ಯುತ್‌ ಸೌಲಭ್ಯಕ್ಕಾಗಿ 110 ಕೆ.ವಿ. ಸಾಮರ್ಥ್ಯದ ಎರಡು ವಿದ್ಯುತ್‌ ಘಟಕ ನಿರ್ಮಾಣ ಸೇರಿದಂತೆ ಎಲ್ಲ ಕಾಮಗಾರಿಗೆ ಚಾಲನೆ ದೊರತಿದೆ ಎಂದರು.

ವಿಮಾನ ನಿಲ್ದಾಣ ಕಾಮಗಾರಿಗಳು ಮುಗಿಯುತ್ತಲೇ ಕೇಂದ್ರ ಸರ್ಕಾರ ವಿಮಾನ ಹಾರಾಟಕ್ಕೆ ಕ್ರಮ ಕೈಗೊಳ್ಳಲಿದೆ. ಉಡಾನ್‌ ಯೋಜನೆಯಲ್ಲೂ ಜಿಲ್ಲೆಗೆ ಹೆಚ್ಚಿನ ವಿಮಾನ ಹಾರಾಟ ಸೌಲಭ್ಯ ಸಿಗಲಿದೆ ಎಂದರು.

ವಿಜಯಪುರ ಜಿಲ್ಲಾಧಿ ಕಾರಿ ವಿ.ಬಿ. ದಾನಮ್ಮನವರ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರ ಬಿ.ವೈ. ಪವಾರ, ಕಾರ್ಯಪಾಲಕ ಅಭಿಯಂತರ ಎಂ.ಎಸ್‌. ಹಿರೇಗೌಡ್ರ, ರಾಜು ಮಜೂಂದಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.