ನ್ಯಾಯಯುತ ಬೇಡಿಕೆ ಈಡೇರಿಸಲು ಮನವಿ


Team Udayavani, Mar 15, 2022, 5:04 PM IST

23protest

ವಿಜಯಪುರ: ಅಂಗನವಾಡಿ ನೌಕರರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಸರ್ಕಾರ-ನೌಕರರ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಬಗೆಹರಿಸಲು ಹಾಗೂ ಹೋರಾಟ ನಿರತ ಮಹಿಳಾ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಯ ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಐಯುಟಿಯುಸಿ ಹಾಗೂ ಸ್ಕೀಂ ವರ್ಕರ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ವೇಳೆ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ ಯಾದಗಿರಿ ಮಾತನಾಡಿ, ಪ್ರಧಾನ ಮಂತ್ರಿಗಳ ಘೋಷಣೆಯಂತೆ ಹೆಚ್ಚುವರಿ ಗೌರವ ಧನ ನೀಡುವುದಕ್ಕಾಗಿ ಕೇಂದ್ರ ಸರ್ಕಾರ ಶೇ. 60 ಹಣವನ್ನು ಹರಿಯಾಣ ಸರ್ಕಾರಕ್ಕೆ ಹಸ್ತಾಂತರಿಸಿದರೂ ರಾಜ್ಯ ಸರ್ಕಾರ ಈ ಗೌರವಧನದ ಹಣವನ್ನು ಅಂಗನವಾಡಿ ನೌಕರರಿಗೆ ನೀಡುತ್ತಿಲ್ಲ. ಕೊರೊನಾ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಾವನ್ನಪ್ಪಿದ್ದಾರೆ. ಸರ್ಕಾರ ಈವರೆಗೂ ಸಂತ್ರಸ್ತ ಕುಟುಂಬಗಳಿಗೆ ಒಂದೇ ಒಂದು ಪೈಸೆ ಮಂಜೂರು ಮಾಡಿಲ್ಲ. ವಿಧಾನ ಸೌಧದಲ್ಲಿ ಘೋಷಣೆ ಮಾಡಿರುವುದೂ ಸೇರಿದಂತೆ ಯಾವುದೇ ಬೇಡಿಕೆಗಳಿಗೆ ವರ್ಷಗಳು ಕಳೆದರೂ ಪರಿಹಾರ ನೀಡಿಲ್ಲ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಅನಿವಾರ್ಯವಾಗಿ ಹೋರಾಟಕ್ಕೆ ಇಳಿದಿದ್ದಾರೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು ಸರ್ಕಾರ ಅವುಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು ಡಿಸೆಂಬರ್‌ 8, 2021ರಿಂದ ಮುಷ್ಕರದಲ್ಲಿದ್ದಾರೆ. ಮೈ ಕೊರೆಯುವ ಛಳಿಯ ನಡುವೆಯೂ ಸಹ ಈ ಬಡ ಮಹಿಳೆಯರು ಉದ್ಯಾನವನಗಳ ಬಯಲಿನಲ್ಲಿ ಧರಣಿ ಕುಳಿತಿದ್ದಾರೆ. ಜನೆವರಿ 12, 2022ರಂದು ಸಮನ್ವಯ ಸಮಿತಿಯ ಕರೆಯ ಮೇರೆಗೆ ಹರಿಯಾಣದಾದ್ಯಂತ ನಡೆದ “ಜೈಲ್‌ ಭರೋ ಚಳವಳಿ’ ವೇಳೆ ಸಹಸ್ರಾರು ಜನರ ಬಂಧನ ನಡೆಯಿತು.

ಬಹುತೇಕ ನೌಕರರು ನ್ಯಾಯಾಂಗ ಬಂಧನಕ್ಕೊಳಗಾದರು. ಫೆಬ್ರವರಿ 14ರಿಂದ ಕರ್ನಾಲ್‌ ನಲ್ಲಿ ರಾಜ್ಯಮಟ್ಟದ ಮಹಾಪಧವ್‌ (ಮಹಾನಡಿಗೆ) ನಡೆಯುತ್ತಿದೆ. ಮಾರ್ಚ್‌ 3, 2022ರಂದು ಹೋರಾಟನಿರತ ಕಾರ್ಮಿಕರು “ಅಸೆಂಬ್ಲಿ ಛಲೋ’ ಆಯೋಜಿಸಿದರು. ಈ ಚಳವಳಿಯನ್ನು ವಿಫಲಗೊಳಿಸಲು ಹರಿಯಾಣ ಸರ್ಕಾರ ದಮನಕಾರಿ ಕ್ರಮಗಳನ್ನು ಅನುಸರಿಸಿತು. ಪೊಲೀಸರು ಬಡ ಮಹಿಳಾ ಕಾರ್ಮಿಕರನ್ನು ಅವರ ಗಮ್ಯಸ್ಥಾನಕ್ಕೆ ಹೋಗದಂತೆ ಬಲವಂತವಾಗಿ ತಡೆದರು. ಅಮಾನವೀಯವಾಗಿ ಜಗಳವಾಡಿದರು, ನಿಂದಿಸಿದರು. ಬಂಧಿಸಿ ಅವರನ್ನು ಅವರ ಊರುಗಳಿಂದ ಮೈಲುಗಳಷ್ಟು ದೂರ ಒಯ್ದು ಎಸೆಯಲಾಯಿತು.

ಕಾರ್ಮಿಕರು ಬಾಡಿಗೆಗೆ ಪಡೆದಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ಹಲವೆಡೆ ಸುಳ್ಳು ಪ್ರಕರಣಗಳೂ ದಾಖಲಾಗಿವೆ. ಇಂತಹ ಪೊಲೀಸ್‌ ಕ್ರಮದ ವಿರುದ್ಧ ಮಾರ್ಚ್‌ 5ರಂದು ಎಲ್ಲ ಜಿಲ್ಲೆಗಳ ಪೊಲೀಸ್‌ ಅಧೀಕ್ಷಕರ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರ ಪ್ರತಿಕೃತಿ ದಹಿಸಲಾಯಿತು.

ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ಅವುಗಳನ್ನು ಪರಿಹರಿಸುವ ಬದಲಾಗಿ, ಹರಿಯಾಣ ಸರ್ಕಾರ ಕಳೆದ 3 ತಿಂಗಳಿಂದ ನೌಕರರ “ಗೌರವ ಧನ’ ನಿಲ್ಲಿಸಿ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ. ಸುಮಾರು 450ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಲಾಗಿದೆ. ಇನ್ನೂ ನೂರಾರು ಕಾರ್ಯಕರ್ತೆಯರಿಗೆ ಸೇವೆ ಯಿಂದ ವಜಾಗೊಳಿಸುವ ನೋಟಿಸ್‌ ಜಾರಿ ಮಾಡುತ್ತಿದೆ. ಈ ಬಡ ಮಹಿಳಾ ನೌಕರರ ಮೇಲೆ ಪೊಲೀಸ್‌ ದಬ್ಟಾಳಿಕೆ ಸೇರಿದಂತೆ ಇತರ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಇದರ ವಿರುದ್ಧ ಕಾರ್ಯಕರ್ತೆಯರು ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.

ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಸರ್ಕಾರ ಬಡ ಮಹಿಳಾ ಕಾರ್ಮಿಕರ ಮೇಲೆ ಎಸಗುತ್ತಿರುವ ಎಲ್ಲ ದಮನಕಾರಿ ಕ್ರಮಗಳನ್ನು ನಿಲ್ಲಿಸಬೇಕು. ಈಗಾಗಲೇ ವಜಾಗೊಳಿಸಿದವರನ್ನು ಬೇಷರತ್ತಾಗಿ ಕೂಡಲೇ ಸೇವೆಗೆ ನಿಯೋಜಿಸಬೇಕು. ಅವರ ಬಹುದಿನಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸೌಹಾರ್ದಯುತ ಪರಿಹಾರ ಮಾರ್ಗ ಅನುಸರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಿಂಗಮ್ಮ ಮಠ, ಜಯಶ್ರೀ ಹಿರೇಮಠ, ಸುಮಂಗಲಾ ಬಾಗೇವಾಡಿ, ಲಲಿತ ಪವಾರ, ಲಕ್ಷ್ಮೀ ಲಕ್ಷೆಟ್ಟಿ, ಶಾರದಾ ಕಾಖಂಡಕಿ, ಶಾರದಾ ಸಾಲಕ್ಕಿ, ಸವಿತಾ ನಾಗರತ್ತಿ, ಮಹಾದೇವಿ ನಆಗೋಡ, ವಿಜಯಲಕ್ಷ್ಮೀ ಹುಣಶ್ಯಾಲ , ಜನಾಬಾಯಿ ಮಟ್ಯಾಳ, ಜ್ಯೋತಿ ನಡುಗಡ್ಡಿ, ಭಾಗೀರಥಿ ಕೆಂಗಲಗುತ್ತಿ ಇದ್ದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.