ಪಕ್ಷಿ ಸಂಕುಲಕ್ಕೆ ದಣಿವಾರಿಸುವ ಪ್ರಯತ್ನ


Team Udayavani, Mar 4, 2022, 5:46 PM IST

21birds

ತಾಳಿಕೋಟೆ: ಇಂದಿನ ಆಧುನಿಕ ತಂತ್ರಜ್ಞಾನದಿಂದ ಪಕ್ಷಿ ಸಂಕುಲ ನಶಿಸುತ್ತಿದೆ. ಪಕ್ಷಿಗಳನ್ನು ಉಳಿಸಿ-ಸಂರಕ್ಷಿಸುವ ಗೋಜಿಗೆ ಯಾರೊಬ್ಬರೂ ಹೋಗುತ್ತಿಲ್ಲ. ಇಲ್ಲಿಯ ಶ್ರೀ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ಧಲಿಂಗ ಶ್ರೀಗಳು ಪಕ್ಷಿ ಸಂಕುಲ ಉಳಿವಿಗೆ ಪಣ ತೊಟ್ಟಿದ್ದು, ಅರವಟಿಗೆ ನಿರ್ಮಿಸಿ ದಣಿವಾರಿಸುವ ಮಹತ್ಕಾರ್ಯಕ್ಕೆ ಕೈಹಾಕಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ರಸ್ತೆಯಲ್ಲೆಲ್ಲ ಸುತ್ತಾಡಿ ಜನರಿಗೆ ಉಚಿತ ಮಾಸ್ಕ್ ನೀಡುವುದರೊಂದಿಗೆ ಜಾಗೃತಿ ಕೈಗೊಂಡಿದ್ದರು. ಎರಡನೇ ಅಲೆಯಲ್ಲಿ ಬಡಜನರಿಗೆ ಊಟ ನೀಡಿದ್ದರು. 52 ಗ್ರಾಮಗಳ 22 ಸಾವಿರ ಕುಟುಂಬಗಳಿಗೆ ಮಠದಿಂದ ದವಸ-ಧಾನ್ಯಗಳ ಕಿಟ್‌ ನೀಡಿ ಹಸಿದ ಹೊಟ್ಟೆ ತಣಿಸಿದ್ದರು. ಇದೀಗ ಬೇಸಿಗೆ ಆರಂಭವಾಗುತ್ತಿದ್ದು, ಬಿಸಿಲಿನ ಝಳಕ್ಕೆ ಪಕ್ಷಿ-ಪ್ರಾಣಿ ಸಂಕುಲ ನರಳುತ್ತಿರುವುದನ್ನು ಕಂಡು ಹೇಗಾದರೂ ಮಾಡಿ ಈ ಪಕ್ಷಿಗಳ ಉಳಿವಿಗೆ ಪ್ರಯತ್ನಿಸಬೇಕೆಂಬ ಆಲೋಚನೆ ಬಂದಿದ್ದೇ ತಡ, ನಿರುಪಯುಕ್ತವಾಗಿ ಬಿಸಾಕಿದ ಬಿಸ್ಲೇರಿ ಬಾಟಲ್‌ಗ‌ಳನ್ನು ಸಂಗ್ರಹಿಸಿ ಅವುಗಳನ್ನು ಎರಡು ಭಾಗವಾಗಿ ಕತ್ತರಿಸಿ ಎರಡೂ ಬದಿಗಳಲ್ಲಿ ದಾರದಿಂದ ಕಟ್ಟಿ ಪಟ್ಟಣದಲ್ಲಿರುವ ಪ್ರತಿ ಗಿಡಗಳಿಗೆ ಕಟ್ಟಿ ಅವುಗಳಿಗೆ ನೀರು ತುಂಬಿಸುವುದರ ಮೂಲಕ ಪಕ್ಷಿಗಳ ನೀರಿನ ದಾಹ ನೀಗಿಸುತ್ತಿದ್ದಾರೆ.

ಪಕ್ಷಿ ಸಂಕುಲ ಉಳಿಸಲು ಯುವಕರ ತಂಡ ಕಟ್ಟಿಕೊಂಡು ಸಂಚರಿಸುತ್ತಿರುವ ಶ್ರೀಗಳು, ಗಣೇಶ ನಗರ, ಶ್ರೀ ಖಾಸ್ಗತ ನಗರ, ಇಂದಿರಾ ನಗರ ಬಡಾವಣೆಗಳಲ್ಲಿ ಸಂಚರಿಸಿ ರಸ್ತೆ ಬದಿ ಬೆಳೆಸುತ್ತಿರುವ ಗಿಡಗಳಿಗೆ ಈ ಬಾಟಲ್‌ಗ‌ಳನ್ನು ಕಟ್ಟಿ ನೀರು ತುಂಬುತ್ತಿದ್ದಾರೆ. ಸಮಾಜಮುಖೀ ಕಾರ್ಯದಲ್ಲಿ ತೊಡಗಿರುವ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಜನರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಶ್ರೀಗಳ ಪ್ರಯತ್ನದ ಫಲವಾಗಿ ನೂರಾರು ಪಕ್ಷಿಗಳು ಮೂರೂ ಹೊತ್ತು ನೀರು ಕುಡಿಯುವಂತಾಗಿದೆ. ಚಿಟುಗು ಗುಬ್ಬಿ, ನೀಲಿ ಬಣ್ಣದ ಹಕ್ಕಿ, ಮರಕುಟುಕ, ಗುಬ್ಬಚ್ಚಿ, ಕಾಗೆ, ಗಿಳಿ, ಸಾಂಬಾರು ಕಾಗೆ ಸೇರಿದಂತೆ ಅನೇಕ ಪಕ್ಷಿಗಳು ದಾಹ ನೀಗಿಸಿಕೊಂಡು ದಣಿವಾರಿಸಿಕೊಳ್ಳುತ್ತಿವೆ.

ಪರಿಸರ ಉಳಿಯಬೇಕು. ಪಕ್ಷಿ ಸಂಕುಲ ಉಳಿಯಬೇಕು. ಹೀಗಾಗಿ ನಿರುಪಯಕ್ತ ಬಿಸ್ಲೇರಿ ಬಾಟಲ್‌ ಬಳಸಿ ಅರವಟ್ಟಿಗೆ ಮಾಡಲಾಗುತ್ತಿದೆ. ಇದಕ್ಕೆ ಯುವಕರ ತಂಡವೂ ಕೈಜೋಡಿಸಿದೆ. ಈಗಾಗಲೇ ಸಾವಿರ ಗಿಡ- ಮರಗಳಿಗೆ ಅರವಟಿಗೆ ಸಿದ್ಧಪಡಿಸಲು ಯೋಜನೆ ಹಾಕಿಕೊಂಡಿದ್ದೇವೆ. ನಿತ್ಯ ಸದ್ಯ 6 ತಂಡಗಳು ಪ್ರತಿನಿತ್ಯ ಅರವಟಿಗೆಗೆ ನೀರು ಹಾಕುವ ಕಾರ್ಯದಲ್ಲಿ ತೊಡಗಿಕೊಂಡಿವೆ. -ಬಾಲಶಿವಯೋಗಿ ಸಿದ್ಧಲಿಂಗ ದೇವರು, ಶ್ರೀ ಖಾಸ್ಗತ ಮಠ, ತಾಳಿಕೋಟೆ

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.