ಪಾಟೀಲ-ಕಾರಜೋಳ ವಿರುದ್ದ ಟೀಕೆ ನಿಲ್ಲಿಸಲು ಮನವಿ
Team Udayavani, Jan 20, 2022, 3:23 AM IST
ವಿಜಯಪುರ: ಮೇಕೆದಾಟು ವಿವಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ವಿವಿಧ ಠಾಣೆಗಳಲ್ಲಿ ಮೊಕದ್ದಮೆ ದಾಖಲಿಸಲು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಛಲವಾದಿ ಹಾಗೂ ದಲಿತ ಸಮುದಾಯಗಳ ಹಿರಿಯ ಮುಖಂಡರಾದ ಚಂದ್ರಶೇಖರ ಕೊಡಬಾಗಿ, ಸುರೇಶ ಘೋಣಸಗಿ, ಅಡಿವೆಪ್ಪ ಸಾಲಗಲ್ ಅವರು, ಯಾವ ಸಂಘಟನೆಗಳೂ ತಮ್ಮ ವರ್ತನೆಯಿಂದ ಸಚಿವರಾದ ಕಾರಜೋಳ ಹಾಗೂ ಮಾಜಿ ಸಚಿವ ಪಾಟೀಲ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು.
ಅರೋಪ-ಪ್ರತ್ಯಾರೋಪ ಇಷ್ಟಕ್ಕೇ ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಜಲಕ್ರಾಂತಿ ಮೂಲಕ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವಲ್ಲಿ ಪಾಟೀಲ ಅವರ ಕೊಡುಗೆ ಅನುಪಮ. ಟೀಕೆ-ಟಿಪ್ಪಣಿಗಳು ಗೌರವಯುತವಾಗಿ ಇರಬೇಕು. ಬದಲಾಗಿ ಕಾರಜೋಳ ಅವರಂಥ ಹಿರಿಯ ರಾಜಕೀಯ ನಾಯಕರು ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಿಸುವ, ಪ್ರಕರಣ ದಾಖಲಿಸುವ ಹಂತಕ್ಕೆ ಹೋಗಬಾರದು ಎಂದು ಮನವಿ ಮಾಡಿದರು. ತಮ್ಮಣ್ಣ ಮೇಲಿನಕೇರಿ, ರಾಹುಲ್ ಕುಬಕಡ್ಡಿ, ಸುನೀಲ ಉಕ್ಕಲಿ, ಅಶೋಕ ಚಲವಾದಿ, ಕುಮಾರ ಶಹಾಪುರ, ಸಂತೋಷ ಶಹಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ