ಬಿಎಲ್‌ಡಿಇ ಸಂಸ್ಥೆ ಯಿಂದ ಮತ್ತೊಂದು ಮಾನವೀಯ ಹೆಜೆ


Team Udayavani, Jun 17, 2021, 5:33 PM IST

Udayavani Kannada Newspaper

ವಿಜಯಪುರ: ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಶೇ. 70 ಚಿಕಿತ್ಸಾ ವೆಚ್ಚದ ರಿಯಾಯ್ತಿ ನೀಡಿದ್ದ ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷ ಎಂ.ಬಿ. ಪಾಟೀಲ, ಇದೀಗ ಮತ್ತೂಂದು ಮಾನವೀಯ ಹೆಜ್ಜೆ ಇರಿಸಿದ್ದಾರೆ.

ಬುಧವಾರ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮೃತರ ಕುಟುಂಬ ಸದಸ್ಯರಿಗೆ ಪರಿಹಾರದ ಚೆಕ್‌ ವಿತರಿಸಿ ಮಾತನಾಡಿದ ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಡಾ| ಎಂ.ಬಿ. ಪಾಟೀಲ, ತಮ್ಮ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 16 ಸಿಬ್ಬಂದಿ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಆಸರೆಯಾಗಲು ಸಂಸ್ಥೆಯಿಂದ ತಲಾ 1 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಅಲ್ಲದೇ ಮೃತರ ಕುಟುಂಬದ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಸಕ್ಕಂತೆ ಉದ್ಯೋಗ ನೀಡುವ ಭರವಸೆ ನೀಡಿದರು.

ಕೋವಿಡ್‌ ಮಹಾ ಸಾಂಕ್ರಾಮಿಕ ರೋಗಕ್ಕೆ ಬಿಎಲ್‌ಡಿಇ ಡೀಮ್ಡ್ ವಿಶ್ವ ವಿದ್ಯಾಲಯ ಉಪ ಕುಲಪತಿ ಡಾ| ಎಂ.ಎಸ್‌. ಬಿರಾದಾರ, ವೈದ್ಯ ಡಾ| ಆರ್‌.ಎಂ. ಪೋಟೆಕರ, ಟೆಕ್ನಿಷಿಯನಗಳಾದ ರುದ್ರಗೌಡ ಪಾಟೀಲ, ಜಗದೀಶ ಬಡಿಗೇರ, ಅಟೆಂಡರ್‌ಗಳಾದ ಸುರೇಂದ್ರ ಭಾವಿಮನಿ, ಆಡಳಿತ ಕಚೇರಿ ಎಫ್‌ ಡಿಸಿ ಪ್ರಕಾಶ ಖ್ಯಾಡದ, ಜೆಎಸ್ಸೆಸ್‌ ಕಾಲೇಜಿನ ಎಸ್‌ಡಿಸಿ ತನುಜಾ ಪಾಟೀಲ, ಎಸ್‌.ಎಸ್‌. ಮಾಧ್ಯಮಿಕ “ಎ’ ಶಾಲೆ ಶಿಕ್ಷಕ ಪ್ರಕಾಶ ತೊರವಿ, ತಿಕೋಟಾ ನ್ಯೂ ಆರ್ಟ್ಸ್ ಕಾಲೇಜು ಉಪನ್ಯಾಸಕ ಡಾ| ಎಂ.ಬಿ. ಸಿಂಗೆ ಹಾಗೂ ಎಸ್‌ಡಿಸಿ ಇರ್ಫಾನ್‌ ಜಮಖಂಡಿ, ಜಮಖಂಡಿ ಪಪೂ ಕಾಲೇಜಿನ ಉಪನ್ಯಾಸಕ ರಮೇಶ ಬಿರಾದಾರ, ಲಚ್ಯಾಣ ಎಸ್‌.ಎಸ್‌. ಅಗ್ರಿ ಸ್ಕೂಲ್‌ ಶಿಕ್ಷಕ ಸಿದ್ದಪ್ಪ ಇಂಗಳೇಶ್ವರ, ಎಂಜಿನಿಯರಿಂಗ್‌ ಕಾಲೇಜಿನ ಜವಾನ ಶ್ರೀಶೈಲ ನಾವಿ, ನಗರದ ಎಸ್‌. ಎಸ್‌.ಎಂ ಪಾಲಿಟೆಕ್ನಿಕ್‌ ಕಾಲೇಜಿನ ವೆಲ್ಡರ್‌ ಗೊವಿಂದಪ್ಪ ಹಾದಿಮನಿ ಸೇರಿ ಸಂಸ್ಥೆಯ 16 ಜನರು ನಮ್ಮನ್ನ ಅಗಲಿರುವುದಿ ದುಃಖಕರ ಸಂಗತಿ ಎಂದು ಸಂತಾಪ ವ್ಯಕ್ತಪಡಿಸಿದರು.

ಸಾಂಕ್ರಾಮಿಕ ಮಹಾ ರೋಗಕ್ಕೆ ಬಲಿಯಾದ ಸಂಸ್ಥೆಯ ನೌಕರರ ಕುಟುಂಬಕ್ಕೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವು ನೀಡುವುದು. ಅವರ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಸಹಯ ಮಾಡುವುದು ಸೇರಿದಂತೆ ಅಗತ್ಯ ಸಹಾಯ ಮಾಡುವುದು ನಮ್ಮ ಹೊಣೆ ಹಾಗೂ ಕರ್ತವ್ಯ ಎಂದರು. ಬಿಎಲ್‌ಡಿಸಿ ಡೀಮ್ಡ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ| ಆರ್‌.ಎಸ್‌. ಮುಧೋಳ, ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ| ಅರವಿಂದ ಪಾಟೀಲ, ಆಡಳಿತಾ ಧಿಕಾರಿಗಳಾದ ಡಾ| ರಾಘವೇಂದ್ರ ಕುಲಕರ್ಣಿ, ಕೆ.ಜಿ. ಪೂಜೇರಿ, ಐ.ಎಸ್‌. ಕಾಳಪ್ಪನವರ, ಮುಖ್ಯ ಹಣಕಾಸು ಅಧಿ ಕಾರಿ ದೇವೇಂದ್ರ ಅಗರವಾಲ, ಡಾ| ಎಂ.ಎಸ್‌. ಮದಭಾವಿ, ಪ್ರಚಾರಾ ಧಿಕಾರಿ ಡಾ| ಮಹಾಂತೇಶ ಬಿರಾದಾರ ಸೇರಿದಂತೆ ಮೃತರ ಕುಟುಂಬ ವರ್ಗದವರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.