ಮೋದಿ ಮಾದರಿ ಅನುಸರಿಸಲಿ ಬೊಮ್ಮಾಯಿ: ಯತ್ನಾಳ್‌


Team Udayavani, Oct 8, 2022, 11:30 PM IST

ಮೋದಿ ಮಾದರಿ ಅನುಸರಿಸಲಿ ಬೊಮ್ಮಾಯಿ: ಯತ್ನಾಳ್‌

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮುಖ ಐದಾರು ಖಾತೆಗಳನ್ನು ತಮ್ಮ ಖಾತೆಗಳನ್ನು ಇರಿಸಿಕೊಂಡಿರುವುದು ಆಡಳಿತ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿ ಆಗಿದ್ದಾಗ ಯಾವ ಖಾತೆಯನ್ನೂ ಹೊಂದಿರಲಿಲ್ಲ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಸರಿಸಲಿ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ನಗರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆ ಹೊರತಾಗಿ ಉಳಿದ ಎಲ್ಲ ಖಾತೆಗಳನ್ನು ಸಂಪುಟದ ಸಹೋದ್ಯೋಗಿಗಳಿಗೆ ಹಂಚಲಿ ಎಂದರು.

ಈಶ್ವರಪ್ಪರಿಗೆ
ಸಚಿವ ಸ್ಥಾನ ನೀಡಲಿ
ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಏನಾದರೊಂದು ಆಗಲಿ. ಸುಳ್ಳು ಆರೋಪ ಹೊರಿಸಿ ಕೆ.ಎಸ್‌. ಈಶ್ವರಪ್ಪ ಅವರಿಂದ ರಾಜೀ ನಾಮೆ ಪಡೆದಿದ್ದನ್ನು ಮರಳಿ ಕೊಡಲಿ. ಆರೋಪ ಮುಕ್ತರಾದ ಮೇಲೂ ಅವರಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳಲಿ. ದೊಡ್ಡ ಖಾತೆಗಳು ಖಾಲಿ ಇದ್ದು, ಸಂಪುಟ ಪುನಾರಚನೆ ಸಂದರ್ಭ ಸಚಿವ ಸ್ಥಾನ ದಕ್ಕಿದರೆ ಜಿಲ್ಲಾ ಉಸ್ತುವಾರಿ ಆಗುತ್ತೇನೆ ಎಂದರು.

ಹೊರಟ್ಟಿ ಸಭಾಪತಿ ಆಗಲಿ
ಜೆಡಿಎಸ್‌ ಪಕ್ಷದಲ್ಲಿದ್ದ ಬಸವರಾಜ ಹೊರಟ್ಟಿ ಅವರನ್ನು ಮೇಲ್ಮನೆ ಸಭಾಪತಿ ಮಾಡುವ ಭರವಸೆಯೊಂದಿಗೆ ಬಿಜೆಪಿಗೆ ಕರೆ ತರಲಾಗಿದೆ. ಅವರಿಗೆ ನೀಡಿರುವ ಭರವಸೆಯನ್ನು ಈಡೇರಿಸಲಿ. ಇಲ್ಲದಿದ್ದರೆ ತಪ್ಪು ಸಂದೇಶ ರವಾನಿಸಿದಂತಾಗಲಿದ್ದು, ಪಕ್ಷದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದರು.

ರೈಲಿನ ಹೆಸರು
ಬದಲಾವಣೆಗೆ ಸ್ವಾಗತ
ಟಿಪ್ಪು ಎಕ್ಸ್‌ಪ್ರೆಸ್‌ ಹೆಸರಿನ ಮೈಸೂರು ರೈಲಿಗೆ ಒಡೆಯರ್‌ ಹೆಸರು ಇರಿಸಿದ್ದನ್ನು ಸ್ವಾಗತಿಸಿದ ಯತ್ನಾಳ್‌, ಒಡೆಯರ ವಂಶಸ್ಥರಿಗೆ ಮೋಸ ಮಾಡಿದ್ದ ಟಿಪ್ಪು ಹೆಸರನ್ನು ಪ್ರಮುಖ ರೈಲಿಗೆ ನಾಮಕರಣ ಮಾಡಿ ಸಿದ್ದರಾಮಯ್ಯ ಸರಕಾರ ಪ್ರಮಾದ ಮಾಡಿತ್ತು. ಒಡೆಯರ ಆಸ್ಥಾನದಲ್ಲಿ ನೌಕರನಾಗಿದ್ದ ಟಿಪ್ಪು ತಂದೆ ಹೈದರಲಿ ಒಡೆಯರಿಗೆ ಮೋಸ ಮಾಡಿದ್ದ ವಿಶ್ವಾಸ ಘಾತಕ. ಅಂಥ ವಂಚಕನ ಮಗನಾದ ಟಿಪ್ಪು ಹೆಸರನ್ನು ರೈಲಿಗೆ ಇರಿಸಿದ್ದು ಸಿದ್ದು ಹಾಗೂ ಯುಪಿಎ ಸರಕಾರ ಮಾಡಿದ ದೊಡ್ಡ ತಪ್ಪಾಗಿತ್ತು. ಅದನ್ನು ಪ್ರಧಾನಿ ನರೇಂದ್ರ ಮೋದಿ ಸರಿಪಡಿಸಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಬೀದರ್‌ ಗಲಾಟೆ ಸರಿಯಲ್ಲ
ಬೀದರ್‌ನ ಪ್ರಾರ್ಥನಾ ಮಂದಿರದಲ್ಲಿ ನಡೆದ ಗಲಾಟೆ ಸರಿಯಲ್ಲ. ಈ ಹಿಂದೆ ಅಲ್ಲಿ ಅಂಬಾಭವಾನಿ ಮಂದಿರವಿತ್ತು. ಮಥುರಾ, ಅಯೋಧ್ಯೆ ಮಾದರಿಯಲ್ಲಿ ಅಲ್ಲೂ ನಿತ್ಯ ಪೂಜೆ ನಡೆಯಲೇಬೇಕು ಎಂದು ಯತ್ನಾಳ್‌ ಹೇಳಿದರು.

ಕಾಂಗ್ರೆಸ್‌ ಭ್ರಷ್ಟರನ್ನು ಪ್ರಧಾನಿ ಬೀದಿಗೆ ತಂದಿದ್ದಾರೆ
ಭ್ರಷ್ಟರನ್ನೆಲ್ಲ ರಸ್ತೆಗೆ ತಂದು ಬಿಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದನ್ನು ಮಾಡಿ ತೋರಿಸಿದ್ದಾರೆ. ಭಾರತ ಜೋಡೋ ಹೆಸರಿನಲ್ಲಿ ಕಾಂಗ್ರೆಸ್‌ ಹಾಗೂ ಗಾಂ ಧಿ ಪರಿವಾರ ಬೀದಿಗೆ ಬಂದಿರುವುದು ಬಿಜೆಪಿ ದೊಡ್ಡ ಸಾಧನೆ ಅಲ್ಲವೇ ಎಂದು ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನಿಸಿದರು. ಎಂದೂ ನೆಲದ ಮುಖವನ್ನೇ ನೋಡದ, ಮಣ್ಣಿನ ಮೇಲೆ ಕಾಲಿಡದ ಹಾಗೂ ಹವಾ ನಿಯಂತ್ರಿತ ಕೋಣೆ ಬಿಟ್ಟು ಹೊರಬಾರದ ಗಾಂ ಧಿ ಪರಿವಾರದ ಸೋನಿಯಾ, ರಾಹುಲ್‌ ಅವರನ್ನು ಬಿಜೆಪಿ ಬೀದಿಗೆ ತಂದಿದೆ. ಭಾರತ ಜೋಡೋ ಹೆಸರಿನಲ್ಲಿ ಬೀದಿಗೆ ಬಂದಿರುವ ನೆಹರೂ ಪರಿವಾರ ಹುಚ್ಚು ಹಿಡಿದವರಂತೆ ರಸ್ತೆಯಲ್ಲಿ ಕುಣಿಯುತ್ತಿದೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.