ನಿಷೇಧಿಸಿದ್ದರೂ ನಡೆದ ರವಿವಾರದ ಸಂತೆ

ಗ್ರಾಪಂ ಅಧ್ಯಕ್ಷೆಯಿಂದ ಸಂತೆಯಲ್ಲಿ ಕೊರೊನಾ ಜಾಗೃತಿ

Team Udayavani, Mar 16, 2020, 4:40 PM IST

16-March-23

ಆಲಮಟ್ಟಿ: ಸರ್ಕಾರ ಸಂತೆಯನ್ನು ನಿಷೇಧಿಸಿದರೂ ಕೂಡ ಇಲ್ಲಿನ ರವಿವಾರದ ಸಂತೆ ಪ್ರತಿ ವಾರದಂತೆ ಈ ವಾರವೂ ಕೂಡ ಜನರು ಆಗಮಿಸಿ ಖರೀದಿ ಮಾಡಿದರು.

ಜಗತ್ತಿನಲ್ಲೆಡೆ ಕೊರೊನಾ ವೈರಸ್‌ ಹಾವಳಿ ಪರಿಣಾಮ ರಾಜ್ಯ ಸರ್ಕಾರ ಏಳು ದಿನಗಳ ಕಾಲ ಬಂದ್‌ ಆದೇಶ ಮಾಡಿದ ಹಿನ್ನೆಲೆಯಲ್ಲಿ ಎರಡನೇ ದಿನವಾದ ರವಿವಾರ ಜರುಗುವ ಆಲಮಟ್ಟಿ ಸಂತೆಯು ಎಂದಿನಂತೆ ನಡೆದರೂ ಕೆಲವು ವಿಶೇಷತೆಗಳಿಗೆ ಕಾರಣವಾಯಿತು.

ವಿಜಯಪುರ ಜಿಲ್ಲಾಧಿಕಾರಿಗಳ ಆದೇಶದಂತೆ ಇಲ್ಲಿನ ಗ್ರಾಪಂನಿಂದ ಶನಿವಾರದಿಂದ ರವಿವಾರದ ಸಂತೆಯನ್ನು ರದ್ದುಗೊಳಿಸಲಾಗಿದೆ ಹಾಗೂ ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಧ್ವನಿವರ್ಧಕದ ಮೂಲಕ ಸುತ್ತಲಿನ ಎಲ್ಲ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡಿದರು.

ಆಲಮಟ್ಟಿ ಸಂತೆಗೆ ಸುಮಾರು 40 ಹಳ್ಳಿಗಳ ಜನರು ಹಾಗೂ ಮುದ್ದೇಬಿಹಾಳ, ಬಾಗಲಕೋಟೆ, ವಿಜಯಪುರ, ತಾಳಿಕೋಟೆ ಸೇರಿದಂತೆ ವಿವಿಧ ಭಾಗಗಳಿಂದ ವ್ಯಾಪಾರಸ್ಥರು ಆಗಮಿಸುತ್ತಾರೆ. ಸಂತೆ ರದ್ದಿನ ಬಗ್ಗೆ ಎಷ್ಟೇ ಧ್ವನಿವರ್ಧಕದ ಮೂಲಕ ಹೇಳಿದರೂ ಕೂಡ ಗ್ರಾಹಕರು ಹಾಗೂ ವ್ಯಾಪಾರಿಗಳು ತಮ್ಮ ಕಾಯಕದಲ್ಲಿ ತೊಡಗಿದರು.

ಮಾತಿನಚಕಮಕಿ: ದೂರದ ಊರುಗಳಿಂದ ಆಗಮಿಸಿದ್ದ ಜನರಿಗೆ ಆಲಮಟ್ಟಿ ಗ್ರಾಪಂ ಅಧ್ಯಕ್ಷೆ ಸೈದಮ್ಮ ಬೆಣ್ಣಿಯವರು ಗ್ರಾಪಂ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸಂತೆ ಆವರಣಕ್ಕೆ ತೆರಳಿ ಸಂತೆ ರದ್ದಾಗಿರುವ ಕುರಿತು ಜನರಿಗೆ ಮಾಹಿತಿ ನೀಡುವ ವೇಳೆ ರೈತರು ಹಾಗೂ ಗ್ರಾಹಕರು ಅಧ್ಯಕ್ಷೆಯೊಂದಿಗೆ ಮಾತಿನ ಚಕಮಕಿ ನಡೆಸಿದರು. ನಂತರ ಆಲಮಟ್ಟಿ ಪೊಲೀಸ್‌ ಠಾಣೆ ಸಿಬ್ಬಂದಿ ನೆರವಿನೊಂದಿಗೆ ಸಂತೆ ಹಾಗೂ ಆಲಮಟ್ಟಿ ಪಟ್ಟಣದ ವಿವಿಧ ಭಾಗಗಳಲ್ಲಿದ್ದ ಮಾಂಸದ ಚಿಕನ್‌, ಮಟನ್‌, ಮೀನಿನ ಅಂಗಡಿಗಳು, ಮಿಠಾಯಿ ಅಂಗಡಿಗಳು ಹಾಗೂ ಚಹಾ ಹೋಟೆಲ್‌ಗ‌ಳನ್ನು ಬಂದ್‌ ಮಾಡಿಸಿದರು.

ಈ ವೇಳೆ ಪ್ರತಿ ಅಂಗಡಿಕಾರರೊಂದಿಗೆ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಸೈದಮ್ಮ ಬೆಣ್ಣಿ, ಕೊರೊನಾ ರೋಗ ಭಯಾನಕವಾಗಿದ್ದು ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಈ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರ ಹಿತಕ್ಕಾಗಿ ಸರ್ಕಾರ ಆದೇಶ ಮಾಡಿದೆ, ಆದ್ದರಿಂದ ನೀವು ಬದುಕಿ ಇನ್ನೊಬ್ಬರನ್ನೂ ಬದುಕಲು ಬಿಡಿ ಎಂದರು.

ಸರ್ಕಾರದ ನಿರ್ದೇಶನದಂತೆ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ತಮಗೂ ಸೇರಿದಂತೆ ಪಕ್ಕದ ಯಾರಿಗಾದರೂ ಕೊರೊನಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಆಸ್ಪತ್ರೆಗಳಿಗೆ ತೆರಳಿ ಗುಣಮುಖರಾಗಬೇಕು ಎಂದು ಹೇಳಿದರು.

ಪಟ್ಟಣದಲ್ಲಿರುವ ಮಾಂಸಾಹಾರಿ ಖಾನಾವಳಿ ಹಾಗೂ ಮಾಂಸದ ಅಂಗಡಿ ಸೇರಿದಂತೆ ಕರಿದ ಪದಾರ್ಥಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವ ಎಲ್ಲ ಕೇಂದ್ರಗಳನ್ನು ಮುಚ್ಚಿಸಿ ಸರ್ಕಾರದ ಆದೇಶ ಬರುವವರೆಗೆ ಅಂಗಡಿಗಳನ್ನು ತೆರೆಯದಂತೆ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಲಾಯಿತು.

ಸಂತೆಯಲ್ಲಿ ತರಕಾರಿ, ಹಣ್ಣುಗಳು, ಬಟ್ಟೆ ಹಾಗೂ ಕಿರಾಣಿ ಸಾಮಗ್ರಿಗಳನ್ನು ಮಾತ್ರ ಮಾರಾಟಕ್ಕೆ ಅನುವು ಮಾಡಿಕೊಡಲಾಯಿತು. ಅಧ್ಯಕ್ಷರೊಂದಿಗೆ ಆಲಮಟ್ಟಿ ಎಎಸೈ ಆರ್‌.ಜಿ. ನಗರಕರ ಜನರಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಗ್ರಾಪಂನ ರಾಮಸ್ವಾಮಿ ಗಾಯಕವಾಡ, ಟಿ.ಆರ್‌. ಬಂಡಿವಡ್ಡರ, ರವಿ ಆಲಮಟ್ಟಿ, ಅಂದಾನಿ ಲಮಾಣಿ, ಪೊಲೀಸ್‌ ಇಲಾಖೆಯ ಎಸ್‌.ಜಿ. ಲಾಡ್‌, ರಣಧೀರ ಚವ್ಹಾಣ, ಪ್ರಕಾಶ ಗಣಾಚಾರಿ, ಅನಿಲ ರೂಗಿ, ಕೃಷ್ಣಾ ಕೆರಿಕಟ್ಟಿ ಮೊದಲಾದವರಿದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.