ಎಐಸಿಸಿ ಅಧ್ಯಕ್ಷ ಖರ್ಗೆ ಹತ್ಯೆಗೆ ಸಂಚಿನ ವಿಡಿಯೋ: ನಟಿ ರಮ್ಯಾ ಆಘಾತ

ಯಾವುದೇ ಸಂಘಟನೆ ನಿಷೇಧ ಎನ್ನುವುದೇ ತಪ್ಪು; ತಪ್ಪು ಮಾಡಿದರೆ ಕಾನೂನು ಇದೆ

Team Udayavani, May 6, 2023, 4:17 PM IST

ಎಐಸಿಸಿ ಅಧ್ಯಕ್ಷ ಖರ್ಗೆ ಹತ್ಯೆಗೆ ಸಂಚಿನ ವಿಡಿಯೋ: ನಟಿ ರಮ್ಯಾ ಆಘಾತ

ವಿಜಯಪುರ: ಕಾನೂನು ಬಾಹಿರ ಕೃತ್ಯ ಮಾಡುವ ಯಾವುದೇ ಸಂಘಟನೆ ಮೇಲೆ ಕ್ರಮ ಕೈಗೊಳ್ಳಲು ಕಾನೂನುಗಳಿವೆ. ಹೀಗಾಗಿ ಸಂಘಟನೆಗಳ ನಿಷೇಧ ಎನ್ನುವುದೇ ತಪ್ಪು. ಭಜರಂಗದ ನಿಷೇಧ ಎಂಬುದೂ ಸರಿಯಲ್ಲ ಎಂದು ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್, ಮಾಜಿ ಸಂಸದೆ ರಮ್ಯಾ ಅಭಿಪ್ರಾಯ ಪಟ್ಟರು.

ಶನಿವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಮಣಿಕಂಠ ರಾಠೋಡ ಮಾತನಾಡಿರುವ ಆಡಿಯೋ ವೈರಲ್ ಆಗಿದೆ ಎನ್ನುವುದು ನಿಜಕ್ಕೂ ಅಪಾಯಕಾರಿ. ರಾಜಕೀಯ ಇಷ್ಟು ಕೀಳು ಮಟ್ಟಕ್ಕೆ ಹೋಗಿರುವುದು ಅಘಾತಕಾರಿ ಸಂಗತಿ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಬೆಂಗಳೂರಿಗೆ ಬಂದಿರುವುದು ಒಳ್ಳೆಯದೇ, ಅವರಿಗೆ ಬೆಂಗಳೂರಿನ ವಾಸ್ತವಿಕ‌ ಸುಸ್ಥಿತಿ ಅರಿವಿಗೆ ಬಂದಿದೆ. ರಾಜಧಾನಿ ಜನ ಅನುಭವಿಸುವ ಕಷ್ಟಗಳು, ಗುಂಡಿಬಿದ್ದ ರಸ್ತೆಗಳ ದರ್ಶನವಾಗಲಿದೆ ಎಂದು ಛೇಡಿಸಿದರು.

ಡಬಲ್ ಎಂಜಿನ್ ಸರ್ಕಾರವಲ್ಲ, ಟ್ರಬಲ್ ಎಂಜಿನ್ ಸರ್ಕಾರ. ಪ್ರಧಾನಿ ಮೋದಿ ಮತ್ತವರ‌ ಕೇಂದ್ರ ಸಚಿವರ ತಂಡ ಕರ್ನಾಟಕ ರಾಜ್ಯದಲ್ಲೇ ಬಿಡುಬಿಟ್ಟು, ಚುನಾವಣೆ ಪ್ರಚಾರದಲ್ಲಿ ಓಡಾಡಲು ಕಾರಣವೇ ರಾಜ್ಯ ಸರ್ಕಾರದ ವೈಫಲ್ಯ ಎಂಬುದು ಸಾಬೀತಿಗೆ ಸಾಕ್ಷಿ ಎಂದು ಹರಿ ಹಾಯ್ದರು.

ಕಾವೇರಿ ತೀರ್ಪಿನ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾಗಿ ಎಂ.ಬಿ.ಪಾಟೀಲ ದೆಹಲಿಗೆ ಬಂದಿದ್ದರು. ಓರ್ವ ಸಚಿವರಾಗಿ ಅವರು ದೆಹಲಿಗೆ ಬರುವ ಅಗತ್ಯವೇ ಇರಲಿಲಿಲ್ಲ. ಆದರೆ ರಾಜ್ಯದ ನೀರು, ನೀರಾವರಿ ವಿಷಯದಲ್ಲಿ ಪಾಟೀಲ ಅವರು ಹೊಂದಿರುವ ಕಾಳಜಿ, ಆಸಕ್ತಿಯೇ ಇದಕ್ಕೆ ಸಾಕ್ಷಿ. ಹೀಗಾಗಿ ಓರ್ವ ಸ್ಟಾರ್ ಕ್ಯಾಂಪೇನರ್ ಆಗಿ ಅವರ ಬಬಲೇಶ್ವರ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ಸಂತಸ ತಂದಿದೆ ಎಂದರು.

ನನ್ನ ತಂದೆಗೆ ಎಂ.ಬಿ.ಪಾಟೀಲ ಅತ್ಮೀಯರೂ ಅಗಿದ್ದರು. ಸಂಸದೆಯಾಗಿದ್ದಾಗ ನನ್ನ ಗೆಲುವಿಗೆ ಶ್ರಮಿಸಿದ್ದರು. ಇಂಥ ಎಲ್ಲ ಕಾರಣಗಳು ಅವರ ಪರ ಪ್ರಚಾರ ಮಾಡಲು ಸಂತಸ ತಂದಿದೆ ಎಂದರು.

ಸುಮಲತಾ ರಾಜಕೀಯ ನಿಲುವು, ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದ ರಮ್ಯಾ, ತಾವು ಚುನಾವಣಾ ಸಕ್ರೀಯ ರಾಜಕಾರಣಕ್ಕೆ ಬರುವ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ಸಮಜಾಯಿಷಿ ನೀಡಿದರು.

ಬಬಲೇಶ್ವರ ಕ್ಷೇತ್ರದಲ್ಲಿ ನೀರಾವರಿ ಮಾಡಿರುವುದರಿಂದ ದ್ರಾಕ್ಷಿ, ಕಬ್ಬು ಬೆಳೆಯುತ್ತಿರುವ ಅಲ್ಲಿನ ಜನರಲ್ಲಿ ಕಾಂಗ್ರೆಸ್ ಪರ ತುಂಬಾ ಉತ್ಸಾಹ ಕಂಡು ಬರುತ್ತಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲ ಆಯ್ಕೆ ಖಚಿತವಾಗಿದೆ ಎಂದರು.

ಬಬಲೇಶ್ವರ ಬಿಜೆಪಿ ಅಭ್ಯರ್ಥಿ ತಮ್ಮ ಮಕ್ಕಳ ಕೈಗೆ ಗನ್ ಕೊಟ್ಟಿದ್ದಾರೆ. ಭವಿಷ್ಯದಲ್ಲಿ ಕ್ಷೇತ್ರಕ್ಕೆ ಇಂಥವರು ಆಯ್ಕೆಯಾದರೆ ಕ್ಷೇತ್ರದ ಜನರ ಮಕ್ಕಳ‌ ಕೈಗೆ ಗನ್, ಮದ್ಯದ ಬಾಟಲಿ ನೀಡುತ್ತಾರೆ. ಅಲ್ಲಿನ ಜನರ ಮಕ್ಕಳ ಕೈಗೆ ಪೆನ್ನು, ಪುಸ್ತಕ ಕೊಡುವವರು ಬೇಕಿದ್ದಾರೆಯೇ ಹೊರತು, ಗನ್ ಕೊಡುವವರಲ್ಲ ಎಂದು ಜನ ಹೇಳುತ್ತಿದ್ದಾರೆ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.