ಅಂಬೇಡ್ಕರ್‌ ತುಳಿತಕ್ಕೊಳಗಾದವರ ದೇವರು:ಎ.ಎಸ್‌. ಪಾಟೀಲ

ಸರ್ವರಿಗೂ ಸಮಬಾಳು, ಸಮಪಾಲು ಎನ್ನುವುದನ್ನು ಬಿಂಬಿಸಿದ ಅಂಬೇಡ್ಕರ್‌ ಎಲ್ಲರಿಗೂ ಆದರ್ಶ ಎಂದರು.

Team Udayavani, Apr 15, 2021, 6:28 PM IST

AS-Nada

ಮುದ್ದೇಬಿಹಾಳ: ದೇಶದಲ್ಲಿ ಜಾತಿ ವ್ಯವಸ್ಥೆ ಇರುವರೆಗೂ ಡಾ| ಅಂಬೇಡ್ಕರ್ ಪ್ರತಿಪಾದಿಸಿದ ಮೀಸಲಾತಿ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಈ ಬಗ್ಗೆ ನಾನು ವಿಧಾನಸಭೆ ಅಧಿ ವೇಶನದಲ್ಲೂ ಮಾತನಾಡಿದ್ದೇನೆ. ಡಾ|ಅಂಬೇಡ್ಕರ್ ಅವರನ್ನು ದೂರವಿರಿಸುವುದು ಯಾರಿಂದಲೂ ಸಾಧ್ಯವಿಲ್ಲ. ಅವರು ತುಳಿತಕ್ಕೊಳಗಾದ ಎಲ್ಲ ಜನರ ದೇವರು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಅಂಬೇಡ್ಕರ್‌ ವೃತ್ತದಲ್ಲಿ ದಲಿತ ಸಂಘಟನೆಗಳು ಆಯೋಜಿಸಿದ್ದ ಡಾ| ಅಂಬೇಡ್ಕರ್‌ರವರ 130ನೇ ಜಯಂತಿಯಲ್ಲಿ ಮೂರ್ತಿಗೆ ಹೂಮಾಲೆ ಹಾಕಿ, ಮಹಾನಾಯಕ ಕ್ಯಾಲೆಂಡರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ದೇಶಾಭಿಮಾನಕ್ಕೆ ಇನ್ನೊಂದು ಹೆಸರೇ ಅಂಬೇಡ್ಕರ್‌. ತುಳಿತಕ್ಕೊಳಗಾದವರ ಪರ ನಿಂತು ನ್ಯಾಯ ಕೊಡಿಸಿದರು. ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ದೇಶಕ್ಕೆ ದೊಡ್ಡ ಕೊಡುಗೆ. ಸರ್ವರಿಗೂ ಸಮಬಾಳು, ಸಮಪಾಲು ಎನ್ನುವುದನ್ನು
ಬಿಂಬಿಸಿದ ಅಂಬೇಡ್ಕರ್‌ ಎಲ್ಲರಿಗೂ ಆದರ್ಶ ಎಂದರು.

ಎಲ್ಲರ ಬೇಡಿಕೆಯಂತೆ ಅಂಬೇಡ್ಕರ್ ವೃತ್ತದಲ್ಲಿ ಡಾ| ಅಂಬೇಡ್ಕರ್‌ರವರ ಬೃಹತ್‌ ಕಂಚಿನ ಅಥವಾ ಪಂಚಲೋಹದ ಮೂರ್ತಿ ಸ್ಥಾಪನೆಗೆ ವೈಯಕ್ತಿಕವಾಗಿ ಹಣ ಕೊಟ್ಟು ಮಹತ್ವ ಕೊಡುತ್ತೇನೆ. ಅಂಬೇಡ್ಕರ್‌ ಆದರ್ಶ, ವಿಚಾರ ಜನರಿಗೆ ತಿಳಿಸುವ ಅವರ ಮತ್ತು ಅವರ ಬರಹಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳುವ ಯೋಜನೆ ಇದೆ. ನಾನು ಅಂಬೇಡ್ಕರ್‌ ಮತ್ತು ಅವರ ವಿಚಾರಧಾರೆ ಪ್ರೀತಿಸುವ ವ್ಯಕ್ತಿಯಾಗಿ ದಲಿತರು, ಬಡವರು, ತುಳಿತಕ್ಕೊಳಗಾದವರಿಗೆ ನನ್ನ ಕೈಲಾದ ನೆರವು ನೀಡುತ್ತಿದ್ದೇನೆ ಎಂದರು.

ಈ ವೇಳೆ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ಉಪಾಧ್ಯಕ್ಷೆ ಶಾಜಾದಬಿ ಹುಣಚಗಿ, ಎಲ್ಲ ಸದಸ್ಯರು, ಪಿಎಸೈ ಎಂ.ಬಿ. ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಸಮಾಜ ಕಲ್ಯಾಣಾಧಿಕಾರಿ ಉಮೇಶ ಲಮಾಣಿ, ದಲಿತ ಮುಖಂಡರಾದ ಡಿ.ಬಿ. ಮುದೂರ, ಹರೀಶ ನಾಟಿಕಾರ, ಚನ್ನಪ್ಪ ವಿಜಯಕರ, ರೇವಣೆಪ್ಪ ಹರಿಜನ, ಬಸವರಾಜ ಪೂಜಾರಿ, ಪ್ರಕಾಶ ಚಲವಾದಿ ಸರೂರ, ದೇವರಾಜ ಹಂಗರಗಿ, ಸಿದ್ದು ಚಲವಾದಿ, ಶಶಿಕಾಂತ ಮಾಲಗತ್ತಿ, ಪರಶುರಾಮ ಕೊಣ್ಣೂರ, ಅಶೋಕ ಇಲಕಲ್‌ ಇದ್ದರು.ಹರೀಶ ನಾಟಿಕಾರ ನಿರೂಪಿಸಿದರು.

ವಿದ್ಯುತ್‌ ಅಲಂಕಾರ-ಪೂಜೆ: ಜಯಂತಿ ಹಿನ್ನೆಲೆ ಪುರಸಭೆಯಿಂದ ಅಂಬೇಡ್ಕರ್ ವೃತ್ತದವರೆಗಿನ ರಸ್ತೆಯ ಎರಡೂ ಬದಿಯಲ್ಲಿ ಅಲಂಕಾರಿಕ ವಿದ್ಯುತ್
ದೀಪ ಅಳವಡಿಸಿ, ವೃತ್ತ ಹಾಗೂ ಅಂಬೇಡ್ಕರ್‌ ಮೂರ್ತಿ ಹೂಗಳಿಂದ ಅಲಂಕರಿಸಲಾಗಿತ್ತು. ವೃತ್ತದಲ್ಲಿರುವ ಭಗವಾನ್‌ ಬುದ್ಧ, ಅಂಬೇಡ್ಕರ್‌ ಚಿಕ್ಕ ಮೂರ್ತಿಗಳಿಗೆ ಶಾಸಕರಾದಿಯಾಗಿ ಎಲ್ಲರೂ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.