ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ

ಸಂಕ್ರಾಂತಿ ವೇಳೆ ಬಸವನಾಡಿಗೆ ವಿಮಾನದಲ್ಲೇ ಬರಲಿದ್ದಾರೆ ಪ್ರವಾಸಿಗರು: ಸಚಿವ ಗೋವಿಂದ ಕಾರಜೋಳ

Team Udayavani, Apr 26, 2022, 4:25 PM IST

21

ವಿಜಯಪುರ: ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮೊದಲ ಹಾಗೂ ಎರಡನೇ ಹಂತದ 220 ಕೋಟಿ ರೂ. ಹಾಗೂ ಮೂರನೇ ಹಂತದ 120 ಕೋಟಿ ರೂ. ಕಾಮಗಾರಿ ಸೇರಿದಂತೆ 340 ಕೋಟಿ ರೂ.ನ ಎಲ್ಲ ಕಾಮಗಾರಿಗಳು ಪ್ರಸಕ್ತ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಹೀಗಾಗಿ ಜಿಲ್ಲೆಯ ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರು ಈ ಬಾರಿಯ ಸಂಕ್ರಾಂತಿಗೆ ವಿಮಾನದಲ್ಲೇ ಐತಿಹಾಸಿಕ ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಮದಭಾವಿ ಬಳಿ ನಿರ್ಮಾಣ ಹಂತದಲ್ಲಿರುವ ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯಪುರ ಎಂದರೆ ಗೋಲಗುಮ್ಮಟ. ಆದರೆ ಇನ್ನು ಗೋಲಗುಮ್ಮಟ ನೋಡಲು ಬರುವಂತೆ ವಿಜಯಪುರ ಜಿಲ್ಲೆಗೆ ಇಲ್ಲಿನ ವಿಮಾನ ನಿಲ್ದಾಣ ನೋಡಲೆಂದೇ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ವಿಶಿಷ್ಟ ವಿನ್ಯಾಸ ಹಾಗೂ ಗರಿಷ್ಠ ಗುಣಮಟ್ಟದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದರು.

2021 ಜನವರಿ 15ರಂದು ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯನ್ನು 220 ಕೋಟಿ ರೂ. ವೆಚ್ಚದಲ್ಲಿ ಎಟಿಆರ್‌-72 ದರ್ಜೆಯ ಎರಡು ಹಂತದ ಯೋಜನೆ ರೂಪಿಸಲಾಗಿತ್ತು. ಬಾಗಲಕೋಟೆ ಭಾಗದಲ್ಲಿ ದ್ರಾಕ್ಷಿ, ಲಿಂಬೆ, ದಳಿಂಬೆ, ಸಪೋಟಾ, ಸೀಬೆ ಹೀಗೆ ವೈವಿಧ್ಯಮಯ ತೋಟಗಾರಿಕೆ ಬೆಳೆ ಬೆಳೆಯುವ ಕಾರಣ ಸರಕು ವಿಮಾನಗಳ ಸರಕು ವಿಮಾನಗಳ ಇಳಿಯುವ-ಹಾರುವ ಸೌಲಭ್ಯ ಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 120 ಕೋಟಿ ರೂ. ಹೆಚ್ಚುವರಿ ಅನುದಾನದಲ್ಲಿ ಏರಬಸ್‌ 320 ದರ್ಜೆಯ ವಿಮಾನ ಇಳಿಯುವಂತೆ ಮೇಲ್ದರ್ಜೆಗೆ ಏರಿಸಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಮೇಲ್ದರ್ಜೆಗೆ ಏರಿಸಿದ ಕಾಮಗಾರಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ 120 ಕೋಟಿ ರೂ. ಹೆಚ್ಚುವರಿ ಅನುದಾನದ ವಿಸ್ತೃತ ವರದಿ ಸಲ್ಲಿಸಿದ್ದು, ಸರ್ಕಾರದ ತಾತ್ವಿಕ ಒಪ್ಪಿಗೆಯೂ ದೊರಕಿದೆ. ಒಟ್ಟು ಬೇಡಿಕೆಯ ಸಮಗ್ರ ಸಮೀಕ್ಷಾ ವರದಿಯ ಅನುಮೋದನೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಆರ್ಥಿಕ ಸಮಸ್ಯೆ ಇಲ್ಲ ಎಂದು ವಿವರ ನೀಡಿದರು.

ಪ್ರವಾಸಿಗರು ಗೋಲಗುಮ್ಮಟ ನೋಡಲು ಬರುವಂತೆ ವಿಜಯಪುರ ವಿಮಾನ ನಿಲ್ದಾಣ ನೋಡಲು ಬರಬೇಕು. ಅಷ್ಟೊಂದು ವಿಶಿಷ್ಟತೆಯ ಆಕರ್ಷಕ ವಿನ್ಯಾಸದೊಂದಿಗೆ ನಿಲ್ದಾಣ ನಿರ್ಮಾಣವಾಗಲಿದೆ. ಬೆಂಗಳೂರು ಮೂಲದ ಐಡೆಕ್‌ ಸಂಸ್ಥೆಗೆ ಕಾಮಗಾರಿಯ ನಿರ್ವಹಣೆ ಹಾಗೂ ಮಾರ್ಗದರ್ಶನದ ಜವಾಬ್ದಾರಿ ನೀಡಲಾಗಿದೆ. ಮೊದಲ ಹಂತದ ಕಾಮಗಾರಿ ವಿಜಯಪುರ ಮೂಲದ ಎಸ್‌.ಎಸ್‌. ಆಲೂರ ಕನಸ್ಟ್ರಕ್ಷನ್‌ ಸಂಸ್ಥೆಗೆ 2021 ಜನವರಿ ತಿಂಗಳಲ್ಲಿ ಕಾಮಗಾರಿ ವಹಿಸಲಾಗಿದೆ ಎಂದು ವಿವರಿಸಿದರು.

ಮೊಲದ ಹಂತದಲ್ಲಿ 95 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ರನ್‌ ವೇ, ಟ್ಯಾಕ್ಸಿ ವೇ, ಎಪ್ರಾನ್‌, ಇಸೋಲೇಷನ್‌ ಬೇ, ಕೂ ರಸ್ತೆ, ಪೆರಿಪೆರಲ್‌ ಸೇರಿದಂತೆ ಇತರೆ ಕಾಮಗಾರಿಗಳು ಭರದಿಂದ ಸಾಗಿವೆ. ಎರಡನೇ ಹಂತದಲ್ಲಿ ಟರ್ಮಿನಲ್‌ ಕಟ್ಟಡ, ಎಟಿಸಿ ಟವರ್‌, ಸಿಎಫ್‌ಆರ್‌ ಕಟ್ಟಡ, ಕಾಂಪೌಂಡ್‌ ಗೋಡೆ ನಿರ್ಮಾಣ ಕಾಮಗಾರಿಯನ್ನು ಹೈದ್ರಾಬಾದ್‌ ಮೂಲದ ಕೆಎಂವಿ ಕನಸ್ಟ್ರಕ್ಷನ್‌ ಕಂಪನಿಗೆ ವಹಿಸಲಾಗಿದೆ. ಸದರಿ ಎಲ್ಲ ಕಾಮಗಾರಿಗಳು ಭರದಿಂದ ಸಾಗಿವೆ ಎಂದರು.

ಉಳಿದಂತೆ ಭದ್ರತಾ ಪರಿಶೀಲನೆ, ವಿಮಾನ ಹಾರಾಟದ ಮಾಹಿತಿ ಫಲಕ ನಿರ್ಮಾಣ, 24×7 ನಿರಂತರ ನೀರು ಪೂರೈಕೆ, ವಿದ್ಯುತ್‌ ಹಳೆಯ ಮಾರ್ಗ ಸ್ಥಳಾಂತರ, ನಿರಂತರ ವಿದ್ಯುತ್‌ ಸೌಲಭ್ಯಕ್ಕಾಗಿ 110 ಕೆ.ವಿ. ಸಾಮರ್ಥ್ಯದ ಎರಡು ವಿದ್ಯುತ್‌ ಘಟಕ ನಿರ್ಮಾಣ ಸೇರಿದಂತೆ ಎಲ್ಲ ಕಾಮಗಾರಿಗೆ ಚಾಲನೆ ದೊರತಿದೆ ಎಂದರು.

ವಿಮಾನ ನಿಲ್ದಾಣ ಕಾಮಗಾರಿಗಳು ಮುಗಿಯುತ್ತಲೇ ಕೇಂದ್ರ ಸರ್ಕಾರ ವಿಮಾನ ಹಾರಾಟಕ್ಕೆ ಕ್ರಮ ಕೈಗೊಳ್ಳಲಿದೆ. ಉಡಾನ್‌ ಯೋಜನೆಯಲ್ಲೂ ಜಿಲ್ಲೆಗೆ ಹೆಚ್ಚಿನ ವಿಮಾನ ಹಾರಾಟ ಸೌಲಭ್ಯ ಸಿಗಲಿದೆ ಎಂದರು.

ವಿಜಯಪುರ ಜಿಲ್ಲಾಧಿ ಕಾರಿ ವಿ.ಬಿ. ದಾನಮ್ಮನವರ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರ ಬಿ.ವೈ. ಪವಾರ, ಕಾರ್ಯಪಾಲಕ ಅಭಿಯಂತರ ಎಂ.ಎಸ್‌. ಹಿರೇಗೌಡ್ರ, ರಾಜು ಮಜುಂದಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.