ಯತ್ನಾಳ ಮಾತ್ರವಲ್ಲ ಯಾರಾದರೂ ದಾಖಲೆ ಬಿಡುಗಡೆ ಮಾಡಲಿ: ವಚನಾನಂದಶ್ರೀ
Team Udayavani, Dec 11, 2022, 12:52 PM IST
ವಿಜಯಪುರ: ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಪಾದಯಾತ್ರೆ ಹೋರಾಟಕ್ಕೆ ಮುನ್ನವೇ ಸರ್ಕಾರ ಹರಿಹರ ಪಂಚಮಸಾಲಿ ಪೀಠದ ಅಭಿವೃದ್ಧಿ, ವಿದ್ಯಾರ್ಥಿ ವಸತಿ ನಿಲಗಳಿಗೆ 10 ಕೋಟಿ ರೂ. ನೀಡಿದೆ. ನೀಡಿದ ಅನುದಾನ ಪಾರದರ್ಶಕವಾಗಿ ಬಳಕೆಯಾಗಿದೆ. ಹೀಗಾಗಿ ಯತ್ನಾಳ ಮಾತ್ರವಲ್ಲ ಯಾರು ಬೇಕಾದರೂ ದಾಖಲೆ ಬಿಡುಗಡೆ ಮಾಡಲಿ ಎಂದು ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಶ್ರೀಗಳು ಹೇಳಿದರು.
ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರದ ನಮ್ಮ ಪೀಠಕ್ಕೂ, ಕನಕಗು ಪೀಠಕ್ಕೂ ಸರ್ಕಾರ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದೆ. ಅಭಿವೃದ್ಧಿ ಕಾಮಗಾರಿ ನಡೆದು, ಬಿಡುಗಡೆಯಾದ ಹಣದ ಬಳಕೆ ಬಳಿಕ ಹಂತಹಂತವಾಗಿ ಹಣ ಬರುತ್ತದೆ. ಎಲ್ಲ ಅನುದಾನವೂ ಪಾರದರ್ಶಕ ಬಳಕೆಯಾಗಿದೆ. ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಯಾರುಬೇಕಾದರೂ ದಾಖಲೆ ಪಡೆಯಬಹುದು ಎಂದರು.
ಸರ್ಕಾರ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟಕ್ಕೆ ಸ್ಪಂದಿಸಿದ್ದು, ಶೀಘ್ರವೇ ಸಿಹಿಸುದ್ದಿ ಹೊರಬರಲಿದೆ ಎಂದರು.
ಬೆಳಗಾವಿ ಅಧಿವೇಶನದ ಪೂರ್ವದಲ್ಲೇ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು, ಕಾನೂನು ತೊಡಕು ಆಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಘೋಷಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ವರದಿ ಸಲ್ಲಿಕೆ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸರ್ವಪಕ್ಷಗಳ ನಾಯಕರ ಸಭೆ ಕರೆದು, ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ. ಹೀಗಾಗಿ ಖುದ್ದು ನಾವೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸರ್ವಪಕ್ಷಗಳ ಸಭೆಯಲ್ಲಿ ನಮ್ಮ ಸಮುದಾಯದ ಪರವಾಗಿ ನಿಲ್ಲುವಂತೆ ಮನವಿ ಮಾಡಿದ್ದಾಗಿ ವಿವರಿಸಿದರು.
ನಮ್ಮ ಹೋರಾಟ ಹಾಗೂ ಬೇಡಿಕೆ ಕೇವಲ 2ಎ ಮೀಸಲಾತಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಪಂಚಮಸಾಲಿ ಸಮಾಜ ಮಾತ್ರವಲ್ಲ ಇಡೀ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕು. ಇದರಿಂದ ಕೇಂದ್ರ ಸರ್ಕಾರದಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್ ನಂಥ ಉನ್ನತ ಹುದ್ದೆಗೇರಲು ನಮ್ಮ ವೀರಶೈವ ಲಿಂಗಾಯತ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಸಹಕಾರಿ ಆಗಲಿದೆ ಎಂದರು.
ಇದಕ್ಕಾಗಿ 28 ವರ್ಷಗಳ ಸುದೀರ್ಘ ಹೋರಾಟ ನಡೆಸಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿ ಆಗಿದ್ದಾಗಲೇ ಈ ಬಗ್ಗೆ ಧ್ವನಿ ಎತ್ತಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಾತಿಗಳ ಪಟ್ಟಿಯಲ್ಲೇ ಇಲ್ಲದ ಪಂಚಮಸಾಲಿ ಸಮಾಜವನ್ನು ಜಾತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದರಿಂದ 3ಬಿ ಮೀಸಲಾತಿ ಪಡೆಯಲು ಅವಕಾಶ ಸಿಕ್ಕಿತು ಎಂದು ವಿವರಿಸಿದರು.
ಆಲಗೂರು ಪಂಚಮಸಾಲಿ ಪೀಠದ ಡಾ.ಮಹದೇವ ಶ್ರೀಗಳು, ಡಾ.ಸುರೇಶ ಬಿರಾದಾರ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಗುರುಶಾಂತ ನಿಡೋಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್