ಬರಿದಾಗುತ್ತಿದೆ ಆಲಮಟ್ಟಿ ಜಲಾಶಯ!


Team Udayavani, Nov 10, 2018, 12:38 PM IST

vij-4.jpg

ಆಲಮಟ್ಟಿ: ಬರಗಾಲದಿಂದ ತತ್ತರಿಸಿದ್ದ ಅಖಂಡ ವಿಜಯಪುರ ಜಿಲ್ಲೆಯ ಬವಣೆ ನೀಗಿಸಲು ನಿರ್ಮಿಸಲಾಗಿರುವ ಜಲಾಶಯದಲ್ಲಿ ನೀರಿನ ಸಂಗ್ರಹದಲ್ಲಿ ವ್ಯಾಪಕ ಇಳಿಕೆಯಾಗುತ್ತಿರುವುದರಿಂದ ಹಿಂಗಾರು ಹಂಗಾಮಿಗೆ ನೀರು ಬರುವುದೇ ಎಂದು ರೈತರು ಆತಂಕಕ್ಕೀಡಾಗಿದ್ದಾರೆ.

ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಜಲಾಶಯದಿಂದ ನದಿ ಪಾತ್ರಕ್ಕೆ ನಿತ್ಯ 1.2 ಟಿಎಂಸಿ ನೀರನ್ನು ನದಿ ಪಾತ್ರಕ್ಕೆ ಬಿಡುತ್ತಿರುವುದಲ್ಲದೇ ಮುಂಗಾರು ಹಂಗಾಮಿನ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ನ.14ರಂದು ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುತ್ತಿದೆ. ಹಿಂಗಾರು ಹಂಗಾಮಿಗೆ ರೈತರ ಕಾಲುವೆಗಳಿಗೆ ನೀರು ಹರಿಸುವುದು ಅನುಮಾನವಾಗಿರುವುದರಿಂದ ಬರಗಾಲದ ಬವಣೆಯಿಂದ ಬಳಲುತ್ತಿರುವ ರೈತ ವರ್ಗಕ್ಕೆ ದಿಕ್ಕು ತೋಚದಂತಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ ನಿರ್ಧಾರಕ್ಕೆ ಕಾಯುವಂತಾಗಿದೆ.

ಆಲಮಟ್ಟಿ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆ ಹಾಗೂ ಕೆರೆಗಳನ್ನು ತುಂಬಿಸಲು ಮತ್ತು ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆ ಜನತೆಯ ಕುಡಿಯುವ ನೀರಿಗಾಗಿ ಸೇರಿ ಸುಮಾರು 32 ಟಿಎಂಸಿ ನೀರು ಬೇಕಾಗುತ್ತದೆ. ಆದರೆ 123 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯ ಮಳೆಗಾಲದಲ್ಲಿ ಸಂಪೂರ್ಣ ತುಂಬಿದ್ದರೂ ಹಿಂಗಾರು ಹಂಗಾಮಿಗೆ ನೀರಿಲ್ಲದಂತಾಗಿದೆ. 519.600 ಮೀ. ಗರಿಷ್ಠ ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಲ್ಲಿ ಗುರುವಾರ 515.690 ಮೀ. ಎತ್ತರವಾಗಿ 69.765 ಟಿಎಂಸಿ ಅಡಿ ಸಂಗ್ರಹವಾಗಿತ್ತು.

ಕಳೆದ ವರ್ಷ ಇದೇ ದಿನ 519.540 ಮೀ. ಎತ್ತರದಲ್ಲಿ 121.957 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರಿಂದ ಹಿಂಗಾರು ಹಂಗಾಮಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡೂ ಜಲಾಶಯಗಳ ವ್ಯಾಪ್ತಿಯ ರೈತರ ಜಮೀನಿಗೆ ಸಂಪೂರ್ಣ ನೀರುಣಿಸಲಾಗಿತ್ತು.

ಹಿಂಗಾರಿಗೆ 9 ಟಿಎಂಸಿ ನೀರು ಸಾಕು: ಆಲಮಟ್ಟಿ ಜಲಾಶಯ ನಿರ್ಮಾಣಕ್ಕಾಗಿ ಲಕ್ಷಾಂತರ ಕುಟುಂಬಗಳು ನೂರಾರು ಗ್ರಾಮಗಳನ್ನು ಕಳೆದುಕೊಂಡು ಸಾವಿರಾರು ಎಕರೆ ಜಮೀನನ್ನು ತ್ಯಾಗ ಮಾಡಿವೆ. ಅವಳಿ ಜಿಲ್ಲೆ ಕಾಲುವೆಗಳಾದ ಆಲಮಟ್ಟಿ ಎಡದಂಡೆ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆ ಕಾಲುವೆಗಳಿಗೆ 300 ಕ್ಯೂಸೆಕ್‌, ಆಲಮಟ್ಟಿ ಬಲದಂಡೆ ಮತ್ತು ತಿಮ್ಮಾಪುರ ಏತ ನೀರಾವರಿ ಯೋಜನೆಯ ಡಿಸಿ-1 ಹಾಗೂ ಡಿಸಿ-2 ಸೇರಿ 350 ಕ್ಯೂಸೆಕ್‌, ಮುಳವಾಡ ಏತ ನೀರಾವರಿ ಯೋಜನೆಯ ಪೂರ್ವ ಮತ್ತು ಪಶ್ಚಿಮ ಕಾಲುವೆಗಳಿಗೆ 300 ಕ್ಯೂಸೆಕ್‌ ಸೇರಿ ಒಟ್ಟು 950 ಕ್ಯೂಸೆಕ್‌ ನೀರು ಸಾಕಾಗುತ್ತದೆ. 

ಇನ್ನು ಕೆರೆಗಳನ್ನು ತುಂಬಲು ನಿತ್ಯ 80 ಕ್ಯೂಸೆಕ್‌ ನೀರು ಸಾಕು, ಹಿಂಗಾರು ಹಂಗಾಮಿನಲ್ಲಿ 8 ದಿನ ಚಾಲು ಹಾಗೂ 7 ದಿನ ಬಂದ್‌ ವಾರಾಬಂಧಿ ಪದ್ಧತಿ ಅನುಸರಿಸಿ ಅವಳಿ ಜಿಲ್ಲೆ ರೈತರ ಜಮೀನಿಗೆ ನೀರು ಹರಿಸಿದರೆ ಮಾ.15ರವರೆಗೆ ನೀರನ್ನು ಹರಿಸಬಹುದು. ಇದರಿಂದ ಒಟ್ಟು 4.5 ಟಿಎಂಸಿ ನೀರು ಮುಂಗಾರು ಹಂಗಾಮಿನಲ್ಲಾಗಿದ್ದರೆ ಹಿಂಗಾರು ಹಂಗಾಮಿನಲ್ಲಿ 9 ಟಿಎಂಸಿ ನೀರನ್ನು ಬಳಸಿಕೊಂಡು ಕಾಲುವೆಗಳಿಗೆ ನೀರು ಹರಿಸಬಹುದು ಎಂದು ಕೃಷ್ಣಾ ಭಾಗ್ಯಜಲ ನಿಗಮದ ಮೂಲಗಳು ತಿಳಿಸಿವೆ.

ದೀಪದ ಕೆಳಗೆ ಕತ್ತಲು: ಆಲಮಟ್ಟಿ ಜಲಾಶಯ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಇದರಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಕಾಲುವೆಗಳಿಗೆ ಒಂದು ವರ್ಷಕ್ಕೆ ಸರಾಸರಿ 16 ಟಿಎಂಸಿ ನೀರಿನಲ್ಲಿ ರೈತರ ಕಾಲುವೆಗಳಿಗೆ ಹಾಗೂ ಕೆರೆ ತುಂಬುವ ಯೋಜನೆಗೆ ನೀರನ್ನು ಹರಿಸಬಹುದಾಗಿದೆಯಾದರೂ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಕಣ್ಣಾ ಮುಚ್ಚಾಲೆಯಾಟದಿಂದ ಅವಳಿ ಜಿಲ್ಲೆ
ರೈತರು ನರಳುವಂತಾಗಿದೆ.

ಈಗ ಲಭ್ಯವಿರುವ 69.765 ಟಿಎಂಸಿ ನೀರಿನಲ್ಲಿ ಸುಮಾರು 5 ಟಿಎಂಸಿ ಭಾಷ್ಪೀಕರಣ ಹೊಂದುತ್ತದೆ. 17.620 ಟಿಎಂಸಿ ನೀರು ಜಲಚರಗಳಿಗಾಗಿ ಮೀಸಲಿಡಬೇಕು. ಇನ್ನುಳಿದ 47.145 ಟಿಎಂಸಿ ನೀರಿನಲ್ಲಿ 2 ಟಿಎಂಸಿ ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರ, ಇನ್ನೂ 5 ದಿನ ರೈತರ ಜಮೀನಿಗೆ ನೀರುಣಿಸಲು ಕೊಡಬೇಕಾದ ನೀರು 0.1,46 ಟಿಎಂಸಿ ಹಾಗೂ ನದಿ ಪಾತ್ರದ ವಿಜಯಪುರ ನಗರ, ಕೊಲ್ಹಾರ-ವಿಜಯಪುರ ಬಹುಹಳ್ಳಿ ಕುಡಿಯುವ ನೀರಿನ ಘಟಕ, ಬಸವನಬಾಗೇವಾಡಿ ಬಹುಹಳ್ಳಿ ಕುಡಿಯುವ ನೀರಿನ ಘಟಕ, ಹುನಗುಂದ, ಇಳಕಲ್ಲ, ಕುಷ್ಟಗಿ, ಗುಳೇದಗುಡ್ಡ, ಕೊಪ್ಪಳ, ಬಾಗಲಕೋಟೆ ಪಟ್ಟಣ ಹಾಗೂ ಇತರ ಗ್ರಾಮೀಣ, ಬೀಳಗಿ, ತುಂಬರಮಟ್ಟಿ, ಬಾದಾಮಿ ತಾಲೂಕು ಬಹುಹಳ್ಳಿ ಕುಡಿಯುವ ನೀರಿನ ಘಟಕಗಳಿಂದ ನೂರಾರು ಗ್ರಾಮೀಣ ಭಾಗಕ್ಕೆ ಅಂದಾಜು 2 ಟಿಎಂಸಿಯಷ್ಟು ನೀರು ಪೂರೈಸಲಾಗುತ್ತಿದೆ. ಒಟ್ಟಾರೆ 7 ಟಿಎಂಸಿ ಅಡಿ ನೀರನ್ನು ಬಳಸಿಕೊಂಡರೂ ಇನ್ನುಳಿಯುವ 40 ಟಿಎಂಸಿ ಅಡಿ ನೀರಿನಲ್ಲಿ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ 65 ಸಾವಿರ ಹೆಕ್ಟೇರ್‌ ಪ್ರದೇಶವನ್ನು  ನೀರಾವರಿಗೊಳಪಡಿಸಿ ಉಳಿದ ನೀರನ್ನೂ ನಾರಾಯಣಪುರ ಜಲಾಶಯಕ್ಕೆ ಬಿಡಬಹುದಾಗಿದೆ.

ಶಾಸ್ತ್ರಿ ಜಲಾಶಯಕ್ಕೆ ಗೇಟ್‌ ಅಳವಡಿಸಲು ಪ್ರಸ್ತಾವನೆ
ವಿಜಯಪುರ: ಆಲಮಟ್ಟಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 524.256 ಮೀ.ವರೆಗೆ ಗೇಟ್‌ ಅಳವಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಶನಿವಾರ ನ. 10ರಂದು ನಡೆಯಲಿರುವ ಕೃಷ್ಣಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ಸಮಿತಿ ಅಧ್ಯಕ್ಷರೂ ಆಗಿರುವ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ಜಿಲ್ಲೆಯ ಕುಡಿಯುವ ನೀರು ಹಾಗೂ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಾಸ್ತ್ರಿ ಜಲಾಶಯಕ್ಕೆ 524.256 ಮೀ.ಗೆ ಗೇಟ್‌ ಅಳವಡಿಸಿ ನೀರು ಸಂಗ್ರಹಿಸಿಕೊಳ್ಳುವುದೊಂದೇ ಸುಲಭ ಮಾರ್ಗ. ಈ ಬಗ್ಗೆ ಅವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಸರಕಾರದ ಗಮನ ಸೆಳೆಯಬೇಕಿದೆ. ಇದಕ್ಕಾಗಿಯೇ ಶನಿವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಯೋಜಿಸಲಾಗಿದೆ ಎಂದರು.

ಈಗಾಗಲೇ ಆಲಮಟ್ಟಿಯ ಶಾಸ್ತ್ರೀ ಜಲಾಶಯದಲ್ಲಿ ಸಂಗ್ರಹಿತ ಅರ್ಧ ಪ್ರಮಾಣದ ನೀರು ಬರಿದಾಗಿದೆ. ನಾರಾಯಣಪುರ ಬಸವಸಾಗರಕ್ಕೆ ನೀರು ಹರಿಸಿರುವುದು ಇದಕ್ಕೆ ಕಾರಣವಲ್ಲ. ಏಕೆಂದರೆ ಕೃಷ್ಣಾ ಬಿ ಸ್ಕೀಂ ಯೋಜನೆಯಲ್ಲಿ ಹಂಚಿಕೆಯಾದಂತೆ ನೀರು ಹರಿಸಲಾಗುತ್ತಿದೆ. ಇದರಿಂದ ಜಲಾಶಯ ಬರಿದಾಗಿದೆ ಎಂಬುದು ಸರಿಯಾದುದಲ್ಲ. ಅಲ್ಲದೇ ರೈತರು ಏಕ ರೀತಿಯ ಬೆಳೆ ಪದ್ಧತಿಗೆ ಅಂಡಿಕೊಂಡಿರುವುದು, ಹಿಂಗಾರು ಮಳೆ ಬಾರದಿರುವುದುದು ಹೀಗೆ ಹಲವು ಕಾರಣಗಳಿವೆ ಎಂದರು. 

ಆಲಮಟ್ಟಿಯ ಶಾಸ್ತ್ರಿ ಜಲಾಶಯಕ್ಕೆ 524.256 ಮೀ.ವರೆಗೆ ಗೇಟ್‌ ಅಳವಡಿಸಲು ಭೂಸ್ವಾಧೀನ, ಪುನರ್ವಸತಿ ಸೇರಿದಂತೆ ಸುಮಾರು 54 ಸಾವಿರ ಕೋಟಿ ಹಣ ಬೇಕಿದ್ದು, ಇಡಿ ಯೋಜನೆ ಪೂರ್ಣಗೊಳಿಸಲು 1 ಲಕ್ಷ ಕೋಟಿ ರೂ. ಬೇಕು. ಸರ್ಕಾರ ಸಾಲ ಮಾಡಿಯಾದರೂ ಸರಿ ಗೇಟ್‌ ಅಳವಡಿಸಲು
ಮುಂದಾಗಬೇಕು. ಇಲ್ಲವೇ ಎಚ್‌.ಡಿ. ದೇವೇಗೌಡ ಅವರು ಸಿಎಂ ಆಗಿದ್ದ ಬಾಂಡ್‌ ಮಾರಾಟ ಮಾಡಿದಂತೆ ಈ ಸರ್ಕಾರ ಬಾಂಡ್‌ ರೂಪಿಸಲಿ ಎಂದು ಆಗ್ರಹಿಸಿದರು.

ಇದಲ್ಲದೇ ಕೃಷ್ಣಾ ಜಲಾನಯನ ಪ್ರದೇಶದ ನೀರಾವರಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲು ಜಲ ಸಂಪನ್ಮೂಲ ಸಚಿವರು ಕೂಡ ಆಗಮಿಸಬೇಕು ಎಂದು ಮೂರು ಬಾರಿ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಜಲ ಸಂಪನ್ಮೂಲ ಸಚಿವರಿಗೆ ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. 

ಮುದ್ದೇಬಿಹಾಳ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮಾರ್ಚ್‌ ಅಂತ್ಯದ ತನಕ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪಾದಯಾತ್ರೆ ಕೈಗೊಂಡಿರುವುದರ ಕುರಿತು ಏನನ್ನೂ ಹೇಳಲಾರೆ. ಶಾಸಕರಾಗಿರುವ ನಡಹಳ್ಳಿ ಅವರು ಕೂಡ ನೀರಾವರಿ ಸಲಹಾ ಸಮಿತಿ ಸದಸ್ಯರಾಗಿದ್ದು, ಸಭೆಯಲ್ಲಿ ಅವರು ತಮ್ಮ ಭಾಗದ ಜನರ ಪರವಾಗಿ ಧ್ವನಿ ಎತ್ತಲಿ. ಆದರೆ ಕಾಲುವೆಗೆ ನೀರು ಹರಿಸಿ ಎಂದು ಯಾರೂ ಪಾದಯಾತ್ರೆ ನಡೆಸಿದ ಉದಾಹರಣೆ ಇಲ್ಲ ಎಂದರು.

„ಶಂಕರ ಜಲ್ಲಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.