ಎಲ್ಲಾ ಅರ್ಹ ಶಾಸಕರಿಗೆ ಕೊಟ್ಟಂತೆ ಕುಮಟಳ್ಳಿಗೆ ಸಚಿವ ಸ್ಥಾನ ಕೊಡಲಿಲ್ಲ ಯಾಕೆ: ಯತ್ನಾಳ


Team Udayavani, Feb 10, 2020, 3:14 PM IST

yatnal

ವಿಜಯಪುರ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶಾಸಕ ಸ್ಥಾನ ತ್ಯಾಗ ಮಾಡಿ, ಮತ್ತೆ ಗೆದ್ದಿರುವ ಎಲ್ಲಾ ಅರ್ಹ ಶಾಸಕರಲ್ಲಿ ಮಹೇಶ ಕುಮಟಳ್ಳಿ ಹೊರತಾಗಿ ಎಲ್ಲರನ್ನೂ ಮಂತ್ರಿ ಮಾಡಿದ್ದೀರಿ. ಕುಮಟಳ್ಳಿಯನ್ನು ಕಡೆಗಣಿಸಿದ್ದು ಏಕೆ, ಈ ವಿಷಯದಲ್ಲಿ ತಪ್ಪು ಸಂದೇಶ ರವಾನೆ ಆಗಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದ್ದಾರೆ.

ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಳಿಕ ಪ್ರಾದೇಶಿಕ ಅಸಮಾನತೆ ಕಾರಣವಾಗಿದೆ. ಈಗಾಗಲೇ ಬೆಳಗಾವಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮತ್ತೆ ಕೆಲವರಿಗೆ ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡಲಾಗುತ್ತಿದೆ. ತ್ಯಾಗ ಮಾಡಿದ ಶಾಸಕ ಕುಮಟಳ್ಳಿ ಅವರನ್ನು ಕಡೆಗಣಿಸಲಾಗಿದೆ. ಮುಂಬೈ ಕರ್ನಾಟಕ ವಿಜಯಪುರ ಜಿಲ್ಲೆ, ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಇದರಿಂದಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಿದೆ. ಇಂಥ ಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಬ್ಬ ಶಾಸಕರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡುವುದು ಎಷ್ಡು ಸರಿ ಎಂದು ಪರೋಕ್ಷವಾಗಿ ಉಮೇಶ ಕತ್ತಿ ಅವರನ್ನು ಮಂತ್ರಿ ಮಾಡುವ ಭರವಸೆ ನೀಡಿದ್ದನ್ನು ಆಕ್ಷೇಪಿಸಿದರು.

ಇದಲ್ಲದೆ ಈಗಾಗಲೇ ಗೆದ್ದ ಅರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬರುವ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಾಸಕಾಂಗ ಸಭೆ ಕರೆದು ಶಾಸಕರ ಭಾವನೆ ಅರಿಯಬೇಕು. ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಜೊತೆಗೆ ಬಜೆಟ್ ನಲ್ಲಿ ಎಲ್ಲ ಶಾಸಕರಿಗೂ ಸಮಾನ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಿಸಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.