ಕೋವಿಡ್ ವಾರಿಯರ್ಸ್ ಗೆ ಸನ್ಮಾನ-ಸಸಿ ವಿತರಣೆ
Team Udayavani, Jun 20, 2020, 6:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳಗನೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಯೂತ್ ಮೂಮೆಂಟ್ ವತಿಯಿಂದ ಕೋವಿಡ್ ವಾರಿಯರ್ಸ್ ಗೆ ಅಭಿನಂದನೆ, ರಕ್ತದಾನ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಯುವ ಮುಖಂಡ ಪ್ರಸನ್ನಕುಮಾರ ಪಾಟೀಲ, ಯುವ ಮುಖಂಡ ಕೆ. ರಾಘವೇಂದ ಗುತ್ತೇದಾರ ಸಸಿಗೆ ನೀರುಣಿ, ರೈತರಿಗೆ ಸಸಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋವಿಡ್ ಮಹಾಮಾರಿ ತಡೆಗಟ್ಟಲು ಆರೋಗ್ಯ ಸೇವೆ ಮತ್ತು ಜಾಗೃತಿ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಪಪಂ ಪೌರಕಾರ್ಮಿಕರು, ಜೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ, ಪತ್ರಕರ್ತರು ಇತರೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಚೀನಾದ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಳಗಾನೂರು ಹಾಗೂ ಮಸ್ಕಿ ನಗರದ ಯುತ್ ಮೂಮೆಂಟ್ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮೌನೇಶ ಪೂಜಾರ, ಡಾ| ದೌಲಸಾಬ್ ಮುದ್ದಾಪುರ, ಮುಖಂಡರಾದ ಮಲ್ಲಿಕಾರ್ಜುನ ಬ್ಯಾಳಿ, ಮಲ್ಲಣ್ಣ ಅಂಬಾಡಿ, ವೀರೇಶ ಕಮತರ, ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಗೌಡನಭಾವಿ, ಭರತ ಶೇಠ್, ಎಬಿವಿಪಿ ರಾಜ್ಯದ ಪದಾಧಿಕಾರಿ ಮಲ್ಲಿಕಾರ್ಜುನ, ಸಂಚಾಲಕ ಎಂ.ಬಿ. ನಿರುಪಾದಿ, ಶಶಿ ಹಿರೇಮಠ, ಪಪಂ ಸದಸ್ಯ ರಾಜಶೇಖರ ಶಂಕರಬಂಡಿ, ರಾಕೇಶ ಪಾಟೀಲ, ಚಂದ್ರಶೇಖರ ನಾಯಕ, ಶರಣೇಗೌಡ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು