7 ತಾಸು ವಿದ್ಯುತ್ ಪೂರೈಸಲು ಆಗ್ರಹಿಸಿ ಧರಣಿ
Team Udayavani, Mar 29, 2022, 3:32 PM IST
ಬಸವನಬಾಗೇವಾಡಿ: ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ತಾಸು ಪೂರ್ಣ ಪ್ರಮಾಣದ ವಿದ್ಯುತ್ ಸರಬುರಾಜು ಮಾಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಪಟ್ಟಣದ ವಿದ್ಯುತ್ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಿತು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ ಹಾಗೂ ಪಟ್ಟಣದ ಬಾಗಲಕೋಟೆ ಜಿಲ್ಲೆಯಲ್ಲಿ ಹಗಲು ಹೊತ್ತು ನಿರಂತರ 7 ತಾಸು ವಿದ್ಯುತ್ ಪೂರೈಸಲಾಗುತ್ತದೆ. ಆದರೆ ಬಸವನಬಾಗೇವಾಡಿ ತಾಲೂಕಿಗೆ ಮಾತ್ರ ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು.
ಹಗಲು ಹೊತ್ತಿನಲ್ಲಿ ನಿರಂತರ 7 ತಾಸು ವಿದ್ಯುತ್ ಪೂರೈಸಬೇಕೆಂದು ಆದೇಶವಿದೆ. ಆದರೆ ಬಸವನಬಾಗೇವಾಡಿ ತಾಲೂಕಿನ ಹೆಸ್ಕಾಂ ಇಲಾಖೆ ಅಧಿಕಾರಿಗಳು ಹಗಲು ಮತ್ತು ರಾತ್ರಿ ಕೇವಲ 2 ತಾಸು ವಿದ್ಯುತ್ ನೀಡುತ್ತಿದ್ದು. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಅಕಾಲಿಕ ಮಳೆಯಿಂದ ರೈತರ ಬೆಳೆ ಹಾಳಾಗಿದೆ. ಈಗ ಅಲ್ಪ ಸ್ವಲ್ಪ ಬೆಳೆಯನ್ನು ರೈತರು ಪಡೆಯಬೇಕಾದರೆ ವಿದ್ಯುತ್ನ ಸಮಸ್ಯೆಯಿಂದ ಅದು ಕೂಡಾ ಆಗುತ್ತಿಲ್ಲ ಎಂದು ಹೇಳಿದರು.
ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಬಸವನಬಾಗೇವಾಡಿ ತಾಲೂಕಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ತಾಸ್ ವಿದ್ಯುತ್ ಪೂರೈಕೆ ಮಾಡುವರೆಗೂ ನಮ್ಮ ಈ ಧರಣಿ ಸತ್ಯಾಗ್ರಹ ಕೈ ಬಿಡಲ್ಲ ಎಂದರು.
ಧರಣಿಯಲ್ಲಿ ಚನ್ನಬಸಪ್ಪ ಸಿಂಧೂರ, ಹೊನಕೇರಪ್ಪ ತೆಲಗಿ, ವಿಠ್ಠಲ ಬಿರಾದಾರ, ಶ್ರೀಶೈಲ ಸಾಸನೂರ, ಬಸವನಗೌಡ ಬಿರಾದಾರ, ಗುರಲಿಂಗಪ್ಪ ಪಡಸಲಗಿ, ಶಂಕರಪ್ಪ ಹಚಡದ, ಬಸವರಾಜ ಸುಂಟಾಣಿ, ಸಂಗಪ್ಪ ಪಡಸಲಗಿ, ರಾಯಪ್ಪ ದಳವಾಯಿ, ಗುರುಣ್ಣಗೌಡ ಬಿರಾದಾರ, ಪರಶುರಾಮ ದೊಡ್ಡಮನಿ, ಎಂ.ಜಿ. ಪಾಟೀಲ ಸೇರಿದಂತೆ ಅನೇಕರು ಭಾಗವಹಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ