ಸಿಡಿಲಿಗೆ ಬಲಿಯಾದ ಕುರಿಗಾರರ ಕುಟುಂಬಕ್ಕೆ ಪರಿಹಾರಕ್ಕೆ ಮನವಿ
Team Udayavani, Apr 21, 2022, 2:50 PM IST
ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮ ಬಳಿ ಸೋಮವಾರ ಸಿಡಿಲು ಬಡಿದು ಚಿಕ್ಕೋಡಿ ಮೂಲದ ಕುರಿಗಾರರು ಹಾಗೂ ಕುರಿಗಳು ಮೃತಪಟ್ಟಿವೆ. ಮೃತರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾ ಕುರಿಗಾರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಜೋಡಕುರಳಿ ಗ್ರಾಮದ ಸಂಚಾರಿ ಕುರಿಗಾರರಾದ ಬೀರಪ್ಪ ಬಡೆಗೋಳ, ಮಹೇಶ ಬಡೆಗೊಳ ಮೃತಪಟ್ಟಿದ್ದಾರೆ. ಅಲ್ಲದೆ ಅವರ 9 ಕುರಿಗಳು ಮೃತಪಟ್ಟಿವೆ. ಇವರನ್ನೇ ನಂಬಿದ್ದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಸಂಚಾರಿ ಬಡ ಕುರಿಗಾರರ ಕುಟುಂಬಗಳಿಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಕೂಡಲೇ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಯಿಂದ ತಲಾ 5 ಲಕ್ಷ ರೂ. ಹಾಗೂ ಸಾವಿಗೀಡಾದ ಪ್ರತಿ ಕುರಿಗೆ 15 ಸಾವಿರ ರೂ.ದಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.
ಕುರಿಗಾರ ಸಂಘದ ಜಿಲ್ಲಾಧ್ಯಕ್ಷ ಬೀರಪ್ಪ ಜುಮನಾಳ, ರಾಯಣ್ಣ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ, ಬಸವರಾಜ ಕಂಕಣವಾಡಿ, ನಿವರ್ತಿ ಯರನಾಳ, ಗೋಲ್ಲಾಳೇಶ್ವರ ಕಗ್ಗೂಡ, ಪರಶುರಾಮ ರೋಣಿಹಾಳ, ದುಂಡಪ್ಪ ಗೊಳಸಂಗಿ, ಸಂತೋಷ ಬೂದಿಹಾಳ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ