ಅನುದಾನ ಮರಳಿ ಹೋದರೆ ಅಧಿಕಾರಿಗಳ ವಿರುದ್ಧ ಕ್ರಮ: ಪಾಟೀಲ

ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಮುಗಿಸಲು ತಾಕೀತು

Team Udayavani, Feb 26, 2020, 5:12 PM IST

26-February-27

ಬಸವನಬಾಗೇವಾಡಿ: ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಕಾಮಗಾರಿಗಳು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳ್ಳಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಯೋಜನೆಗಳ ಅನುದಾನ ಮರಳಿ ಹೋದರೆ ಅಂಥ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ಮಂಗಳವಾರ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಮೂರನೇ ತ್ತೈ ಮಾಸಿಕ (ಕೆಡಿಪಿ) ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದ್ದು ಅಭಿವೃದ್ಧಿ ಕುಂಠಿತವಾಗುತ್ತಿದೆ. ಆದ್ದರಿಂದ ಎಲ್ಲ ಇಲಾಖೆ ತಾಲೂಕಾಧಿಕಾರಿಗಳು ಸಮರ್ಪಕವಾಗಿ ಯೋಜನೆಗಳ ಅನುದಾನ ಸದ್ಬಳಕೆ ಮಾಡಿಕೊಂಡು ಎಲ್ಲ ಕಾಮಗಾರಿಗಳನ್ನು ಅವಧಿ ಪೂರ್ವದಲ್ಲಿ ಮುಗಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬಸವನಬಾಗೇವಾಡಿ ತಾಲೂಕಿನ ಒಟ್ಟು 30 ಕೆರೆಗಳು ಬರುತ್ತವೆ. ಆ ಎಲ್ಲ ಕೆರೆಗಳಿಗೆ ಮಾರ್ಚ್‌ 2020 ಮೊದಲ ವಾರದಲ್ಲೇ ಕೃಷ್ಣ ಭಾಗ್ಯ ಜಲ ನಿಗಮದಿಂದ (ಕೆಬಿಜೆಎನ್‌ಎಲ್‌)ದಿಂದ ಎಲ್ಲ ಕೆರೆಗಳಿಗೆ ವಿವಿಧ ಏತ ನೀರಾವರಿ ಕಾಲುವೆಗಳ ಮೂಲಕ ಮತ್ತು ಹಳ್ಳ ಕೊಳ್ಳಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವಾಗಬೇಕಾಗಿದೆ. ಆದ್ದರಿಂದ ಸಣ್ಣ ನೀರಾವರಿ, ಕೆಬಿಜೆಎನ್‌ಎಲ್‌ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು. ಬೇಸಿಗೆಯಲ್ಲಿ ತಾಲೂಕಿನ ಯಾವುದೇ ಗ್ರಾಮಕ್ಕಾಗಲಿ ಕುಡಿಯುವ ನೀರಿನ ತೊಂದರೆಯಾಗದ ರೀತಿಯಲ್ಲಿ ನಿಗಾವಹಿಸಬೇಕು. ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವುದರಿಂದ ಆ ಭಾಗದ ರೈತರ ಕೊಳವೆ ಬಾವಿ, ತೆರೆದ ಬಾವಿಗಳಿಗೆ ಅಂತರ್ಜಲ ಹೆಚ್ಚಾಗುತ್ತದೆ. ಸಾರ್ವಜನಿಕರಿಗೆ ಮತ್ತು ಪ್ರಾಣಿ ಪಕ್ಷಿಗಳು ಹಾಗೂ ದನ ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ಎಲ್ಲ ತಯಾರಿ ಮಾಡಿಕೊಳ್ಳಬೇಕು. ಆ ಸಂದರ್ಭದಲ್ಲಿ ಯಾವುದೇ ನೆಪ ಹೇಳಬಾರದು ಎಂದು ಹೇಳಿದರು.

ಬಸವನಬಾಗೇವಾಡಿ ಬಸ್‌ ಘಟಕದಿಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಮತ್ತು ಪಟ್ಟಣದಿಂದ ಬೇರೆ ಪಟ್ಟಣ ಪ್ರದೇಶಗಳಿಗೆ ಬಸ್‌ ಸೌಕರ್ಯ ಕಲ್ಪಿಸಬೇಕು. ಬಸವನಬಾಗೇವಾಡಿ ಪಟ್ಟಣದ ಜನತೆಗೆ ಹುಬ್ಬಳ್ಳಿ ಸೇರಿದಂತೆ ಅನೇಕ ನಗರ ಪ್ರದೇಶಗಳಿಗೆ ನೇರ ಬಸ್‌ ಸಂಪರ್ಕ ಕಲ್ಪಿಸಬೇಕು. ತಾಲೂಕಿನ ಆಲಮಟ್ಟಿ, ಮನಗೂಳಿ, ಉಕ್ಕಲಿ ಗ್ರಾಮಗಳಿಗೆ ಬಸ್‌ ನಿಲ್ದಾಣ ಹಾಗೂ ನವೀಕರಣ ಮಾಡಬೇಕು ಎಂದು ಬಸವನಬಾಗೇವಾಡಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದರು.

ತಾಲೂಕಿನ ಮನಗೂಳಿ ಪಟ್ಟಣದ ಹೊರ ವಲಯದಲ್ಲಿ 4 ಎಕರೆ ಜಾಗೆಯಲ್ಲಿ ಬಿಸಿಎಂ ಇಲಾಖೆಯಿಂದ 3 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ಆ ವಸತಿ ಶಾಲೆ ಸುತ್ತ ಮುತ್ತ ವಿವಿಧ ತಳಿಗಳ ಸಸಿಗಳು ಹಾಗೂ ಗಿಡ ಮರಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಾಣವಾಗಬೇಕು ಎಂದು ಅರಣ್ಯ ಮತ್ತು ಬಿಸಿಎಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟ ನೀಡುವುದರ ಜೊತೆಗೆ ಶಾಲೆ ಆವರಣದಲ್ಲಿ ಬಿಸಿಯೂಟಕ್ಕೆ ಅಗತ್ಯವಿರುವ ತರಕಾರಿಗಳು ಹಾಗೂ ಹಣ್ಣು ಹಂಪಲನ್ನು ಬೆಳೆಸುವ ಕಾರ್ಯವಾಗಬೇಕು. ಅದರ ಜೊತೆಯಲ್ಲೇ ಬೇರೆ ಬೇರೆ ಆಹಾರ ನೀಡುವ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಸುಜಾತಾ ಪಾಟೀಲ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ತಾಪಂ ಇಒ ಭಾರತಿ ಚಲುವಯ್ಯ ವೇದಿಕೆಯಲ್ಲಿದ್ದರು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.