ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಜಂಗಮರ ವಿರೋಧ-ಪ್ರತಿಭಟನೆ


Team Udayavani, Aug 3, 2017, 10:05 AM IST

03-BJP-7.jpg

ವಿಜಯಪುರ: ವೀರಶೈವ-ಲಿಂಗಾಯತ ಸಮಾಜ ಪ್ರತ್ಯೇಕಿಸುವ ಹುನ್ನಾರ ಹಾಗೂ ರಂಭಾಪುರಿ ಶ್ರೀಗಳ ಅವಮಾನ ಮಾಡಿದವರನ್ನು ಬಂ ಧಿಸುವಂತೆ ಆಗ್ರಹಿಸಿ ಅಖೀಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಮೌನ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ನಗರದ ಸಿದ್ದೇಶ್ವರ ದೇವಾಲಯದಿಂದ ರ್ಯಾಲಿ ಆರಂಭಿಸಿದ ಪ್ರತಿಭಟನಾಕಾರರು, ಜಿಲ್ಲಾ ಕಾರಿ ಕಛೇರಿಗೆ ತೆರಳಿದರು. ಸಮಾಜವನ್ನು ಒಡೆಯಬೇಡಿ, ರಂಭಾಪುರಿ ಶ್ರೀಗಳನ್ನು ಅವಮಾನಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಫಲಕ ಹಿಡಿದು ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಜಂಗಮ ಸಮಾಜದ ಮುಖಂಡರು, ವೀರಶೈವ-ಲಿಂಗಾಯತ ಸಮಾಜವನ್ನು ಪ್ರತ್ಯೇಕಿಸಲು ಕೆಲ ಕಿಡಿಗೇಡಿಗಳು ಹುನ್ನಾರ ನಡೆಸಿದ್ದಾರೆ. ಅನಾದಿ ಕಾಲದ ಧರ್ಮವಾಗಿರುವ ವೀರಶೈವ-ಲಿಂಗಾಯತ ಧರ್ಮವನ್ನು ಒಡೆಯುವ ಕೃತ್ಯಕ್ಕೆ ಕೆಲವರು ಕೈ ಹಾಕಿದ್ದಾರೆ. ಅಲ್ಲದೇ ಇದಕ್ಕಾಗಿ ರಂಭಾಪುರಿ ಜಗದ್ಗುರುಗಳ ಭಾವಚಿತ್ರಕ್ಕೆ ಅಪಮಾನಿಸಿದ್ದು ಸಮಾಜದಲ್ಲಿ ಪ್ರತ್ಯೇಕತೆಯ ಭಾವನೆ ಹುಟ್ಟು ಹಾಕುತ್ತಿದೆ. ಸಂಸ್ಕಾರ, ಸದ್ವಿಚಾರದಿಂದ ಕೂಡಿದ ವೀರಶೈವ ಲಿಂಗಾಯತ ಧರ್ಮ ಯಾವ ಕಾರಣಕ್ಕೂ ಬೇರ್ಪಡಿಸಬಾರದು. ಇಂತಹ ಪ್ರಯತ್ನಕ್ಕೆ ಅವಕಾಶ
ನೀಡಬಾರದು ಎಂದು ಆಗ್ರಹಿಸಿದರು. 

ಕೆಲ ವ್ಯಕ್ತಿಗಳು ವೀರಶೈವ ಹಾಗೂ ಲಿಂಗಾಯತ ಸಮಾಜವನ್ನು ಬೇರ್ಪಡಿಸುವ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿನ ಸಾಮರಸ್ಯ ಹಾಳು ಮಾಡಲು ಪ್ರಯತ್ನಿಸುತ್ತಿದ್ದು ಅಂತಹ ಕಿಡಿಗೇಡಿಗಳನ್ನು ಬಂ ಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಅವರು ಸಿಂದಗಿ ಸಾರಂಗಮಠದ ಶ್ರೀಗಳ ವಿಷಯದಲ್ಲಿ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದು, ಕೂಡಲೇ ಪಾಟೀಲರು ಶ್ರೀಗಳ ಕ್ಷಮೆ ಯಾಚಿಸಬೇಕು. ಅಖೀಲ ಭಾರತ ವೀರಶೈವ ಮಹಾಸಭೆ ನಿರ್ಣಯದಂತೆ ವೀರಶೈವ-ಲಿಂಗಾಯತ ಧರ್ಮ ಎಂದು ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು. 

ಆಲಮೇಲ ಚಂದ್ರಶೇಖರ ಶ್ರೀಗಳು, ಬಸವನಬಾಗೇವಾಡಿಯ ಶಿವಪ್ರಕಾಶ ಶ್ರೀಗಳು, ಕಲಕೇರಿಯ ಸಿದ್ದರಾಮ ಶ್ರೀಗಳು, ರುದ್ರಮುನಿ ಶ್ರೀಗಳು, ಅಭಿನವ ಮುರುಘೇಂದ್ರ ಶ್ರೀಗಳು ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಂಗಮ ಸಮಾಜದ ಮುಖಂಡರಾದ ಚಂದ್ರಕಾಂತ ಹಿರೇಮಠ, ಸಿದ್ಧರಾಮಯ್ಯ ಸಾವಳಗಿಮಠ, ಶಿವರುದ್ರಯ್ಯ ಹಿರೇಮಠ, ಗುರು ಗಚ್ಚಿನಮಠ, ಶಿವು ಮುಗಡ್ಲಿಮಠ, ರಾಜು ಮುತ್ತಿನಪೆಂಡಿನಮಠ, ರಾಜು ಹಿರೇಮಠ, ಅಶೋಕ ಮಠ, ಆರ್‌.ಐ. ಚೌಕಿಮಠ, ಗುರುಪಾದಯ್ಯ ಹಿರೇಮಠ, ವಿ.ಎಸ್‌. ನಿರಂಜನಮಠ, ಸಿದ್ಧು ಮಲ್ಲಿಕಾರ್ಜುನಮಠ, ರಾಜು ಗಚ್ಚಿನಮಠ, ಪ್ರಕಾಶ ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.