ರೈತ ಉತ್ಪಾದಕರ ಸಂಘದಿಂದ ಮನೆ ಬಾಗಿಲಿಗೆ ತರಕಾರಿ
Team Udayavani, Apr 30, 2020, 4:18 PM IST
ಬಸವನಬಾಗೇವಾಡಿ: ಆದಿ ಬಸವಣ್ಣ ರೈತ ಉತ್ಪಾದಕರ ಸಂಘದಿಂದ ರೈತರಿಂದ ತರಕಾರಿ, ಹಣ್ಣು ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತೆರಳಿ ಮಾರುವ ವ್ಯವಸ್ಥೆಗೆ ತಹಶೀಲ್ದಾರ್ ಎಂ.ಎನ್.ಬಳಿಗಾರ ಚಾಲನೆ ನೀಡಿದರು.
ಬಸವನಬಾಗೇವಾಡಿ: ಆದಿ ಬಸವಣ್ಣ ರೈತ ಉತ್ಪಾದಕರ ಸಂಘವು ರೈತರಿಂದ ತರಕಾರಿ ಖರೀದಿಸಿ ಗ್ರಾಹಕರ ಮನೆ ಬಾಗಿಲಿಗೆ ತಲಪಿಸುವ ಕಾರ್ಯಕ್ಕೆ ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಹಶೀಲ್ದಾರ್ ಎಂ.ಎನ್.ಬಳಿಗಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಆದಿ ಬಸವಣ್ಣ ರೈತ ಉತ್ಪಾದಕರ ಸಂಘವು ರೈತರಿಂದ ತರಕಾರಿ, ಹಣ್ಣು ಖರೀದಿಸಿ ಮನೆ ಮನೆಗೆ ತೆರಳಿ ಮಾರಾಟ ಮಾಡುವುದರಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ. ತರಕಾರಿ ಮಾರಾಟ ಮಾಡುವಾಗ ಮಾಸ್ಕ್ ಧರಿಸಬೇಕು. ಕೈಗೆ ಕೈಗವಸು ಹಾಕಿಕೊಳ್ಳಬೇಕಕು. ಗ್ರಾಹಕರೊಂದಿಗೆ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಿವೈಎಸ್ಪಿ ಶಾಂತವೀರ ಈ. ಮಾತನಾಡಿ, ಆದಿ ಬಸವಣ್ಣ ರೈತ ಉತ್ಪಾದಕರ ಸಂಘದ ಯೋಜನೆ ಉತ್ತಮವಾಗಿದೆ. ಸಂಘವು ರೈತರಿಗೆ ಯೋಗ್ಯ ಬೆಲೆಯನ್ನು ನೀಡಿ ತರಕಾರಿ, ಹಣ್ಣು ಖರೀದಿಸಬೇಕು. ಗ್ರಾಹಕರಿಗೆ ಹೊರೆಯಾಗದ ಬೆಲೆಯಲ್ಲಿ ಮಾರಾಟ ಮಾಡಬೇಕು ಎಂದ ಅವರು, ಈ ಸಂಘದಡಿ ಪ್ರತಿ ತಾಲ್ಲೂಕಿನಲ್ಲಿ 20 ಕಾರ್ಯಕರ್ತರು, ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಸಂಘದ ಅಧ್ಯಕ್ಷ ಎಸ್.ಟಿ.ಪಾಟೀಲ ಮಾತನಾಡಿದರು. ವಿಜಯಪುರ ಕೃಷಿ ವಿವಿ ಸಹ ವಿಸ್ತರಣಾ ನಿರ್ದೇಶಕ ಆರ್.ಬಿ.ಬೆಳ್ಳಿ, ಸಂಘದ ಕಾರ್ಯದರ್ಶಿ ಕೆ.ಎಸ್.ದಶವಂತ, ತಾಲೂಕು ಅಧ್ಯಕ್ಷ
ಯಮನಪ್ಪ ಉಳ್ಳಾಗಡ್ಡಿ, ಪಿಎಸ್ಐ ಚಂದ್ರಶೇಖರ ಹೆರಕಲ್, ಗ್ರೇಡ್-2 ತಹಶೀಲ್ದಾರ್ ಪಿ.ಜೆ.ಪವಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ