ಪಾಟೀಲ ಮನೆಗೆ ಮುತ್ತಿಗೆಗೆ ಯತ್ನ
Team Udayavani, Jan 11, 2022, 5:26 PM IST
ವಿಜಯಪುರ: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆ ಹಾಗೂ ಸಚಿವ ಕಾರಜೋಳ ಬೆಂಬಲಿಗರು ಮಾಜಿ ಸಚಿವ ಎಂ.ಬಿ. ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮುನ್ನೆಚ್ಚರಿಕೆಯಾಗಿ ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು. ಸೊಲ್ಲಾಪುರ ರಸ್ತೆಯಲ್ಲಿರುವ ಎಂ.ಬಿ. ಪಾಟೀಲ ಅವರ ಮನೆಗೆ ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಲು ಮುಂದಾದ ದಲಿತ ಸಂಘಟನೆಯ ಕಾರ್ಯಕರ್ತರು ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಬೆಂಬಲಿಗರನ್ನು ಪೊಲೀಸರು ದೂರದಲ್ಲೇ ತಡೆಯಲು ಮುಂದಾದರು. ಈ ಹಂತದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ. ದಲಿತ ಸಮುದಾಯದ ರಾಜಕೀಯ ಹಿರಿಯ ನಾಯಕರಾದ ಅವರ ವಿರುದ್ಧ ಮಾತನಾಡುವಾಗ ಎಂ.ಬಿ. ಪಾಟೀಲ ಅವರು ಅಸಂಬದ್ಧ ಹಾಗೂ ಹಗುರ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಕೂಡಲೇ ಎಂ.ಬಿ. ಪಾಟೀಲ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ