ಜಿಲ್ಲಾ ಗಡಿಯಲ್ಲಿ ಹೆಚ್ಚಿದ ಬಿಗಿ ಭದ್ರತೆ
ಅಗತ್ಯ ಸರಕು ಸಾಗಣೆ ವಾಹನಗಳಿಗಷ್ಟೇ ಪ್ರವೇಶ
Team Udayavani, Apr 11, 2020, 2:41 PM IST
ಆಲಮಟ್ಟಿ: ಯಲಗೂರ ಬಳಿ ನಿರ್ಮಿಸಿರುವ ಜಿಲ್ಲಾ ಪ್ರವೇಶ ಗಡಿಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವ ಪೊಲೀಸರು.
ಆಲಮಟ್ಟಿ: ಮಹಾಮಾರಿ ಕೋವಿಡ್ ವೈರಸ್ ತಡೆಗಟ್ಟಲು ನಿರ್ಮಿಸಿರುವ ಜಿಲ್ಲಾ ಗಡಿ ಚೆಕ್ ಪೋಸ್ಟ್ನಲ್ಲಿ ಅತ್ಯವಶ್ಯ ಸಾಮಗ್ರಿಗಳ ಸಾಗಣೆ ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ವಾಹನಗಳು ಒಳಬರದಂತೆ ನಿರ್ಬಂಧಿಸಲಾಗಿತ್ತು.
ಕೋವಿಡ್ ತಡೆಗೆ ಕೇಂದ್ರ ಹಾಗೂ ರಾಜ್ಯಸರ್ಕಾರದ ನಿರ್ದೇಶನಗಳಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಯಲಗೂರ ಗ್ರಾಮದ ಬಳಿಯಲ್ಲಿ ಕೃಷ್ಣಾನದಿ ಪಕ್ಕದಲ್ಲಿ ಜಿಲ್ಲಾಗಡಿ ಚೆಕ್ಪೋಸ್ಟ್ ಹಾಕಲಾಗಿದ್ದು, ಇಲ್ಲಿ ಆಗಮಿಸುತ್ತಿರುವ ಪ್ರಯಾಣಿಕರ ಹಾಗೂ ಅಗತ್ಯ ಸರಕು ಸಾಗಣೆಗಳ ವಾಹನಗಳನ್ನು ಜಿಲ್ಲೆಯ ಗಡಿಪ್ರವೇಶಿಸದಂತೆ ಬೇಸಿಗೆಯ ಬಿರುಬಿಸಿಲಿನ ನಡುವೆಯೂ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.
ತಲೆನೋವಾದ ಆಸ್ಪತ್ರೆ ಚೀಟಿ: ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ, ಬಸವನಬಾಗೇವಾಡಿ ತಾಲೂಕಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಇದರಿಂದ ಬಾಗಲಕೋಟೆಗೆ ಹೋಗುವವರು ಮತ್ತು ಚಿಕಿತ್ಸೆ ಪಡೆದು ಮರಳಿ ಬರುವವರನ್ನು ನಿರ್ಬಂ ಧಿಸಿದ್ದರೂ ಕೂಡ ತುರ್ತು ಸೇವೆಯ ಆಸ್ಪತ್ರೆಯ ಚೀಟಿಗಳನ್ನು ತೋರಿಸುತ್ತಾರೆ. ಈ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳು ಆ ಕುರಿತು ಕೂಲಂಕುಶವಾಗಿ ಪರಿಶೀಲಿಸಿದ ನಂತರ ಅವಶ್ಯವೆನಿಸಿದರೆ ಮಾತ್ರ ಅವರಿಗೆ ಅವಕಾಶ ನೀಡುತ್ತಾರೆ ಇಲ್ಲದಿದ್ದರೆ ಅವರನ್ನು ಮರಳಿ ಕಳಿಸುವುದು ನಿತ್ಯವೂ ನಡೆಯುತ್ತಿದೆ.
ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಜಿಲ್ಲಾಕೇಂದ್ರದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ
ನೀಡಲಾಗುತ್ತಿದ್ದರೂ ಕೂಡ ಬಾಗಲಕೋಟೆಗೆ ಹೋಗುತ್ತಿರುವುದು ಕೊರೊನಾ ಆತಂಕ ಹೆಚ್ಚಿಸಿದೆ. ಜಿಲ್ಲಾಡಳಿತ ಕೈಗೊಂಡ ಕಾರ್ಯ ಯಶಸ್ವಿಯಾಗಲು ನಾಗರಿಕರು ಆಸ್ಪತ್ರೆಯ ಅವಶ್ಯಕತೆಯಿದ್ದಲ್ಲಿ ಬಾಗಲಕೋಟೆಗೆ ಹೋಗದೇ ವಿಜಯಪುರಕ್ಕೆ ತೆರಳಬೇಕು ಎಂದು ಸ್ಥಳದಲ್ಲಿರುವ ಅಧಿಕಾರಿಯೊಬ್ಬರು ತಿಳಿಸಿದರು.
ಸಿಂದಗಿ ತಾಲೂಕಿನ ಗ್ರಾಮದಲ್ಲಿ ಸಂಬಂಧಿಕರೊಬ್ಬರು ಮರಣ ಹೊಂದಿದ್ದು, ಅವರ ಅಂತ್ಯಸಂಸ್ಕಾರಕ್ಕೆ ಹೋಗಬೇಕು ಎಂದು ಬಾದಾಮಿಯಿಂದ ಬೈಕಿನಲ್ಲಿ ಆಗಮಿಸಿದ್ದ ದಂಪತಿ ಮನವೊಲಿಸಿ ಮರಳಿ ಕಳಿಸಿದ ಪ್ರಸಂಗವೂ ನಡೆಯಿತು. ಚೆಕ್ಪೋಸ್ಟ್ಗಳಲ್ಲಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್