Vijayapura ಜನತಾ ದರ್ಶನದಲ್ಲಿ ದಯಾಮರಣಕ್ಕೆ ಮನವಿ…!


Team Udayavani, Nov 2, 2023, 5:20 PM IST

Vijayapura ಜನತಾ ದರ್ಶನದಲ್ಲಿ ದಯಾಮರಣಕ್ಕೆ ಮನವಿ…!

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ಗುರುವಾರ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ದಯಾಮರಣಕ್ಕೆ ಅರ್ಜಿ ಸಲ್ಲಿಸಿದರೆ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೆತ್ತವರು ತಮ್ಮ ಮಕ್ಕಳ ಹತ್ಯೆ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿಕೊಂಡ ಘಟನೆಗಳು ಜರುಗಿದವು.

ವಿವಿಧ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿರುವ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದು, ತನ್ನ ಜಮೀನಿನ ದಾಖಲೆ ಹಾಗೂ ಗುರುತಿನ ಪತ್ರಗಳನ್ನು ನೀಡಿ ಜಾಮೀನು ಪಡೆದಿದ್ದಾರೆ. ಈ ವಿಷಯದಲ್ಲಿ ಅವರು ಮಾಡಿದ ತಪ್ಪಿಗೆ ನ್ಯಾಯಾಲಯದಲ್ಲಿ ನಾನು ದಂಡ ತೆತ್ತಿದ್ದೇನೆ ಎಂದು ವಿಜಯಪುರ ನಿವಾಸಿಯಾಗಿರುವ ಹಡಗಲಿ ಗ್ರಾಮದ ಇಮಾಮಸಾಬ್ ಭಾವಿಕಟ್ಟಿ ಅಳಲು ತೋಡಿಕೊಂಡರು.

ನನ್ನ ಹೆಸರಿನಲ್ಲಿ ನ್ಯಾಯಾಲಯಕ್ಕೆ ನಕಲಿ ದಾಖಲೆ ಸೃಷ್ಟಿಸಿ ಜಾಮೀನು ಪಡೆದಿರುವ ಕುರಿತು ಪೊಲೀಸರಿಗೆ ದೂರು ನೀಡಿ 4 ವರ್ಷ ಗತಿಸಿದರೂ ಪ್ರಕರಣದ ತನಿಖೆ ನಡೆಸಿ, ನನಗೆ ನ್ಯಾಯ ಕಲ್ಪಿಸಿಲ್ಲ. ಹೀಗಾಗಿ ಸದರಿ ಬೆಳವಣಿಗೆಯಿಂದ ಮಾನಸಿಕ ಹಿಂಸೆ ಹಾಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನನಗೆ ಅಧಿಕಾರಿಗಳಿಂದ ನ್ಯಾಯ ಸಿಕ್ಕಿಲ್ಲ. ಹೀಗಾಗಿ ದಯಾಮರಣ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜನತಾ ದರ್ಶನದಲ್ಲಿ ಮನವಿ ಮಾಡಿದರು.

ಬಾಧಿತನ ಮನವಿ ಆಲಿಸಿದ ಸಚಿವರು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ ಹಾಗೂ ಪೊಲೀಸರಿಗೆ ನಿರ್ದೇಶನ ನೀಡಿ, ಹತಾಶನಾಗಬೇಡ ಎಂದು ಇಮಾಮಸಾಬ್‍ಗೆ ಧೈರ್ಯ ತುಂಬಿದರು.

ಮತ್ತೊಂದೆಡೆ ವ್ಯಕ್ತಿಯೊಬ್ಬರು ತನ್ನ ಮಗ ಹತ್ಯೆಯಾಗಿದ್ದು, ನ್ಯಾಯ ಕಲ್ಪಿಸುವಂತೆ ಮನವಿ ಮಾಡಿದರು. ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ ಹೆಂಡತಿಯೊಂದಿಗೆ ಇದ್ದ ನಮ್ಮ ಮಗ ಹತ್ಯೆಯಾಗಿರುವ ಕುರಿತು ಮಾಹಿತಿ ಇದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ನನ್ನ ಮಗನ ಸಾವಿನ ಕುರಿತು ನಿಖರ ಮಾಹಿತಿ ಹಾಗೂ ನ್ಯಾಯ ಕಲ್ಪಿಸುವಂತೆ ಮನವಿ ಮಾಡಿದರು.

ಹಾವೇರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಬಾಧಿತರಿಗೆ ನ್ಯಾಯ ಕಲ್ಪಿಸುವಂತೆ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.

ಮತ್ತೊಂದೆಡೆ ಕಳೆದ ಎಪ್ರಿಲ್ 14 ರಂದು ನನ್ನ ಮಗ ಅಸಹಜ ಸಾವಿಗೀಡಾಗಿದ್ದಾನೆ. ಪೊಲೀಸರು ಸದರಿ ಪ್ರಕರಣವನ್ನು ಅಪಘಾತ ಎಂಬಂತೆ ಬಿಂಬಿಸಿದ್ದು, ಮೇಲ್ನೋಟಕ್ಕೆ ಅದು ಹತ್ಯೆ ಎಂಬುದು ಮನವರಿಕೆಯಾಗುತ್ತಿದೆ. ಮಗನ ಸಾವಿನಲ್ಲ ಅನುಮಾನ ಇದ್ದು, ಸಮಗ್ರ ತನಿಖೆ ನಡೆಸಿ, ನ್ಯಾಯ ಕಲ್ಪಿಸಿ ಎಂದು ಎಸ್ಪಿ ಕಛೇರಿಗೂ ನಾಲ್ಕೈದು ಬಾರಿ ಅಲೆದರೂ ಸ್ಪಂದಿಸಿಲ್ಲ ಎಂದು ಮಹಿಳೆಯೊಬ್ಬರು ವೇದಿಕೆಯಲ್ಲೇ ಕಣ್ಣೀರು ಹಾಕಿದರು.

ಅಹವಾಲು ಆಲಿಸಿದ ಸಚಿವ ಎಂ.ಬಿ.ಪಾಟೀಲ, ಸದರಿ ಪ್ರಕರಣದಲ್ಲಿ ಸಮಗ್ರವಾಗಿ ಮರು ತನಿಖೆ ನಡೆಸಬೇಕು, ತನಿಖಾಧಿಕಾರಿಯನ್ನು ಬದಲಿಸಿ ಎಂದು ಎಸ್ಪಿ ಅವರಿಗೆ ನಿರ್ದೇಶನ ನೀಡಿದರು.

ಕೊಳಚೆ ಪ್ರದೇಶದಲ್ಲಿ ಬಡವರಿಗೆ ಹಂಚಬೇಕಿದ್ದ ಬಹುತೇಕ ಮನೆಗಳು ಪೊಲೀಸರು, ರಾಜಕೀಯ ಪುಡಾರಿಗಳು, ಉಳ್ಳವರು, ಸಿರಿವಂತರ ಪಾಲಾಗಿವೆ. ಪರಿಣಾಮ ಕೊಳಚೆ ಪ್ರದೇಶದ ಬಹುತೇಕ ಮನೆಗಳಲ್ಲಿ ಬಡವರು ಬಾಡಿಗೆ ನೀಡಿ ವಾಸ ಮಾಡುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದೆ ಎಂದು ಸ್ವಯಂ ಸಚಿವರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೊಳಚೆ ಪ್ರದೇಶದಲ್ಲಿರುವ ಮನೆಗಳಲ್ಲಿ ಮಾಲೀಕರು ಯಾರು, ಬಾಡಿಗೆ ಇರುವವರು ಯಾರು ಎಂಬೆಲ್ಲ ಸಮಗ್ರ ತನಿಖೆ ನಡೆಸಿ, ತಮಗೆ ತುರ್ತಾಗಿ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.