Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು
Team Udayavani, Jun 6, 2023, 8:48 PM IST
ವಿಜಯಪುರ: ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು ಎಂದು ಟ್ವೀಟ್ ಮಾಡಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟ್ವೀಡ್ ಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದು ಬಿಜೆಪಿ ಶಾಸಕ ಯತ್ನಾಳ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು ಎಂದು ಕುಟುಕಿದ್ದಾರೆ.
ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು…
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು…
ಎಂದಿರುವ @BasanagoudaBJP ಅವರೇ ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು… https://t.co/pWSm3H9yuK— M B Patil (@MBPatil) June 6, 2023
ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ನಸವು ಕಲಿಯಬೇಕಿಲ್ಲ ಎಂದು ಬಿಜೆಪಿ ಶಾಸಕ ಯತ್ನಾಳ ಗೆ ಸಚಿವ ಪಾಟೀಲ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…