![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಬೇಡಿಕೆ ಈಡೇರಿಸಲು ಜಿಪಂ ಅಧ್ಯಕ್ಷೆಗೆ ಮನವಿ
Team Udayavani, Oct 4, 2020, 4:29 PM IST
![ಬೇಡಿಕೆ ಈಡೇರಿಸಲು ಜಿಪಂ ಅಧ್ಯಕ್ಷೆಗೆ ಮನವಿ](https://www.udayavani.com/wp-content/uploads/2020/10/VP-TDY-2-1-620x372.jpg)
ಮುದ್ದೇಬಿಹಾಳ: ತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಸ್ಪತ್ರೆ ವಾಸ್ತವ್ಯಕ್ಕೆ ಆಗಮಿಸಿದ್ದ ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರಿಗೆ ಹಲವರು ಮನವಿ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ್ದಾರೆ.
ಕೇಂದ್ರದ ವೈದ್ಯಾಧಿಕಾರಿ ಡಾ| ರಂಗನಾಥ ವೈದ್ಯ ಸಲ್ಲಿಸಿದ ಮನವಿಯಲ್ಲಿ ಆಸ್ಪತ್ರೆಗೆ ಅಗತ್ಯ ಇರುವ ಸ್ಕ್ಯಾನರ್, ಜನರೇಟರ್, ಕಾಂಪೌಂಡ್ ಸೇರಿ 7 ಪ್ರಮುಖ ಬೇಡಿಕೆ ಈಡೇರಿಕೆಗೆ ಕೋರಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ಗುತ್ತಿಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ನೌಕರರು ಸಲ್ಲಿಸಿದ ಮನವಿಯಲ್ಲಿ ಕಳೆದ ತಿಂಗಳಿಂದ ಸಂಬಳ ಇಲ್ಲದೆ ತೊಂದರೆ ಉಂಟಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ರಾಜ್ಯಾದ್ಯಂತ ಹೊರ ಗುತ್ತಿಗೆ ನೌಕರರು ಸಮಾನ ವೇತನಕ್ಕಾಗಿ ಹೋರಾಟ ನಡೆಸಿದ್ದಾರೆ. ನಮ್ಮ ಸಮಸ್ಯೆ ಸರ್ಕಾರದ ಗಮನಕ್ಕೆ ತಂದು ಬಗೆಹರಿಸಬೇಕು ಎಂದು ಮನವಿ ಮಾಡಿಕೊಂಡರು. ರೈತರು ಸಲ್ಲಿಸಿದ ಮನವಿಯಲ್ಲಿ ಗ್ರಾಮದಿಂದ ಹೊಲಕ್ಕೆ ಹೋಗುವ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಕೂಡಲೇ ಜಿಪಂನಿಂದ ವಿಶೇಷ ಅನುದಾನ ಕೊಡಿಸಿ ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ಆಗ್ರಹಿಸಿದರು.
ಎಲ್ಲ ಮನವಿ ಸ್ವೀಕರಿಸಿದ ಸುಜಾತಾ ಅವರು ಈ ತಿಂಗಳಲ್ಲೇ ಆಸ್ಪತ್ರೆಗೆ ಅಗತ್ಯ ಇರುವ ಸ್ಕ್ಯಾನರ್, ಜನರೇಟರ್ ಸೇರಿ ಪ್ರಮುಖ ನಾಲ್ಕು ಬೇಡಿಕೆಯನ್ನು ನಂತರ ಹಂತ ಹಂತವಾಗಿ ಇನ್ನುಳಿದ ಬೇಡಿಕೆಯನ್ನು ಈಡೇರಿಸುವುದಾಗಿ, ಹೊರ ಗುತ್ತಿಗೆ ನೌಕರರ ಸಮಸ್ಯೆಯನ್ನು ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆಯುವುದಾಗಿ ಹಾಗೂ ಹದಗೆಟ್ಟ ರಸ್ತೆಗಳಿಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಲು ಗ್ರಾಪಂಗೆ ಸೂಚಿಸುವುದಾಗಿ ಭರವಸೆ ನೀಡಿದರು.
ಜಿಪಂ ಯೋಜನಾ ನಿರ್ದೆಶಕ ಸಿ.ಬಿ. ದೇವರಮನಿ, ಜಿಪಂ ಯೋಜನಾಧಿಕಾರಿ ಸಿ.ಬಿ. ಕುಂಬಾರ, ತಾಪಂ ಇಒ ಶಶಿಧರ ಶಿವಪುರೆ, ಜಿಪಂ ಸದಸ್ಯೆಯರಾದ ಪ್ರೇಮಬಾಯಿ ಚವ್ಹಾಣ, ಪದ್ಮಾವತಿ ವಾಲೀಕಾರ, ಗ್ರಾಪಂ ಮಾಜಿ ಅಧ್ಯಕ್ಷ ಜಾವೀದ್ ಇನಾಮದಾರ, ಕಾಂಗ್ರೆಸ್ ಧುರೀಣರಾದ ಸೋಮನಾಥ ಕಳ್ಳಿಮನಿ, ಸಂತೋಷ ಚವ್ಹಾಣ, ಮುತ್ತಣ್ಣ ಮುತ್ತಣ್ಣವರ, ಲಕ್ಷ್ಮಣ ಲಮಾಣಿ, ನಾಗರಾಜ ತಂಗಡಗಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.