ಐವರು ಸರಗಳ್ಳರ ಬಂಧನ: 13 ಲಕ್ಷ ಮೌಲ್ಯದ ಚಿನ್ನಾಭರಣ ವಶ


Team Udayavani, Feb 25, 2019, 9:47 AM IST

vij-3.jpg

ವಿಜಯಪುರ: ನಗರದಲ್ಲಿ ನಡೆದಿದ್ದ 10 ಸರಗಳ್ಳತನ ಪ್ರಕರಣ ಪತ್ತೆ ಮಾಡಿರುವ ಪೊಲೀಸರು, ಕಳ್ಳತನ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರೋಪದಲ್ಲಿ ಎರಡು ಪ್ರತ್ಯೇಕ ತಂಡಗಳ ಐವರನ್ನು ಬಂಧಿಸುವ ಮೂಲಕ 13,46,000 ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಂಡಿದ್ದಾರೆ.

ರವಿವಾರ ಚಿಂತನ ಹಾಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸರಗಳ್ಳರ ಬಂಧನ ಮಾಹಿತಿ ನೀಡಿದ ಎಸ್ಪಿ ಪ್ರಕಾಶ ನಿಕ್ಕಂ, ಗಾಂಧಿ ಚೌಕ್‌ ಪೊಲೀಸ್‌ ಠಾಣಾ ಪೊಲೀಸರು ಗಸ್ತು ಸಮಯದಲ್ಲಿ ಬಂಧಿಸಿರುವ ನವಬಾಗ ನಿವಾಸಿ ತೌಸೀಪ್‌ ಖಾಜಾಸಾಬ ಬಾಗವಾನ (21) ಹಾಗೂ ಹಕೀಂಚೌಕ್‌ ನಿವಾಸಿ ಅಜಮಾನ್‌ ಇಮಿಯಾಜ್‌ ಖುರೇಷಿ (22) ಎಂದು ಗುರುತಿಸಲಾಗಿದೆ. ಸದರಿ ಆರೋಪಿಗಳು ಆದರ್ಶನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 1 ಹಾಗೂ ಗಾಂಧಿಚೌಕ್‌ ಠಾಣೆ ವ್ಯಾಪ್ತಿಯಲ್ಲಿ 3 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದನ್ನು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಬಂಧಿ ತರಿಂದ 99 ಗ್ರಾಂ
ಬಂಗಾರದ ಆಭರಣ, ಕೃತ್ಯಕ್ಕೆ ಬಳಸಿದ ಬೈಕ್‌ ಸೇರಿದಂತೆ 3.46 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಫ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಇನ್ನು ಗೋಲಗುಮ್ಮಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದಿರಾನಗರ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಸೆರೆ ಸಿಕ್ಕಿರುವ ಮೂವರು ಸರಗಳ್ಳತನದ ಆರೋಪಿಗಳನ್ನು ಪುಲಕೇಶಿ ನಗರ ನಿವಾಸಿ ಮೊಹ್ಮದ್‌ ಖಾಲೀದ್‌ ಮೊಹ್ಮದ ಶಫಿಕ್‌ ಇನಾಮದಾರ (24), ರಜಪೂತ ಗಲ್ಲಿ ನಿವಾಸಿ ಅಮಿತ್‌ ರಾಮನಗೌಡ ಜಂಬಗಿ (21) ಹಾಗೂ ಕೆಎಚ್‌ಬಿ ನಿವಾಸಿ ಮೊಹ್ಮದ್‌ ಆರೋಫ್‌ ಶೇಖ ಅಮೀರ್‌ ಯರನಾಳ (21) ಎಂದು ಗುರುತಿಸಲಾಗಿದೆ. 

ಸದರಿ ಆರೋಪಿಗಳು ಜಲನಗರ, ಎಪಿಎಂಸಿ, ಆದರ್ಶನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಸರಗಳ್ಳತನ ಪ್ರಕರಣ, ಗೋಲಗುಮ್ಮಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎರಡು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನ್ನು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಬಂಧಿತರಿಂದ 210 ಗ್ರಾಂ ಬಂಗಾರದ ಆಭರಣ, ಕೃತ್ಯಕ್ಕೆ ಬಳಸಿದ 3 ಮೋಟಾರ್‌ ಸೈಕಲ್‌ ಸೇರಿದಂತೆ 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಳ್ಳಲಾಗಿದೆ ಎಂದು ವಿವರ ನೀಡಿದರು.

ವಶಕ್ಕೆ ಪಡೆದಿರುವ ಚಿನ್ನಾಭರಣಗಳನ್ನು ಅವುಗಳ ಮಾಲೀಕರಿಗೆ ಪೊಲೀಸ್‌ ಅಧಿಕಾರಿಗಳು ಹಸ್ತಾಂತರಿಸಿದರು. ನಗರದ ಜನತೆಯ ನಿದ್ದೆಗೆಡಿಸಿದ್ದ ಸರಗಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಎಎಸ್‌ಪಿ ನೇಮಗೌಡ ಹಾಗೂ ಡಿವೈಎಸ್‌ಪಿ ಅಶೋಕ ನೇತೃತ್ವದ ತನಿಖಾ ತಂಡ ಯಶಸ್ವಿಯಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್‌ ಅಧಿಕಾರಿಗಳಾದ ರವೀಂದ್ರ ನಾಯ್ಕೋಡಿ, ಸುನೀಲ ಕಾಂಬಳೆ, ಟಿ.ಬಿ. ನೀಲಗಾರ, ಸಂಜಯಕುಮಾರ ಕಲ್ಲೂರ, ವಿನೋದ ದೊಡಮನಿ, ಆರೀಫ್‌ ಮುಶಾಪುರಿ, ಸತೀಶ ಕಣಮೇಶ್ವರ, ಸಿಬ್ಬಂದಿಗಳಾದ ಆರ್‌.ಎ. ಪತ್ತಾರ, ಬಿ.ಕೆ. ಗುಡಿಮನಿ, ಎಚ್‌.ಎಚ್‌. ಜಮಾದಾರ, ಎನ್‌.ಕೆ.ಮುಲ್ಲಾ, ಎಚ್‌.ಎಚ್‌. ಮುಲ್ಲಾ, ಎಂ.ಆರ್‌. ಮಾಳಗೊಂಡ, ಆರ್‌. ಎಸ್‌. ಪೂಜಾರಿ, ಎಸ್‌.ವಿ. ಜೋಗಿನ, ವಿ.ಎನ್‌. ಶಹಾಪುರ, ಬಿ.ಎಂ. ಪವಾರ, ಎಸ್‌.ಎಸ್‌. ಮಾಳೇಗಾಂವ, ಪುಂಡಲೀಕ ಬಿರಾದಾರ, ಶಿವು ಅಳ್ಳಿಗಿಡದ, ಸಿದ್ದು ದಾನಪ್ಪಗೋಳ, ಬಿ.ಎಂ. ಶೇಖ್‌, ಸಂಜಯ ಬಡಚಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಎಸ್ಪಿ ಪ್ರಕಾಶ ನಿಕ್ಕಂ, ಬಹುಮಾನ ಘೋಷಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.