ಬಬಲೇಶ್ವರ ತಾಲೂಕು ಪ್ರಥಮ ಅಕ್ಷರ ಜಾತ್ರೆ

ಸರ್ವಾಧ್ಯಕ್ಷೆಯಾಗಿ ಭಾರತಿ ಪಾಟೀಲ ಆಯ್ಕೆ ಸಾಹಿತಿ ಕುಂ. ವೀರಭದ್ರಪ್ಪ ಸಮ್ಮೇಳನಕ್ಕೆ ಚಾಲನೆ

Team Udayavani, Jan 24, 2020, 5:14 PM IST

24-Jnauary-24

ವಿಜಯಪುರ: ಜಿಲ್ಲೆಯಲ್ಲಿ ನೂತನವಾಗಿ ಅಸಿತ್ವಕ್ಕೆ ಬಂದಿರುವ ಬಬಲೇಶ್ವರ ತಾಲೂಕು ಕನ್ನಡ ಸಾಹಿತ್ಯದ ಮೊದಲ ಸಮ್ಮೇಳನ ಜ.30ರಂದು ಬಬಲೇಶ್ವರ ನಗರದಲ್ಲಿ ನಡೆಯಲಿದೆ. ಸ್ಥಳೀಯರಾದ ಭಾರತಿ ಪಾಟೀಲ ಸರ್ವಾಧ್ಯಕ್ಷತೆಯಲ್ಲಿ ಜರುಗಲಿರುವ ಸಮ್ಮೇಳನಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಸಾಪ ಬಬಲೇಶ್ವರ ತಾಲೂಕು ಅಧ್ಯಕ್ಷ ಮಹದೇವ ರೆಬಿನಾಳ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದ ಅವರು, ಬಬಲೇಶ್ವರ ಗ್ರಾಮದ ಶಾಂತವೀರ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ಅಕ್ಷರ ಜಾತ್ರೆಯ ಸಕಲ ಸಿದ್ಧತೆ ಅಂತಿಮ ಹಂತದಲ್ಲಿವೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಬಲೇಶ್ವರ ತಾಲೂಕು ಹಾಗೂ ಕನ್ನಡ ಸಾಹಿತ್ಯದ ಮೊದಲ ಸಮ್ಮೇಳನ ಹಲವು ಮಹತ್ವಗಳನ್ನು ಹೊಂದಿದೆ ಎಂದರು.

ಮಕ್ಕಳ ಸಾಹಿತ್ಯದ ಮೂಲಕ ನಾಡಿಗೆ ಕೀರ್ತಿ ತಂದಿರುವ ಬಬಲೇಶ್ವರದ ದಿ| ಶಂ.ಗು. ಬಿರಾದಾರ ಅವರ ಹೆಸರು ವೇದಿಕೆ ಇರಿಸಲಾಗಿದ್ದು, ದಾಸೋಹ ಮನೆಗೆ ನೀಲಮ್ಮಗೌಡತಿ ಬಿರಾದಾರ, ಪುಸ್ತಕ ಮಳಿಗೆಗಳಿಗೆ ಕಾಶೀಬಾಯಿ ದೇಸಾಯಿ ಜೈನಾಪೂರ ವಿವಿಧ ಮಹಾದ್ವಾರಗಳಿಗೆ ಕಾಖಂಡಕಿ ಮಹಿಪತಿದಾಸರು, ಕೆ.ಎನ್‌. ಸಾಳುಂಕೆ, ಕಾಲಜ್ಞಾನಿ ಚಿಕ್ಕಪ್ಪಯ್ಯ, ನಿಡೋಣಿ ಶಿವಪಾರ್ವತಿ, ಉಪ್ಪಲಗಿರಿ ಸಂಗಮನಾಥ, ಅಂಬಲಿ ಚೆನ್ನಬಸಪ್ಪ, ತಿಗಣಿಬಿದರಿ ಲಾಲ್‌ಸಾಹೇಬ ಹೀಗೆ ಅನೇಕ ಮಹಾನ್‌ ಚೇತನರ ಹೆಸರನ್ನು ಇರಿಸಲಾಗಿದೆ.

ಜ.30ರಂದು ಬೆಳಗ್ಗೆ ವಿಜಯಪುರ ತಾಪಂ ಅಧ್ಯಕ್ಷ ಕಾಳಪ್ಪ ಬೆಳ್ಳುಂಡಗಿ ರಾಷ್ಟ್ರಧ್ವಜಾರೋಹಣ, ಬಬಲೇಶ್ವರ ಇಒ ಬಸವಂತರಾಯಗೌಡ ಬಿರಾದಾರ ನಾಡಧ್ವಜ
ಹಾಗೂ ಪ್ರೊ | ರೆಬಿನಾಳ ಕಸಾಪ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಬಲೇಶ್ವರದ ಸಿದ್ದೇಶ್ವರ ದೇವಾಲಯದಿಂದ ಸಮ್ಮೇಳನದ ಸರ್ವಾಧ್ಯಕ್ಷರ ಭವ್ಯ ಮೆರವಣಿಗೆಗೆ ಜಿಪಂ ಸದಸ್ಯ ಉಮೇಶ ಕೋಳಕೂರ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 10ಕ್ಕೆ ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ಸಮ್ಮೇಳನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶಿವಾಚಾರ್ಯರು, ಸಿದ್ಧಲಿಂಗೇಶ್ವರ ಸ್ವಾಮಿಗಳು, ಅಭಿನವ ಮುರುಘೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪ್ರೊ | ರೆಬಿನಾಳ ವಿವರಿಸಿದರು. ಕಸಾಪ ತಾಲೂಕು ಕಾರ್ಯದರ್ಶಿ ಪ್ರೊ | ಮಲ್ಲಿಕಾರ್ಜುನ ಅವಟಿ, ಸಾಹಿತಿ ಮುರುಗೇಶ ಸಂಗಮ ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.