ಗ್ರಾಹಕರಿಂದ ಸಹಿ ಪಡೆದು ಪಡಿತರ ವಿತರಿಸಲು ನಿರಾಸಕ್ತಿ


Team Udayavani, Apr 8, 2020, 3:16 PM IST

08-April-23

ಆಲಮಟ್ಟಿ: ಪಡಿತರ ಪಡೆಯಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರದಿಯಲ್ಲಿ ನಿಂತಿರುವ ನಾಗರಿಕರು.

ಆಲಮಟ್ಟಿ: ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಮಹಿಳೆಯರು, ವಯೋವೃದ್ಧರು ಪರದಾಡುವಂತಾಗಿದ್ದು, ಸರ್ಕಾರ ಬಯೋಮೆಟ್ರಿಕ್‌ ಹಾಗೂ ಒಟಿಪಿ ಕ್ರಮಗಳನ್ನು ನಿಲ್ಲಿಸಿ ಗ್ರಾಹಕರ ಸಹಿ ಪಡೆದು ಸರ್ಕಾರದ ನಿಯಮಗಳು ಉಲ್ಲಂಘನೆಯಾಗದಂತೆ ಹಂಚಿಕೆ ಮಾಡಲು ಆದೇಶಿಸಿದ್ದರೂ ಸ್ಥಳೀಯ ಅನ್ನದಾನೇಶ್ವರಿ ನ್ಯಾಯಬೆಲೆ ಅಂಗಡಿಯಲ್ಲಿ ಮಾತ್ರ ಒಟಿಪಿ ಬರದಿದ್ದರೇ ಪಡಿತರ ಇಲ್ಲ ಎನ್ನುವಂತಾಗಿದೆ.

ಆಲಮಟ್ಟಿ ಪಟ್ಟಣಕೇಂದ್ರವಾಗಲು ಎಲ್ಲ ಅರ್ಹತೆ ಹೊಂದಿ ನಾಗಾಲೋಟದಲ್ಲಿ ಬೆಳೆಯುತ್ತಿದೆ. ಇಲ್ಲಿನ ನಾಗರಿಕರಿಗೆ ಪಡಿತರ ಧಾನ್ಯ ವಿತರಣೆ ಮಾಡಲು ಕಳೆದ ಐದು ದಿನಗಳಿಂದ ಒಟಿಪಿ ಮಾದರಿ ಅನುಸರಿಸಿ ಒಂದೇ ಗಣಕ ಯಂತ್ರ ಬಳಸಿಕೊಂಡು ಪಡಿತರ ವಿತರಣೆಗೆ ಕ್ರಮಕೈಗೊಂಡಿರುವುದರಿಂದ ಒಂದೆರಡು ಪಡಿತರ ಚೀಟಿಯವರಿಗೆ ವಿತರಣೆ ಮಾಡುವಷ್ಟರಲ್ಲಿ ಸರ್ವರ್‌ ಡೌನ್‌ ಆಗುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಐದು ದಿನಗಳಿಂದ ಪಡಿತರ ವಿತರಣೆ ಮಾಡಲಾಗುತ್ತಿದೆಯಾದರೂ ಅರ್ಧದಷ್ಟೂ ಜನರಿಗೂ ಇನ್ನೂ ಪಡಿತರ ಸಿಕ್ಕಿಲ್ಲ. ಇತ್ತ ಸರ್ಕಾರದ ಆದೇಶವನ್ನೂ ಪಾಲಿಸದೇ ಅತ್ತ ಹೆಚ್ಚುವರಿ ಗಣಕಯಂತ್ರಗಳನ್ನೂ ಬಳಸದೇ ಇರುವುದರಿಂದ ಪಡಿತರ ಆಹಾರ ಧಾನ್ಯ ಪಡೆಯಲು ದಿನಬೆಳಗಾದರೆ ಪಡಿತರಕ್ಕಾಗಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ಮಾರಕ ರೋಗ ಕರೋನಾ ಹರಡುವ ಭೀತಿ ಒಂದೆಡೆಯಾದರೆ ಮನೆಯಲ್ಲಿ ಚಿಕ್ಕಮಕ್ಕಳನ್ನು ಬಿಟ್ಟು ಬಂದು ಸಾಲಿನಲ್ಲಿ ನಿಲ್ಲುತ್ತಿರುವ ಮಹಿಳೆಯರು ಹಾಗೂ ವೃದ್ಧರಿಗೆ ತೀವ್ರತೊಂದರೆಯಾಗುತ್ತದೆ. ತಾಪಂ ಸದಸ್ಯ ಮಲ್ಲು ರಾಠೊಡ, ಗ್ರಾಪಂ ಅಧ್ಯಕ್ಷೆ ಸೈದಮ್ಮಾ ಬೆಣ್ಣಿ ಹಾಗೂ ಆಲಮಟ್ಟಿ ಪೊಲೀಸ್‌ ಠಾಣೆಯ ಮುಖ್ಯ ಪೇದೆ ಎಸ್‌ .ಜಿ.ಲಾಡ್‌ ಹಾಗೂ ಸಿಬ್ಬಂದಿ ನ್ಯಾಯಬೆಲೆ ಅಂಗಡಿ ಎದುರು ಠಿಕಾಣಿ ಹೂಡಿ ಪಡಿತರ ಪಡೆಯಲು ಬರುವ ನಾಗರಿಕರಿಗೆ ಸಾಮಾಜಿಕ ಅಂತರ ಕಾಪಾಡಲು ಹಾಗೂ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕಿದೆ.

ಸರ್ಕಾರದ ಆದೇಶ ಗೌರವಿಸುತ್ತೇವೆ. ಆದರೆ, ಕೊರೊನಾ ಪರಿಣಾಮ ಪುಸ್ತಕದಲ್ಲಿ ಪಡಿತರ ಗ್ರಾಹಕರ ಸಹಿ ಪಡೆಯಬೇಕಾದರೆ ಒಂದೇ ಪೆನ್ನನ್ನು ಹಲವರು ಉಪಯೋಗಿಸುತ್ತಾರೆ, ಅಲ್ಲದೇ ಹೆಬ್ಬೆಟ್ಟು ಮುದ್ರೆ ಹಾಕಬೇಕಾದರೆ ಒಂದೇ ಪ್ಯಾಡ್‌ ಬಳಸಬೇಕಾಗುತ್ತದೆ. ಅದರಿಂದಾಗಿ ಸೋಂಕು ಹರಡಬಾರದು ಎಂದು ಒಟಿಪಿ ಮಾದರಿ ಅನುಸರಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ.
ಶಿವಾನಂದ ಟುಬಾಕಿ,
ಆಪರೇಟರ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.