ಆಲಮೇಲಕ್ಕೂ ಕಾಲಿಟ್ಟ ಕೋವಿಡ್ ; ಸೋಂಕಿತ ಆಸ್ಪತ್ರೆಗೆ


Team Udayavani, May 31, 2020, 11:47 AM IST

31-May-05

ಆಲಮೇಲ: ಸೋಂಕಿತ ವ್ಯಕ್ತಿಯನ್ನು ಕರೆದೊಯ್ಯಲು ಆಗಮಿಸಿದ್ದ ಆಂಬ್ಯುಲೆನ್‌

ಆಲಮೇಲ: ಪಟ್ಟಣಕ್ಕೆ ಪ್ರಥಮ ಕೋವಿಡ್ ಸೊಂಕು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಇರಿ ಎಂದು ತಹಶೀಲ್ದಾರ್‌ ಸಂಜುಕುಮಾರ ದಾಸರ ಹೇಳಿದರು.

ಪಟ್ಟಣದ ಕಡಣಿ ಅಗಸಿಯ ನಿವಾಸಿ 50 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಈ ವ್ಯಕ್ತಿ ಕಳೆದ 15ದಿನಗಳ ಹಿಂದೆ ಮಹಾರಾಷ್ಟ್ರದ ಸೋಲ್ಲಾಪೂರ ಖಾಸಗಿ ಆಸ್ಪತ್ರೆಗೆ ಅನ್ಯ ಸಮಸ್ಯೆಗಳ ಕಾರಣ ಚಿಕಿತ್ಸೆಗೆಂದು ತೆರಳಿದ್ದರು. ನಂತರ ಮರಳಿ ಬಂದಿದ್ದ ಅವರನ್ನು ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್‌ ಮಾಡಲಾಗಿತ್ತು. ಶನಿವಾರ ವರದಿ ಬಂದಿದ್ದು, ಕ್ವಾರಂಟೈನ್‌ ಅವಧಿ ಶುಕ್ರವಾರವ ಪೂರೈಸಿದ್ದು, ಪಟ್ಟಣದಲ್ಲಿ ಎಲ್ಲೂ ಸಂಚಾರ ಮಾಡಿಲ್ಲ. ಆದ್ದರಿಂದ ಪಟ್ಟಣದ ಯಾವುದೇ ಪ್ರದೇಶವನ್ನು ಸೀಲ್‌ಡೌನ್‌ ಮಾಡುವ ಪ್ರಸಂಗ್‌ ಬರುವದಿಲ್ಲ ಎಂದು ತಹಶೀಲ್ದಾರ್‌ ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವ ತಾಯಿ, ಪತ್ನಿ ಹಾಗೂ ಮಗಳನ್ನು ಸಿಂದಗಿ ಸ್ವಾಂಸ್ಥಿಕ ಕ್ವಾರಂಟೈನ್‌ ಕೇಂದ್ರದಲ್ಲಿ ನಿಗಾ ಇಡಲಾಗಿದೆ. ಆಲಮೇಲ ಕ್ವಾರಂಟೈನ್‌ ಕೇಂದ್ರದಿಂದ 7ದಿನಗಳ ಅವಧಿಯನ್ನು ಪೂರೈಸಿದ್ದ 70ಕ್ಕೂ ಹೆಚ್ಚು ಮಂದಿಯನ್ನು ಶುಕ್ರವಾರ ಸಂಜೆ ಮತ್ತು ಶನಿವಾರ ಮನೆಗೆ ಕಳುಹಿಸಿ ಕೊಡಲಾಗಿದೆ. ಇನ್ನು 44 ಜನರು ಕೇಂದ್ರದಲ್ಲಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಅಧಿಕಾರಿ ಗುರುರಾಜ ಗತಾಟೆ ತಿಳಿಸಿದರು.

ಪಟ್ಟಣದಲ್ಲಿ ಕೆಲವರು ರಾತ್ರಿ ವೇಳೆ ಮಹಾರಾಷ್ಟ್ರದಿಂದ ಕಳ್ಳ ದಾರಿ ಮೂಲಕ ಬಂದು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎನ್ನವು ಮಾಹಿತಿ ಬಂದಿದೆ. ಅವರನ್ನು ಯಾವುದೇ ಹೊಂ ಕ್ವಾರಂಟೈನ್‌ ಅಥವಾ ಸರ್ಕಾರಿ ಕ್ವಾರಂಟೈನ್‌ ಕೇಂದ್ರದಲ್ಲೂ ಇಡಲಾಗಿಲ್ಲ. ಹೀಗಾಗಿ ಸಾರ್ವಜನಿಕರಲ್ಲಿ ಸಹಜವಾಗಿ ಆತಂಕ ಮನೆಮಾಡಿದೆ. ಸೋಂಕಿತ ವ್ಯಕ್ತಿಯನ್ನು ಕರೆದುಕೊಂಡು ಹೋಗಲು ಅಂಬ್ಯುಲೆನ್ಸ್‌ ವಾಹನ ಬಂದಾಗ ನೋಡಲು ಜನರ ದಂಡೆ ದೌಡಾಯಿಸಿತ್ತು. ಸೋಂಕಿತ ವ್ಯಕ್ತಿಯನ್ನ ಮತ್ತು ಅವರ ಕುಟುಂಬವನ್ನು ಕರೆದುಕೊಂಡು ಹೋಗುವುದನ್ನು ಮೊಬೈಲ್‌ಗ‌ಳಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟರು.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.