ಸ್ಯಾನಿಟೈಜರ್ ಸುರಂಗಮಾರ್ಗಕ್ಕೆ ಚಾಲನೆ
Team Udayavani, Apr 17, 2020, 12:22 PM IST
ಮುಖ್ಯಅಭಿಯಂತರರ ಕಚೇರಿ ಪ್ರವೇಶದ್ವಾರ ಬಳಿ ಹಾಕಲಾಗಿರುವ ಸ್ಯಾನಿಟೈಜರ್ ಸುರಂಗ ಮಾರ್ಗಕ್ಕೆ ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಚಾಲನೆ ನೀಡಿದರು.
ಆಲಮಟ್ಟಿ: ಮಾರಕ ರೋಗ ಕೋವಿಡ್ -19 ನಿರ್ಮೂಲನೆಯಾಗಬೇಕಾದರೆ ಸಾಮಾಜಿಕ ಅಂತರ ಹಾಗೂ ಶುಚಿತ್ವ ಅತೀ ಮುಖ್ಯ ಎಂದು ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ಹೇಳಿದರು. ಬುಧವಾರ ಮುಂಜಾನೆ ಆಲಮಟ್ಟಿಯ ಕೃಷ್ಣಾಭಾಗ್ಯ ಜಲನಿಗಮದ ಮುಖ್ಯಅಭಿಯಂತರರ ಕಚೇರಿಯ ಪ್ರವೇಶ ದ್ವಾರದ ಬಳಿ ಹಾಕಲಾಗಿರುವ ಸ್ಯಾನಿಟೈಜರ್ ಸುರಂಗಮಾರ್ಗ ಉದ್ಘಾಟಿಸಿ ಮಾತನಾಡಿದರು.
ಸ್ಯಾನಿಟೈಜರ್ ಸುರಂಗಮಾರ್ಗ ನಿರ್ಮಾಣ ಮಾಡಿರುವುದರಿಂದ ನೌಕರರು ಸಾಮಾಜಿಕ ಅಂತರ ಕಾಪಾಡಿಕೊಂಡು ಸರ್ಕಾರದ ಸೂಚನೆಗಳನ್ನು ಪಾಲಿಸಿಕೊಂಡು ಕರ್ತವ್ಯನಿರ್ವಹಿಸಬಹುದಾಗಿದೆ. ನೀರು ಅತ್ಯವಶ್ಯ ವಸ್ತುಗಳಲ್ಲಿ ಒಂದಾಗಿದೆ ಈ ಹಿನ್ನೆಲೆಯಲ್ಲಿ ಕರ್ತವ್ಯದೊಂದಿಗೆ ಜೀವ ಹಾಗೂ ಜೀವನವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದೆ ಎಂದರು.
ಅಣೆಕಟ್ಟು ವೃತ್ತ ಅಧಿಧೀಕ್ಷಕ ಅಭಿಯಂತರ ಡಿ.ಬಸವರಾಜು ಹಾಗೂ ರಾಜ್ಯಸರ್ಕಾರಿ ನೌಕರರ ಸಂಘದ ಯೋಜನಾಶಾಖೆ ಅಧ್ಯಕ್ಷ ಎಸ್.ಬಿ.ದಳವಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ