ವಿಜಯಪುರ: ಭೀಮಾ ತೀರದ ಹೆಸರಿನಲ್ಲಿ ಸುಲಿಗೆ ನಡೆಸಿದ ಮೂವರ ಬಂಧನ


Team Udayavani, Oct 24, 2020, 2:38 PM IST

ವಿಜಯಪುರ: ಭೀಮಾ ತೀರದ ಹೆಸರಿನಲ್ಲಿ ಸುಲಿಗೆ ನಡೆಸಿದ ಮೂವರ ಬಂಧನ

ವಿಜಯಪುರ: ಹತ್ಯೆಯಾಗಿರುವ ಭೀಮಾ ತೀರದ ಧರ್ಮರಾಜ ಚಡಚಣ ಹೆಸರಿನಲ್ಲಿ ಔಷಧಿ ಸಸ್ಯ ಉದ್ಯಮಿಯಿಂದ 1.37 ಲಕ್ಷ ರೂ. ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಸುಲಿಗೆಕೋರ ಆರೋಪಿಗಳನ್ನು ಕನ್ನೂರು ಗ್ರಾಮದ ಮುರಿಗೆಪ್ಪ ಉರುಫ್ ಅಪ್ಪು ನಾಗಪ್ಪ ಬೆಳ್ಳುಂಡಗಿ, ಬಸವರಾಜ ಸಿದ್ಧಲಿಂಗಪ್ಪ ಬೆಳ್ಳುಂಡಗಿ, ಮಕಣಾಪುರ ಗ್ರಾಮದ ದೇವೇಂದ್ರ ಮಹಾದೇವ ಒಡೆಯರ ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ವಿವರ ನೀಡಿದ್ದಾರೆ.

ಔಷಧಿ ಸಸ್ಯ ಉದ್ಯಮಿಯಾಗಿರುವ ನಗರದ ಗಚ್ಚಿಕಟ್ಟಿ ನಿವಾಸಿ ದೇವೇಂದ್ರ ಅಪ್ಪಾಸಾಹೇಬ ಒಡೆಯರ ಎಂಬವರಿಗೆ ಆ.15 ರಂದು ಕರೆ ಮಾಡಿ ಸಸಿಗಳನ್ನು ಖರೀದಿ ಮಾಡುವುದಿದೆ ಎಂದು ಆರೋಪಿಗಳು ಮೊಬೈಲ್ ಕರೆ ಮಾಡಿದ್ದಾರೆ. ಔಷಧಿ ಸಸ್ಯಗಳ ಖರೀದಿ ಕುರಿತು ಮಾತನಾಡಲು ಶಿರನಾಳ-ಬಬಲಾದ ಮಧ್ಯದ ಸ್ಥಳಕ್ಕೆ ಬರುವಂತೆ ಕರೆಸಿಕೊಂಡು ತಗಾದೆ ಆರಂಭಿಸಿದ್ದಾರೆ.

ನಾವು ಧರ್ಮರಾಜ ಚಡಚಣ ಕಡೆಯವರಿದ್ದು, ನೀನು ಮಹಿಳೆಯರಿಗೆ ಮೋಸ ಮಾಡಿದ್ದೀಯಾ ಹಾಗೂ ನಿನ್ನ ಕಛೇರಿಯಲ್ಲಿರುವ ಮಹಿಳೆಯನ್ನು ಇರಿಸಿಕೊಂಡಿದ್ದಿ. ನಿನ್ನನ್ನು ಹತ್ಯೆ ಮಾಡಿ ಹೊಳೆಗೆ ಎಸೆಯುತ್ತೇವೆ, ಹತ್ಯೆಯಿಂಧ ತಪ್ಪಿಸಿಕೊಳ್ಳಲು 1.20 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿ ಹಣ ತರಿಸಿಕೊಂಡು, ಆತನ ಬಳಿ ಇದ್ದ ಮೊಬೈಲ್ ಕೂಡ ಕಿತ್ತುಕೊಂಡಿದ್ದರು.

ಇದನ್ನೂ ಓದಿ:ಭಾರತದಲ್ಲಿ ಟ್ರಂಪ್ ಕಾರ್ಯಕ್ರಮ ಮಾಡದಿದ್ದರೆ ಕೋವಿಡ್ ಹರಡುತ್ತಿರಲಿಲ್ಲ: ರಾಮಲಿಂಗಾ ರೆಡ್ಡಿ

ಘಟನೆಯ ಕುರಿತು ಮೋಸಕ್ಕೆ ಸಿಕ್ಕಿ ಸುಲಿಗೆಗೆ ಗುರಿಯಾಗದ ದೇವೇಂದ್ರ ಒಡೆಯರ, ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದ್ದ. ಎಸ್ ಪಿ ಅನುಮಮ ಅಗರವಾಲ್, ಎಎಸ್ ಪಿ ರಾಮ ಅರಸಿದ್ಧಿ ಮಾರ್ಗದರ್ಶನದಲ್ಲಿ ತನಿಖೆಗೆ ಇಳಿದ ವಿಜಯಪುರ ಗ್ರಾಮೀಣ ಸಿಪಿಐ ಮಹಾಂತೇಶ ದಾಮಣ್ಣವರ ನೇತೃತ್ವದ ಪೊಲೀಸರ ತಂಡ ಚಾಣಾಕ್ಷತನದಿಂದ ಆರೋಪಿಗಳನ್ನು ಬಂಧಿಸಿ, ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಬಂಧಿಸುವಲ್ಲಿ ನೆರವಾದ ತನಿಖಾ ತಂಡದಲ್ಲಿದ್ದ ಎಸ್ ಐಗಳಾದ ಆನಂದ ಠಕ್ಕಣ್ಣವರ, ಆರ್.ಎ.ದಿನ್ನಿ, ಸಿಬ್ಬಂದಿಗಳಾದ ಎಂ.ಎಸ್.ಮುಜಾವರ, ಗುರು ಹಡಪದ, ಎಲ್.ಎಸ್.ಹಿರೇಗೌಡರ, ಆರ್.ಜಿ.ಅಂಜುಟಗಿ, ಪರಶುರಾಮ ವಲೀಕಾರ, ರವಿ ನಾಟೀಕರ, ಐ.ವೈ.ದಳವಾಯಿ, ಎಸ್.ಎಚ್.ಡೊಣಗಿ, ಎಸ್.ಆರ್.ಪೂಜಾರಿ ಇತರರಿಗೆ ಎಸ್ ಪಿ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.