ಶಿವಸೇನೆ-ಎಂಇಎಸ್ ನಿಷೇಧಿಸಿ
Team Udayavani, Dec 18, 2021, 5:52 PM IST
ಆಲಮೇಲ: ಕೊಲ್ಲಾಪುರದಲ್ಲಿ ಕನ್ನಡ ಧ್ವಜ ಸುಟ್ಟು ಅವಮಾನಿಸಿದ ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟ ಮುಖಂಡನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರವೇ ತಾಲೂಕಾಧ್ಯಕ್ಷ ಅಶೋಕ ಭೂಸನೂರ ಆಗ್ರಹಿಸಿದರು.
ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ವಿವಿದ ಕನ್ನಡಪರ ಸಂಘಟನೆ ಮುಖಂಡರು ಪ್ರತಿಭಟಿಸಿ ಉಪ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಸಂಘಟನೆ ನಿಷೇಧಿಸಬೇಕು. ವಿಕೃತ ಸಂಘಟನೆಗಳಿಗೆ ಮಹಾರಾಷ್ಟ್ರ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ ಅವರು, ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗಂಗಾಧರ ಭೋವಿ, ಶಿವು ಕುರಕಾರ, ಚನ್ನು ಗುರಕಾರ, ಕಿರಣ ಪಾಟೀಲ, ದತ್ತು ತಳವಾರ, ರಾಕೇಶ ಉಪ್ಪಾರ, ಈರಣ್ಣ ಕಲ್ಲೂರ, ನಜೀರ್ ಅಲಗೂರ, ಹನುಮಂತ ಪೂಜಾರಿ, ಧರೆಪ್ಪ ಕುಂಬಾರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.