ಆಜಾನ್ : ಸುಪ್ರೀಂ ಕೋರ್ಟ್ ಅದೇಶ ಪಾಲನೆಗೆ ಸರ್ಕಾರ ಕ್ರಮಕೈಗೊಳ್ಳಲಿ : ಯತ್ನಾಳ
Team Udayavani, May 8, 2022, 3:53 PM IST
ವಿಜಯಪುರ : ಮಸೀದಿಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ಮೀರಿ ಅವೈಜ್ಞಾನಿಕ ಪ್ರಮಾಣದ ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದನ್ನು ಸರ್ಕಾರ ನಿರ್ಬಂಧಿಸಬೇಕು. ಇಲ್ಲವಾದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಕರೆ ನೀಡಿರುವ ಮಂದಿರಗಳಲ್ಲಿ ಹನುಮಾನ್ ಚಾಲೀಸಾ ಪಠಣ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಭಾನುವಾರ ಹಿಟ್ನಳ್ಳಿ ಗ್ರಾಮದಲ್ಲಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣದ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಸರ್ಕಾರ ಕೈಗೊಂಡ ಮಾದರಿಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಮಸೀದಿಗಳಲ್ಲಿ ಆಜಾನ್ ಧ್ವನಿವರ್ಧಕ ನಿಗದಿತ ಡೆಸಿಬಲ್ ಮಿತಿಗೊಳಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಧ್ವನಿವರ್ಧಕ ಮೂಲಕ ಭಜಿಸಲು ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ನಿರ್ಲಕ್ಷದ ವರ್ತನೆಯೇ ರಾಜ್ಯದಲ್ಲಿ ಸಂಘರ್ಷಕ್ಕೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ : ಭಾರತದಿಂದ ಹೊರ ನಡೆದ ಟೆಸ್ಲಾ ತಂಡ : ಎಲಾನ್ ಮಸ್ಕ್ ಕನಸು ಭಗ್ನ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ