ಆಲಮಟ್ಟಿ: ಟೆಂಡರ್‌ ಪ್ಯಾಕೇಜ್‌ ಪದ್ದತಿಗೆ ವಿರೋಧ


Team Udayavani, Sep 21, 2022, 6:08 PM IST

16-demand

ಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದವತಿಯಿಂದ ಕರೆಯಲಾಗುತ್ತಿರುವ ಕಾಮಗಾರಿಗಳ ಟೆಂಡರ್‌ನ ಪ್ಯಾಕೇಜ್‌ ಪದ್ದತಿ ವಿರೋಧಿಸಿ ಆಲಮಟ್ಟಿ ಕೃಷ್ಣಾತೀರ ಗುತ್ತಿಗೆದಾರರ ಸಂಘದ ವತಿಯಿಂದ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಮಂಗಳವಾರ ಮಧ್ಯಾಹ್ನ ಕೃಷ್ಣಾ ತೀರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಅವರ ನೇತೃತ್ವದಲ್ಲಿ ಕೆಬಿಜೆನ್ನೆಲ್‌ ಮುಖ್ಯ ಅಭಿಯಂತರರ ಕಚೇರಿವರೆಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿದ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ, ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಜನತೆ ಮನೆ-ಮಠ, ಜಮೀನುಗಳನ್ನು ತ್ಯಾಗಮಾಡಿದ್ದಾರೆ. ನಾರಾಯಣಪುರದ ಬಸವಸಾಗರ ಮತ್ತು ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಗಳ ಹಿನ್ನೀರಿಗಾಗಿ ನೂರಾರು ಗ್ರಾಮಗಳ ಜನರು ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾಶ್ರಿತ ಸಂತ್ರಸ್ತರಾಗಿದ್ದಾರೆ. ಅವರಲ್ಲಿ ಕೆಲವರು ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಬೃಹತ್‌ ಮೊತ್ತದ ಒಂದೊಂದು ಪ್ಯಾಕೇಜ್‌ ಟೆಂಡರ್‌ ಕರೆಯುತ್ತಿರುವದರಿಂದ ಈ ಭಾಗದ ಗುತ್ತಿಗೆದಾರರು ನಿರುದ್ಯೋಗಿಗಳಾಗುವಂತಾಗಿದೆ ಎಂದು ಆರೋಪಿಸಿದರು.

ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯದಲ್ಲಿ ಕರೆಯಾಗಿರುವ ಸಿಸಿ ರಸ್ತೆ, ವಿತರಣಾ ಕಾಲುವೆ, ಅಚ್ಚುಕಟ್ಟು ರಸ್ತೆಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಒಂದುಗೂಡಿಸಿ 30ರಿಂದ40ಕೋಟಿ ರೂ.ಗಳ ಮೊತ್ತದಲ್ಲಿ ಟೆಂಡರ್‌ ಕರೆಯುತ್ತಿರುವದರಿಂದ ನೂರಾರು ಗುತ್ತಿಗೆದಾರರು ನಿರುದ್ಯೋಗ ಸಮಸ್ಯೆ ಎದುರಿಸಲಿದ್ದಾರೆ ಎಂದು ಹೇಳಿದರು.

ಬೇರೆ ಬೇರೆ ಅಂದಾಜು ಪತ್ರಿಕೆಗಳನ್ನು ಒಂದುಗೂಡಿಸಿ ಟೆಂಡರ್‌ ಕರೆಯಬಾರದು ಎಂದು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ಅಧಿಕಾರಿಗಳು ಕೆಲವೇ ಜನ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸಲು ಪ್ಯಾಕೇಜ್‌ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೇ ಬೇರೆ ವಿಧದ ಕಾಮಗಾರಿಗಳಿದ್ದರೂ ಅವುಗಳನ್ನು ಒಂದುಗೂಡಿಸಿದ್ದಾರೆ. ವಿತರಣಾ ಕಾಲುವೆಗಳಲ್ಲಿಯೂ ಬೇರೆ ಬೇರೆ ಕಿ.ಮೀ.ಗಳಲ್ಲಿ ಕಾಮಗಾರಿಗಳಿದ್ದರೂ ಅವುಗಳನ್ನೂ ಕೂಡ ಒಂದುಗೂಡಿಸಿದ್ದಾರೆ. ಹೀಗೆ ವ್ಯವಸ್ಥಿತವಾಗಿ ಸಣ್ಣ ಗುತ್ತಿಗೆದಾರರನ್ನು ಕಾಮಗಾರಿಗಳಿಂದ ಮುಕ್ತ ಮಾಡುವ ಹುನ್ನಾರ ಅಡಗಿದೆ ಎಂದು ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು.

ಗುತ್ತಿಗೆದಾರ ಸಿ.ಜಿ.ವಿಜಯಕರ ಮಾತನಾಡಿ, ಇತ್ತೀಚೆಗೆ ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗದಲ್ಲಿ ಕರೆಯಲಾಗಿರುವ ಕಾಮಗಾರಿಗಳಿಗೆ ಹಳೆಯ ದರವನ್ನು ನಿಗದಿಪಡಿಸಲಾಗಿದೆ. ಅದನ್ನು ಹೊಸ ದರಕ್ಕೆ ಮಾರ್ಪಡಿಸಿ ಸಣ್ಣ ಗುತ್ತಿಗೆದಾರರಿಗೂ ಕಾಮಗಾರಿ ನಿರ್ವಹಿಸುವಂತೆ ಟೆಂಡರ್‌ ಕರೆಯಬೇಕು ಎಂದರು.

ಸಂಘದ ಅಧ್ಯಕ್ಷ ಮಲಕಾಜಪ್ಪ ಮೇಟಿ ಮಾತನಾಡಿ, ಕೃಷ್ಣಾ ಭಾಗ್ಯ ಜಲ ನಿಗಮದ ಆಲಮಟ್ಟಿ ವಲಯ ಮುಖ್ಯ ಅಭಿಯಂತರರ ಕಚೇರಿ ವ್ಯಾಪ್ತಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಕರೆಯಲಾಗಿರುವ ಪ್ಯಾಕೇಜ್‌ ಟೆಂಡರ್‌ ಪದ್ದತಿಯನ್ನು ರದ್ದುಗೊಳಿಸಬೇಕು ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ಟೆಂಡರ್‌ ಕರೆಯಬೇಕು. ಈಗ ಕರೆಲಾಗಿರುವ ಪ್ಯಾಕೇಜ್‌ ಟೆಂಡರ್‌ ಪದ್ದತಿಯನ್ನು ಕೈಬಿಡಬೇಕು ಇಲ್ಲದಿದ್ದರೆ ಮುಖ್ಯ ಅಭಿಯಂತರರ ಕಚೇರಿಯ ಆವರಣದಲ್ಲಿ ಅರ್ನಿಷ್ಠ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದು ಎಚ್ಚರಿಕೆ ನೀಡಿದರು.

ಮನವಿಯನ್ನು ಉಪಮುಖ್ಯ ಅಭಿಯಂತರ ಡಿ.ಸುರೇಶ ಸ್ವೀಕರಿಸಿದರು. ರಾಯನಗೌಡ ತಾತರಡ್ಡಿ, ಜೆ.ಟಿ.ಇಲಕಲ್ಲ, ಎಚ್‌.ಟಿ.ಕುರಿ, ಎಸ್‌.ಐ.ಹಿರೇಮಠ, ಬಿ.ಪಿ.ರಾಠೊಡ, ವೈ.ವೈ.ಬಿರಾದಾರ, ಎಸ್‌.ಎಲ್‌.ಲಮಾಣಿ, ಪಿ.ಎಸ್‌ .ಬಯಾಪುುರ, ವೆಂಕಟೇಶ ನಾಯಕ, ಬಿ.ವಿ.ಮೈಲೇಶ್ವರ, ವೈ. ವೈ.ಚಲವಾದಿ ಇದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.