ಗಣಿತ ಪರೀಕ್ಷೆ ಸುಸೂತ್ರ
Team Udayavani, Jun 28, 2020, 4:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಲಮಟ್ಟಿ: ಆಲಮಟ್ಟಿಯ ಮಂಜಪ್ಪ ಹರ್ಡೇಕರ ಸ್ಮಾರಕ ಪ.ಪೂ. ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರ ಹಾಗೂ ಆರ್.ಬಿ.ಪಿ.ಜಿ. ಹಳಕಟ್ಟಿ ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ವಿದ್ಯಾರ್ಥಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಗಣಿತ ಪರೀಕ್ಷೆ ಬರೆದರು.
ಆಲಮಟ್ಟಿ ಹಾಗೂ ನಿಡಗುಂದಿ ಆಸ್ಪತ್ರೆಗಳ ಸಿಬ್ಬಂದಿ ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಕೊಠಡಿಗಳಿಗೆ ಕಳುಹಿಸಿಕೊಟ್ಟರು. ಎಂ.ಎಚ್.ಎಂ. ಪರೀಕ್ಷಾ ಕೇಂದ್ರದಲ್ಲಿ 147 ವಿದ್ಯಾರ್ಥಿಗಳು ಮತ್ತು 121 ವಿದ್ಯಾರ್ಥಿನಿಯರು ದಾಖಲಾತಿ ಪಡೆದಿದ್ದು ಶನಿವಾರ ನಡೆದ ಗಣಿತ ವಿಷಯದ ಪರೀಕ್ಷೆಗೆ 142 ವಿದ್ಯಾರ್ಥಿಗಳು, 112 ವಿದ್ಯಾರ್ಥಿನಿಯರು ಸೇರಿ ಒಟ್ಟು 254 ಪರೀಕ್ಷಾರ್ಥಿಗಳು ಹಾಜರಾಗಿದ್ದು 14 ಗೈರು ಹಾಜರಾಗಿದ್ದಾರೆ.
ಆರ್.ಬಿ.ಪಿ.ಜಿ. ಹಳಕಟ್ಟಿ ಪರೀಕ್ಷಾ ಕೇಂದ್ರದಲ್ಲಿ 153 ವಿದ್ಯಾರ್ಥಿಗಳು, 121 ವಿದ್ಯಾರ್ಥಿನಿಯರು ಸೇರಿ ಒಟ್ಟು 274 ಪರೀಕ್ಷಾರ್ಥಿಗಳು ದಾಖಲಾತಿ ಹೊಂದಿದ್ದು, ಅದರಲ್ಲಿ 146 ವಿದ್ಯಾರ್ಥಿಗಳು, 108 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರೆ 20 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳಲ್ಲಿ ಆಲಮಟ್ಟಿ ಗ್ರಾಪಂ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿತ್ತು. ಸ್ಕೌಟ್ಸ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರು, ಪೊಲೀಸರು, ಆಶಾ ಕಾರ್ಯಕರ್ತೆಯರು ಪರೀಕ್ಷಾರ್ಥಿಗಳಲ್ಲಿ ಜಾಗೃತಿಯೊಂದಿಗೆ ಭದ್ರತೆ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ