ವಿವಿಧೆಡೆ ಸಾಧಾರಣ ಮಳೆ
Team Udayavani, Jun 27, 2020, 3:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನ ಮನಗೂಳಿ, ಮುತ್ತಗಿ, ಹೂವಿನಹಿಪ್ಪರಗಿ, ಜಾಯವಾಡಗಿ, ಕಾನ್ನಾಳ ಸೇರಿದಂತೆ ವಿವಿಧೆಡೆ ಗುರುವಾರ ಸಾಧಾರಣ ಮಳೆಯಾಗಿದೆ.
ಬೆಳಗ್ಗೆಯಿಂದಲ್ಲೇ ಬಿಸಿಲಿನ ತಾಪ ಹೆಚ್ಚಾಗಿತ್ತು. ಆಗಾಗ್ಗೆ ಮೋಡ ಕವಿದ ವಾತಾವರಣವಿದ್ದರೂ ಶಕೆ ಇತ್ತು. ಸಂಜೆ ಪಟ್ಟಣದಲ್ಲಿ ಕೆಲ ಹೊತ್ತು ತುಂತುರು ಮಳೆಯಾಯಿತು. ಮಧ್ಯರಾತ್ರಿ ಪಟ್ಟಣ ಸೇರಿದಂತೆ ವಿವಿಧೆಡೆ ಕೆಲ ಗಂಟೆಯವರೆಗೆ ಉತ್ತಮ ಮಳೆ ಸುರಿಯಿತು. ನಂತರ ಜಿಟಿ ಜಿಟಿ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಮಳೆಯಿಂದಾಗಿ ಹೊಲದ ಬದುವು, ವಿವಿಧೆಡೆ ತಗ್ಗು ಪ್ರದೇಶ, ರಸ್ತೆ, ಚರಂಡಿ ತುಂಬಿ ಹರಿದಿವೆ. ಮಳೆಯಿಂದಾಗಿ ಮುಂಗಾರು ಬೆಳೆಗೆ ಅನುಕೂಲವಾಗಿದ್ದು, ರೈತರಿಗೆ ಸಂತಸ ಮನೆ ಮಾಡಿದೆ.
ಜತೆಗೆ ಇನ್ನೂ ಬಿತ್ತನೆಗೆ ಅಣಿಯಾಗಿರುವ ರೈತರಿಗೆ ಮಳೆ ನಿರೀಕ್ಷೆ ಹೆಚ್ಚಿಸಿದೆ. ತಾಲೂಕಿನ ವಿವಿಧೆಡೆ ಗುರುವಾರ ಬಸವನಬಾಗೇವಾಡಿ- 23.3 ಮಿ.ಮೀ, ಮಟ್ಟಿಹಾಳ- 31.6 ಮಿ.ಮೀ, ಆಲಮಟ್ಟಿ- 15.5 ಮಿ.ಮೀ, ಮನಗೂಳಿ- 15 ಮಿ.ಮೀ, ಹೂವಿನಹಿಪ್ಪರಗಿ- 63.2 ಮಿ.ಮೀ, ಆರೇಶಂಕರ ಮಳೆ ಮಾಪನ ಕೇಂದ್ರದಲ್ಲಿ 28 ಮಿ.ಮೀ ಮಳೆ ಪ್ರಮಾಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ