ಸಮುದಾಯಕ್ಕೆ ಮೀಸಲು ಕೊಡಿ ಎನ್ನುವುದು ಬ್ಲ್ಯಾಕ್ ಮೇಲ್ ಅಲ್ಲ: ಯತ್ನಾಳ್


Team Udayavani, May 8, 2022, 5:18 PM IST

ಸಮುದಾಯಕ್ಕೆ ಮೀಸಲು ಕೊಡಿ ಎನ್ನುವುದು ಬ್ಲ್ಯಾಕ್ ಮೇಲ್ ಅಲ್ಲ: ಯತ್ನಾಳ್

ವಿಜಯಪುರ: ಮಂತ್ರಿ ಮಾಡದಿದ್ದರೆ ಪಂಚಮಸಾಲಿ ಸಮಾಜ ಸುಮ್ಮನಿರದು ಎಂದರೆ ಬ್ಲ್ಯಾಕ್ ಮೇಲ್. ನನಗೆ ಮಂತ್ರಿ ಸ್ಥಾನ ನೀಡದಿದ್ದರೂ ಸರಿ ಪಂಚಮಸಾಲಿ ಸಮಾಜಕ್ಕೆ ಮಾತ್ರವಲ್ಲ ಧ್ವನಿ ಇಲ್ಲದ ಸಮುದಾಯಗಳಿಗೆ ಮೀಸಲು ಕೊಡಿ ಎಂದು ಕೇಳುವುದು ಬ್ಲ್ಯಾಕ್ ಮೇಲ್ ಅಲ್ಲ, ಒತ್ತಡ ಹಾಕುವ ಕ್ರಿಯೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಮ್ಮ ಹೋರಾಟದ ನಡೆಯನ್ನು ಸಮರ್ಥಿಸಿಕೊಂಡರು.

ಭಾನುವಾರ ಹಿಟ್ನಳ್ಳಿ ಗ್ರಾಮದಲ್ಲಿ ಕಿತ್ತೂರ ರಾಣಿ ಚನ್ನಮ್ಮಾಜಿ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಕಿತ್ತೂರ ಚನ್ನಮ ಅವರ ವಿರುದ್ಧ ಯುದ್ಧದ ಸಂದರ್ಭದಲ್ಲಿ ಮೋಸ ಮಾಡಿದಂತೆ ಇದೀಗ ಪಂಚಮಸಾಲಿ ಸಮಾಜದ 2-ಎ ಮೀಸಲು ಹೋರಾಟ ನಡೆಸಿರುವ ನಮ್ಮ ಶಕ್ತಿ ಕುಂದಿಸಲು ನಮ್ಮವರೇ ಸಂಚು ನಡೆಸಿದ್ದಾರೆ. ಹೋರಾಟದ ಮೂಲಕ ಯತ್ನಾಳ ಸಮುದಾಯದ ದೊಡ್ಡ ನಾಯಕನಾಗುತ್ತಾನೆ ಎಂಬ ಭಯದಿಂದಾಗಿ ಮೀಸಲು ಹೋರಾಟ ಹತ್ತಿಕ್ಕುವ ಕುತಂತ್ರ ನಡೆಯುತ್ತಿದೆ ಎಂದು ಟೀಕಿಸಿದರು.

ಇವನನ್ನು ಮಂತ್ರಿ ಮಾಡದಿದ್ದರೆ ಪಂಚಮಸಾಲಿ ಸಮಾಜ ಸುಮ್ಮನಿರದು ಎಂದು ಮುಖ್ಯಮಂತ್ರಿಗೆ ಬೆದರಿಕೆ ಹಾಕುವ ಸ್ವಾಮಿ ಒಂದೆಡೆಯಾದರೆ, ಸಮಾಜದ ಪ್ರತಿಭಾವಂತ, ಕೊನೆಯ ವ್ಯಕ್ತಿಗೆ ಮೀಸಲು ಕೊಡಿ ಎಂದು ಕೇಳುತ್ತಿರುವವರು ಕೂಡಲಸಂಗಮ ಬಸವಜಯ ಮೃತ್ಯುಂಜಯ ಜಗದ್ಗುರು ಒಂದೆಡೆ. ಸರ್ಕಾರ ಮೀಸಲು ಕಲ್ಪಿಸಲು ಸಿದ್ಧವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಮ್ಮವರೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರು ಒಂದು ಮಠಕ್ಕೆ 10 ಕೋಟಿ ಕೊಟ್ಟು ಮೀಸಲು ಬಗ್ಗೆ ಬಾಯಿ ಮುಚ್ಚಿಸಿದ್ದಾರೆ ಎಂದು ಪರೋಕ್ಷವಾಗಿ ಪಂಚಮಸಾಲಿ ಹರಿಹರ ಪೀಠದ ವಚನಾನಂದ ಶ್ರೀಗಳನ್ನು ಟೀಕಿಸಿದರು.

ಆದರೆ ಮೀಸಯ ಹೋರಾಟದ ಮುಂಚೂಣಿಯಲ್ಲಿ ಬದ್ಧತೆಯಿಂದ 712  ಕಿ.ಮೀ. ದಣಿವರಿಯದೇ ಪಾದಯಾತ್ರೆ ಮಾಡಿದ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ಸರ್ಕಾರದ ಹಣ ಪಡೆಯಲಿಲ್ಲ‌. ಪಾದಯಾತ್ರೆ ಅರ್ಧದಲ್ಲಿ ಬಂದಿದ್ದ ಒಬ್ಬರು ಎರಡೇ ದಿನದಲ್ಲಿ ಪಾದದಲ್ಲಿ ಗುಳ್ಳೆ ಎದ್ದವು ಎಂದು ನಾಟಕ ಆರಂಭಿಸಿದರು. ಇಂಥವರ ಬಗ್ಗೆ ಸಮಾಜದ ಜನರು ಎಚ್ಚರವಾಗಿರಿ ಎಂದರು.

ನಮ್ಮ ಸಮಾಜಕ್ಕೆ 2ಎ ಮೀಸಲು ಸೌಲಭ್ಯ ಸಿಕ್ಕರೆ ಪ್ರತಿ ಪಂಚಮಸಾಲಿ ಮನೆಯಿಂದ 1 ಸಾವಿರ ರೂ. ದೇಣಿಗೆ ನೀಡಿದರೂ 100 ಕೋಟಿ ರೂ. ದೇಣಿಗೆ ಸಂಗ್ರಹ ಆಗುತ್ತದೆ. ಹೀಗಾಗಿ ಸರ್ಕಾರ ನೀಡುವ ಹಣ ನಮಗೇಕೆ ಎಂದರು.

ಅರ್ಹತೆ ಇಲ್ಲದಿದ್ದರೂ ಸಿ.ಡಿ. ಇಟ್ಟುಕೊಂಡು ಬ್ಲಾಕ್ ಮಾಡಿ ಮಂತ್ರಿಯಾಗಿದ್ದಾರೆ. ನನ್ನ ಚುನಾವಣೆಯಲ್ಲಿ ವಿರೋಧಿ ಚಟುವಟಿಕೆ ಮಾಡಿದವರೇ ಇದೀಗ ನನ್ನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಮಾಡುತ್ತಿದ್ದಾರೆ. ನಾನು ಮಂತ್ರಿ ಆಗೋದು ದೊಡ್ಡದಲ್ಲ, ಸಮಾಜಕ್ಕೆ ಮೀಸಲು ಕಲ್ಪಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನಾನೇ ಹೇಳಿದ್ದೇನೆ. ಪರಿಸ್ಥಿತಿ ಹೀಗಿರುವಾಗ ಮಂತ್ರಿ ಸ್ಥಾನಕ್ಕಾಗಿ ಪಂಚಮಸಾಲಿ ಸಮಾಜ ಹಾಗೂ ಮೀಸಲು ಹೋರಾಟ ದುರ್ಬಳಕೆ ಮಾಡಿಕೊಳ್ಳುವುದು ಎಲ್ಲಿಂದ ಬಂತು. ಅಂಥ ದುಸ್ಥಿತಿ ನನಗಿಲ್ಲ ಎಂದು ತಮ್ಮ ವಿರೋಧಿಗಳ ವಿರುದ್ಧ ಕಿಡಿ ಕಾರಿದರು.

ಇದನ್ನೂ ಓದಿ:ಆಜಾನ್ : ಸುಪ್ರೀಂ ಕೋರ್ಟ್ ಅದೇಶ ಪಾಲನೆಗೆ ಸರ್ಕಾರ ಕ್ರಮ‌ಕೈಗೊಳ್ಳಲಿ‌ : ಯತ್ನಾಳ

ಇಷ್ಟಕ್ಕೂ ನಾನು ಪಂಚಮಸಾಲಿ ಸಮಾಜಕ್ಕೆ ಮಾತ್ರ ಮೀಸಲು ಕಲ್ಪಿಸಲು ಹೋರಾಡುತ್ತಿಲ್ಲ, ವಾಲ್ಮೀಕಿ ಸಮಾಜ, ಹಾಲುಮತ ಸಮಾಜ, ಹಡಪದ, ಆದಿಬಣಜಿಗ, ಕೂಡುಒಕ್ಕಲಿಗ ಹೀಗೆ ಎಲ್ಲ ಸಮುದಾಯಗಳಿಗೆ ಮೀಸಲು ಕಲ್ಪಿಸುವಂತೆ ಹೋರಾಡುತ್ತಿದ್ದೇನೆ ಎಂದರು.

1994 ರಲ್ಲೇ ಶಾಸಕನಾಗಿರುವ ನಾನು, ಎರಡು ಬಾರಿ ಸಂಸದನಾಗಿ, ಒಮ್ಮೆ ಎಂ.ಎಲ್.ಸಿ., ಈಗ ಮತ್ತೆ ಶಾಸಕನಾಗಿದ್ದೇನೆ. ಯಾರು ಏನೇ ಮಾಡಿದರೂ ಇನ್ನೂ ಎರಡು ಬಾರಿ ನಾನು ಗೆಲ್ಲುತ್ತೇನೆ. ಆರ್ಥಿಕವಾಗಿ ಸುಸ್ಥಿಯಲ್ಲಿರುವ ನನಗೆ, ನನ್ನ ಕುಟುಂಬಕ್ಕೆ ಮೀಸಲು ಬೇಕಿಲ್ಲ. ಸಮಾಜದ ಪ್ರತಿಭಾವಂತ ಮಕ್ಕಳು ಅವಕಾಶ ವಂಚಿತರಾಗುವುದನ್ನು ತಪ್ಪಿಸಲು ಮೀಸಲು ಕೇಳುತ್ತಿದ್ದೇನೆ ಎಂದರು.

ಮೀಸಲು ಹೋರಾಟದ ಮೂಲಕ ಪಂಚಮಸಾಲಿ ಸಮಾಜಕ್ಕೆ ಬಲಿಷ್ಠ ನಾಯಕತ್ವ ಸಿಗುತ್ತದೆ. ಇದರಿಂದ ನಮ್ಮ ಆಟ ನಡೆಯುವುದಿಲ್ಲ ಎಂಬ ಭಯದಿಂದಾಗಿ ಕೆಲವರು ನಮ್ಮದೇ ಸಮಾಜದ ವ್ಯಕ್ತಿಗಳಿಗೆ ಲಾಲಿಪಾಪ್ ಹಾಕಿ, ನಮ್ಮ ಹೋರಾಟ ಹತ್ತಿಕ್ಕುವ, ನನ್ನನ್ನು ಹೊರ ಹಾಕಿಸುವ ಸಂಚು ನಡೆಸಿದ್ದಾರೆ ಎಂದು ಯಾರ ಹೆಸರೂ ಹೇಳದೇ ಹರಿಹಾಯ್ದರು.

ಇನ್ನೊಬ್ಬರಿದ್ದಾರೆ, ನಾನು ನಿಮ್ಮ ಗುಡಿ ಪ್ರವೇಶಿಸುವುದಿಲ್ಲ, ನೀವೇ ನನ್ನ ತಂದೆ-ತಾಯಿ ಅಂತೆಲ್ಲ ನಮ್ಮ ಸಮಾಜವನ್ನು ಮೋಸ ಮಾಡುತ್ತಲೇ ಬರುತ್ತಿದ್ದಾರೆ‌. ಅವರ ಬಗ್ಗೆ ಜನರು ಎಚ್ಚರ ಇರಬೇಕು ಎಂದು ಪರೋಕ್ಷವಾಗಿ ಸ್ವಪಕ್ಷೀಯ ಸಂಸದ ರಮೇಶ ಜಿಗಜಿಣಗಿ ಅವರನ್ನು ಕುಟುಕಿದರು.

ಲಿಂಗಾಯತ ಪಂಚಮಸಾಲಿ ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು, ಯರನಾಳ ಸಂಗನಬಸವ ಶ್ರೀಗಳು, ಮನಗೂಳಿ ಅಭಿನವ ಸಂಗನಬಸವ ಶ್ರೀಗಳು,  ಯೋಗೇಶ್ವರಿ ಮಾತಾಜಿ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕ ವಿಠ್ಠಲ ಕಟಕಧೋಂಡ, ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಪಂಚಸೇನಾ ಅಧ್ಯಕ್ಷ ಬಿ.ಎಸ್.ಪಾಟೀಲ, ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಸ್. ರುದ್ರಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.