ಕೆರೆ ತುಂಬಿಸಲು ಬೆಳ್ಳುಬ್ಬಿ ಮನವಿ
Team Udayavani, Apr 25, 2020, 4:35 PM IST
ಆಲಮಟ್ಟಿ: ಮು.ಏ. ನೀರಾವರಿ ಯೋಜನೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿಯವರು ಮುಖ್ಯ ಅಭಿಯಂತರಗೆ ಮನವಿ ಸಲ್ಲಿಸಿದರು.
ಆಲಮಟ್ಟಿ: ಮುಳವಾಡ ಏತ ನೀರಾವರಿ ಯೋಜನೆ ಕಾಲುವೆಯಿಂದ ಉಕುಮನಾಳ ಬಳಿ ಡೋಣಿ ನದಿಗೆ ನೀರು ಹರಿಸಬೇಕು ಹಾಗೂ ಮು.ಏ.ನೀ. ಯೋ.ಹಂತ-1 ಹಾಗೂ 2ರಲ್ಲಿ ಬರುವ ಕಾಲುವೆಗಳಿಂದ ಕೆರೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮುಖ್ಯ ಅಭಿಯಂತರಗೆ ಎರಡು ಪ್ರತ್ಯೇಕ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಯುಕೆಪಿ ಅನುಷ್ಠಾನಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಜನರು ಅಪಾರ ತ್ಯಾಗ ಮಾಡಿದ್ದಾರೆ. ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಆದ್ದರಿಂದ ಏ. 27ರೊಳಗಾಗಿ ಮು.ಏ.ನೀ.ಯೋ. ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳದಿದ್ದರೆ ಕೃಭಾಜನಿನಿ ಮುಖ್ಯ ಅಭಿಯಂತರರ ಕಚೇರಿ ಎದುರಿನಲ್ಲಿ ಜಿಪಂ ಮತ್ತು ತಾಪಂ ಸದಸ್ಯರನ್ನೊಳಗೊಂಡಂತೆ ರೈತರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಡೋಣಿ ನದಿಗೆ ನೀರು ಹರಿಸಿ:ಮುಳವಾಡ ಏತ ನೀರಾವರಿ ಯೋಜನೆಯ ವಿಜಯಪುರ ಮುಖ್ಯ ಕಾಲುವೆಯು ಉಕುಮನಾಳ ಗ್ರಾಮದ ಹತ್ತಿರ ಡೋಣ ನದಿಯನ್ನು ಸಂದಿಸುತ್ತದೆ. ಆ ಸ್ಥಳದಿಂದ ಡೋಣಿ ನದಿಗೆ ನೀರು ಹರಿಸುವುದರಿಂದ ಉಕುಮನಾಳ, ಯಂಭತ್ನಾಳ, ಡೋಣೂರ, ಉಕ್ಕಲಿ, ಉತ್ನಾಳ, ನಾಗರಾಳ, ಬೊಮ್ಮನಳ್ಳಿ, ನಂದ್ಯಾಳ, ಮುಳ್ಳಾಳ, ನೆಗಿನಾಳ,ಮಾರ್ಕಬ್ಬಿನಹಳ್ಳಿ, ಸಾತಿಹಾಳ ಸೇರಿದಂತೆ ಸುಮಾರು 25 ಗ್ರಾಮಗಳಿಗೆ ಕುಡಿಯುವ ನೀರು ದೊರಕಲಿದೆ ಎಂದು ಬೆಳ್ಳುಬ್ಬಿ ಹೇಳಿದರು.
ಜಿಪಂ ಸದಸ್ಯ ಸಂತೋಷ ನಾಯಕ, ಪ್ರವೀಣ ಪವಾರ, ಗುರುಸಂಗಪ್ಪ ಯರಂತೇಲಿ, ಬಸು ಸಿದಗೊಂಡ, ಬಸವರಾಜ ಸಾತಿಹಾಳ, ಕರವೀರ ಮಡಿವಾಳರ, ಅಂದಾನಿ ತೋಳಮಟ್ಟಿ, ಅಮರ ಮಡಿವಾಳರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ