ಹಲ್ಲೆಗೈದವರ ಬಂಧನಕ್ಕೆ ಆಗ್ರಹಿಸಿ ಮನವಿ
Team Udayavani, Jan 2, 2022, 5:59 PM IST
ರಾಯಚೂರು: ಸಿಂಧನೂರು ತಾಲೂಕಿನ ಕುನ್ನಟಗಿ ಗ್ರಾಮದಲ್ಲಿ ಶುಕ್ರವಾರ ದಲಿತರ ಮೇಲೆ ಹಲ್ಲೆ ನಡೆಸಿ ಹುಲ್ಲಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಜರುಗಿಸುವಂತೆ ದಲಿತ ಮಹಾಸಭಾದ ಸದಸ್ಯರು ಒತ್ತಾಯಿಸಿದರು.
ಈ ಕುರಿತು ಶನಿವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮಹಾಸಭಾದ ಸದಸ್ಯರು, ಕುನ್ನಟಗಿ ಗ್ರಾಮದ ಹಿರೇಬಸಪ್ಪ, ಸಣ್ಣ ಬಸಪ್ಪ ಎನ್ನುವ ದಲಿತರ ಮನೆಗಳಿಗೆ ಖಾದರಬಾಷಾ, ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ 30 ಜನ ದಾಳಿ ಮಾಡಿದ್ದಾರೆ.
ಸೆ.23ನಲ್ಲಿ ಹಿರೇಬಸಪ್ಪ ಅವರ ಮಗನಾದ ಜಮದಗ್ನಿ ಅವರನ್ನು ಕೊಲೆಗೈಯ್ಯಲಾಗಿದೆ. ಈ ಪ್ರಕರಣದಲ್ಲಿ ಲಕ್ಷ್ಮೀಕಾಂತರೆಡ್ಡಿ ಸೇರಿ 14 ಜನರ ಮೇಲೆ ದೂರು ದಾಖಲಾಗಿದೆ. ಆದರೆ, 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇನ್ನೂ 6 ಜನರನ್ನು ಬಂಧಿಸಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಕಂಡುಬರುತ್ತದೆ. ಈ ಘಟನೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
ಬಂಧನವಾಗಿದ್ದ ಎಂಟು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಬಂದವರೊಂದಿಗೆ ಇನ್ನೂ ಕೆಲವರು ಸೇರಿಕೊಂಡು ದಲಿತರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಘಟನೆ ನಿಯಂತ್ರಿಸುವಲ್ಲಿ ವಿಫಲಗೊಂಡ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಬೇಕು ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು ಎಂದರು.
ಸಂಘಟನೆ ಜಿಲ್ಲಾಧ್ಯಕ್ಷ ಕೆ.ಇ. ಕುಮಾರ, ಸದಸ್ಯರಾದ ಪ್ರಾಣೇಶ ಮಂಚಾಲ, ಮಲ್ಲೇಶ ಕೊಲುಮಿ, ವೆಂಕಟೇಶ ಕಲ್ಲೂರು, ಮಾರೆಪ್ಪ, ಬಿ.ಕೆ.ಬಾಬು ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್