ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Team Udayavani, Jul 27, 2022, 5:31 PM IST
ಮುದ್ದೇಬಿಹಾಳ: ತಾಲೂಕಿನಲ್ಲಿ ಐದು ವರ್ಷಗಳಿಂದ ಅಂಗನವಾಡಿ ಬಾಡಿಗೆಯನ್ನು ಮಾಲೀಕರಿಗೆ ಕೊಡದೇ ಇರುವುದು, ಜು.2019ರ ಗೌರವಧನ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಟ್ಟದೇ ಇರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ಅಧ್ಯಕ್ಷ ನೀಲಮ್ಮ ಬೋರಾವತ್ ಮಾತನಾಡಿ, ತಾಲೂಕಿನ ತಂಗಡಗಿ ಭಾಗದಲ್ಲಿ 2019ರಲ್ಲಿ ಏಳು ತಿಂಗಳ ಮೊಟ್ಟೆ ಬಿಲ್ ಬಾಕಿ ತೆಗೆಯಬೇಕು.ಅಲ್ಲದೇ ಸರ್ವಿಸ್ಸಾದ ಕಾರ್ಯಕರ್ತೆಯರನ್ನು ಮೇಲ್ವಿಚಾರಕಿ ಎಂದು ಬಡ್ತಿ ನೀಡಬೇಕು. ನಿವೃತ್ತರಾದ ಅಂಗನವಾಡಿ ನೌಕರರಿಗೆ ಎನ್ಪಿಎಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ನಿಂಬೆಕ್ಕ ಕಾಳಾಪುರ, ಅಯ್ಯಮ್ಮ ವಣಕ್ಯಾಳ, ಶೋಭಾ ಕಾಖಂಡಕಿ, ಶಿವಮ್ಮ ಅಂಗಡಗೇರಿ, ಗೌರಮ್ಮ ಕರ್ಜಗಿ, ಈರಮ್ಮ ಹಿರೇಮಠ, ಯಮನಕ್ಕ ವಡ್ಡರ, ಸುರೇಖಾ ಕುಲಕರ್ಣಿ, ಅಂಬುಜಾ ಕುಲಕರ್ಣಿ, ಕಾಶೀಬಾಯಿ ತುಂಬಗಿ, ಗುರುಬಾಯಿ ಕಲಬುರ್ಗಿ, ಲೀಲಾವತಿ ಕುಂಟೋಜಿ, ವಿದ್ಯಾ ಪಾಟೀಲ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.
ಇದೇ ವೇಳೆ ಬ.ಸಾಲವಾಡಗಿಯ ಅಂಗನವಾಡಿ ಸಹಾಯಕಿ ಶಾಂತಮ್ಮ ಮೇಟಿ ನಿಧನ ಹಿನ್ನೆಲೆಯ ಕಾರ್ಯಕರ್ತೆಯರು ಮನವಿ ಸಲ್ಲಿಕೆಗೂ ಮುನ್ನ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ರ್ಯಾಲಿ ಕೈ ಬಿಟ್ಟು ನೇರವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ತೊನಶ್ಯಾಳ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಅಂಗನವಾಡಿ ಸಹಾಯಕಿಯ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ