ಆಲಮಟ್ಟಿ ಜಲಾಶಯದ ಒಳ ಹರಿವು ಹೆಚ್ಚಳ : ಕೃಷ್ಣಾ ನದಿಗೆ 3.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
Team Udayavani, Jul 24, 2021, 12:59 PM IST
ವಿಜಯಪುರ: ಭಾರೀ ಮಳೆಯ ಪರಿಣಾಮ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಲೇ ಇದ್ದು, ಕೃಷ್ಣಾ ನದಿಗೆ 3.50 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಶನಿವಾರ ಬೆಳಿಗ್ಗೆ ಸುಮಾರು 2.50 ಲಕ್ಷ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯದ ಗರಿಷ್ಠ ಮಟ್ಟ 519.60 ಮೀ. ಇದ್ದು, ಇಂದಿನ ಮಟ್ಟ : 516.79ಮೀ. ನೀರಿನ ಸಂಗ್ರಹವಿದೆ.
ಗರಿಷ್ಠ 123.081 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 81.898 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಹೀಗಾಗಿ ಶಾಸ್ತ್ರೀ ಜಲಾಶಯದ ಎಲ್ಲ 26 ಗೇಟ್ ಗಳನ್ನು ತೆರೆದು 3.50 ಲಕ್ಷ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರ್ಮಿಸಿರುವ ಕೊಯ್ನಾ ಸೇರಿದಂತೆ ಬಹುತೇಕ ಜಲಾಶಯಗಳು ಭರ್ತಿಯಾಗಿ, ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಪರಿಣಾಮ ನದಿ ತೀರದ ಜಮೀನುಗಳಿಗೆ ನೀರು ನುಗ್ಗಿದ್ದು, ಬೆಳೆ ಹಾಳಾಗುವ ಭೀತಿ ರೈತರಲ್ಲಿ ಶುರುವಾಗಿದೆ.
ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದಿಂದ ಕೃಷ್ಣಾ ನದಿ ಮೂಲಕ ಕೆಳ ಭಾಗದಲ್ಲಿ ರಾಯಚೂರು-ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯಕ್ಕೆ ಹರಿಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ