ಅಂಗನವಾಡಿ ನೌಕರರ ಪ್ರತಿಭಟನಾ ಮೆರವಣಿಗ


Team Udayavani, Jan 19, 2018, 1:09 PM IST

vij-5.jpg

ವಿಜಯಪುರ: 42ನೇ ಭಾರತೀಯ ಕಾರ್ಮಿಕರ ಸಮಾವೇಶದ ನಿರ್ಣಯಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷೆ ನೀಲಮ್ಮ ಬೋರಾವತ್‌, ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳಿದ್ದು, 34 ಸಾವಿರ ಸ್ವಂತ ಕಟ್ಟಡಗಳಿವೆ. 26 ಸಾವಿರ ಅಂಗನವಾಡಿಗೆ ಸ್ವತಂ ಕಟ್ಟಡ ಭಾಗ್ಯ ದೊರೆತಿಲ್ಲ. ಮತ್ತೂಂದೆಡೆ ಸಾಧಕ-ಬಾಧಕ ಪರಾಮರ್ಶಿಸದೇ ಕಳೆದ ಅಕ್ಟೋಬರ್‌ 2ರಿಂದ ಮಾತೃಪೂರ್ಣ ಯೋಜನೆ
ಪ್ರಾರಂಭವಾಗಿದೆ. ಗರ್ಭಿಣಿ, ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ 3-4 ಕಿ.ಮೀ. ದೂರದಿಂದ ಅಲೆಯುತ್ತಿದ್ದಾರೆ.
ಮತ್ತೂಂದೆಡೆ ಶೇ.40 ರಷ್ಟು ಪೌಷ್ಟಿಕ ಆಹಾರದ ದುರುಪಯೋಗವಾಗುತ್ತಿದೆ ಎಂದು ಹರಿಹಾಯ್ದರು.

ಅಂಗನವಾಡಿ ನೌಕರರಿಗೆ ಮಾಸಿಕ 18 ಸಾವಿರ ರೂ. ವೇತನ ಹಾಗೂ 3 ಸಾವಿರ ರೂ, ನಿವೃತ್ತಿ ವೇತನ ನೀಡಬೇಕು. ಬಾಲ ವಿಕಾಸ ಸಮಿತಿಯ ಪುನರ್‌ ರಚನೆಗೆ ಸ್ಥಳೀಯ ಸಂಸ್ಥೆ ಸದಸ್ಯರನ್ನು ಖಾತೆ ತೆರೆಯಲು ಕಡ್ಡಾಯ ಮಾಡಿದ್ದನ್ನು ಹಿಂಪಡೆಯಬೇಕು.

ಅಂಗನವಾಡಿ ಕೇಂದ್ರದ ಕೆಲಸ ವೇಳೆಯನ್ನು ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ, ಸಹಾಯಕಿಯರನ್ನು ನೇಮಿಸಬೇಕು. ರಾಜ್ಯದ ಎಲ್ಲ ಅಂಗನವಾಡಿಗೆ ಸ್ವಂತ ಕಟ್ಟಡ, ಕುಡಿಯುವ ನೀರು, ಅನಿಲ ಸಿಲಿಂಡರ್‌, ಗರ್ಭಿಣಿ-ಬಾಣಂತಿಯರು ಅನುಕೂಲಕ್ಕೆ ಶೌಚಾಲಯ, ಪೀಠೊಪಕರಣ ಒದಗಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ಶೋಭಾ ಕಾಖಂಡಕಿ, ಅನಿತಾ ಲಮಾಣಿ, ನಿರ್ಮಲಾ ಕಾಂಬಳೆ, ಅಯ್ಯಮ್ಮ ವನಕಿಹಾಳ, ನಿಂಬೆಕ್ಕ ಕಾಳಾಪೂರ, ಮೈಬೂ ಬಾಗಲಕೋಟ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸಚಿವ ಜಿಗಜಿಣಗಿ ಕಚೇರಿ ಎದುರು ನಿರಶನ
ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಕೇಂದ್ರ
ಸಚಿವ ರಮೇಶ ಜಿಗಜಿಣಗಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ನಗರದ ಬಾರಾಕಮಾನ್‌ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ನೌಕರರು, ಸ್ಟೇಶನ್‌ ರಸ್ತೆಯಲ್ಲಿರುವ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಕೇಂದ್ರ ಸರ್ಕಾರ ಬರುವ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಸಮಸ್ಯೆಗಳ ಕುರಿತು ಚರ್ಚಿಸಿ, ಅಗತ್ಯ ಸೌಲಭ್ಯ ಕಲ್ಪಿಸಬೇಕು. ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಗೌರಮ್ಮ ಪಾಟೀಲ, ಭಾರತಿ ವಾಲಿ, ರಾಯಚೂರಿನ ಪದ್ಮಾವತಿ, ಸುನಂದಾ ನಾಯಕ, ಸುರೇಖಾ ರಜಪೂತ,
ಲಕ್ಷ್ಮಣ ಹಂದ್ರಾಳ, ಬಿಸಿಯೂಟದ ಗಿರಿಯಪ್ಪ ಸಿದ್ದಮ್ಮ ಮಾತನಾಡಿ, 45 ಎಲ್‌ಐಸಿ ಯ ಶಿಫಾರಸ್ಸುಗಳಾದ
(ಭಾರತೀಯ ಕಾರ್ಮಿಕ ಸಮ್ಮೇಳನ) ಸ್ಕೀಮ್‌ ಗಳಲ್ಲಿ ದುಡಿಯುತ್ತಿರುವವರನ್ನು ಕಾರ್ಮಿಕರೆಂದು ಪರಿಗಣಿಸಿ 18 ಸಾವಿರ ಕನಿಷ್ಠ ವೇತನ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಕನಿಷ್ಠ 3 ಸಾವಿರ ರೂ. ನಿವೃತ್ತಿ ವೇತನ ನೀಡುವುದು ಸೇರಿದಂತೆ ಹಲವು ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಸಚಿವ ರಮೇಶ ಜಿಗಜಿಣಗಿ, ಅಂಗನವಾಡಿ ನೌಕರರ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದ ಇಲಾಖೆ ಸಚಿವರೊಂದಿಗೆ ಚರ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಬಾಗಲಕೋಟೆಯ ಹಣಮಂತ ದಾಸರ, ವರಲಕ್ಷ್ಮೀ, ಸುರೇಖಾ ಯಾದಗಿರಿ, ಬಸಲಿಂಗಮ್ಮ, ಸುಶೀಲಾ ಹತ್ತಿ, ಶ್ರೀದೇವಿ ಚುಡೆ, ದಾನಮ್ಮ ಗುಗ್ಗರೆ, ಸುವರ್ಣ ಹಲಗಣಿ, ಅಶ್ವಿ‌ನಿ ತಳವಾರ, ಎಲ್‌.ವೈ. ನದಾಫ್‌, ಜಯಶ್ರೀ ಪೂಜಾರಿ, ಸರಸ್ವತಿ ಮಠ, ಸರೋಜಿನ ಪಾಟೀಲ, ಶೈಲಾ ಕಟ್ಟಿ, ಶೋಭಾ ಕೊಡತೆ, ದಾಕ್ಷಾಯಿಣಿ ಅವಟಿ ಇದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.