ದ್ರಾಕ್ಷಿ ಬೆಳೆ‌ಗಾರರ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಿ

ತೋಟಗಾರಿಕೆ ಇಲಾಖೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಲಿ

Team Udayavani, Feb 23, 2020, 4:31 PM IST

23-February-27

ಬಸವನಬಾಗೇವಾಡಿ: ಬೇರೆ ಬೇರೆ ಕ್ಷೇತ್ರಗಳಲ್ಲಿ ಮೂರ್ನಾಲ್ಕು ಸಮಸ್ಯೆಗಳು ಬರುತ್ತವೆ ಹಾಗೆ ಪರಿಹಾರವು ಸಿಗುತ್ತವೆ. ಆದರೆ ಕೃಷಿ ಕ್ಷೇತ್ರದಲ್ಲಿ ಹತ್ತಾರು ಸಮಸ್ಯೆಗಳು ಎದುರಾಗುತ್ತವೆ. ಆದರೆ ಯಾವ ಸಮಸ್ಯೆ ಕೂಡಾ ಪರಿಹಾರವಾಗದ ಹಿನ್ನಲೆಯಲ್ಲಿ ಅನ್ನದಾತ ಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಪಟ್ಟಣದ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯಶ್ರೀಗಳು ಹೇಳಿದರು.

ಪಟ್ಟಣದ ವಿಜಯಪುರ ರಸ್ತೆಯ ಯಾತ್ರಿ ನಿವಾಸದಲ್ಲಿ ವಿಜಯಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಸ್ಥಳೀಯ ಉಪ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಣ ದ್ರಾಕ್ಷಿ ಉತ್ಪನ್ನಕ್ಕೆ ಆನ್‌ಲೈನ್‌ (ಇ-ಟ್ರೇಡಿಂಗ್‌) ವ್ಯವಸ್ಥೆ ಜಾರಿಗೊಳಿಸುವ ಕುರಿತು ದ್ರಾಕ್ಷಿ ಬೆಳೆಗಾರರ ಪೂರ್ವಭಾವಿ ಸಭೆ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅನ್ನದಾತನಿಗೆ ಒಂದಡೆ ಅತಿವೃಷ್ಟಿ, ಅನಾವೃಷ್ಟಿ, ರೋಗ ರುಜಿನಗಳಿಂದ ಬೆಳೆ ಹಾನಿ, ಬರಗಾಲ ಇವುಗಳ ಮಧ್ಯದಲ್ಲಿ ಬೆಳೆ ಬಂದರು ಕೂಡಾ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗದೆ ಹತ್ತಾರು ಸಮಸ್ಯೆಗಳಿಂದ ಅನ್ನದಾತ ಹೊರ ಬರಲು ಸಾಧ್ಯವಾಗುತ್ತಿಲ್ಲ. ಬೆಳೆವಿಮೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಅನ್ನದಾತ ಸಂಕಷ್ಟದಲ್ಲಿ ಸಿಲುಕಿಕೊಳ್ಳುತ್ತಿದ್ದಾನೆ ಎಂದು ಹೇಳಿದರು.

ದ್ರಾಕ್ಷಿ ಬೆಳಗಾರರು ಎದುರಿಸುವ ಸಮಸ್ಯೆ ಪರಿಹರಿಸಿಕೊಳ್ಳುವುದಕ್ಕಾಗಿ ಮೇಲಿಂದ ಮೇಲೆ ಸಭೆಗಳು ನಡೆಯಬೇಕು. ಬೆಳೆವಿಮೆ ಕುರಿತಂತೆ ತೋಟಗಾರಿಕೆ ಇಲಾಖೆ ರೈತರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ದಲ್ಲಾಳಿಗಳ ಹಾವಳಿ ನಿಲ್ಲಬೇಕು. ತಜ್ಞ ಕೃಷಿ ವಿಜ್ಞಾನಿಗಳನ್ನು ನೇಮಕ ಮಾಡಬೇಕು. ಉತ್ತಮ ಫಲಸು ತೆಗೆಯುವ ನಿಟ್ಟಿನಲ್ಲಿ ಸಲಹೆ ನೀಡಬೇಕು ಅಂದಾಗ ಮಾತ್ರ ಅನ್ನದಾತ ಹಲವಾರು ಸಮಸ್ಯೆಯಿಂದ ಹೊರ ಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದ್ರಾಕ್ಷಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಭಯಕುಮಾರ ನಾಂದ್ರೇಕರ ಮಾತನಾಡಿ, ದ್ರಾಕ್ಷಿ ಬೆಳಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಣದ್ರಾಕ್ಷಿ ಉತ್ಪನ್ನಕ್ಕೆ ಉತ್ತಮ ಮಾರುಕಟ್ಟೆ ಒದಗಿಸುವುದಕ್ಕಾಗಿ ಆನ್‌ಲೈನ್‌ (ಇ-ಟ್ರೇಡಿಂಗ್‌) ವ್ಯವಸ್ಥೆ ಯನ್ನು ವಿಜಯಪುರದಲ್ಲಿ ಜಾರಿಗೊಳಿಸಲಾಗುವುದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕಿ ಸಂಯುಕ್ತಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚು ರೈತರು ದ್ರಾಕ್ಷಿ ಬೆಳೆಯುತ್ತಿದ್ದಾರೆ. ಒಣದ್ರಾಕ್ಷಿ ಮಾರಾಟಕ್ಕಾಗಿ ಹೊರ ರಾಜ್ಯಗಳಿಗೆ ತೆರಳುವ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಆನ್‌ಲೈನ್‌ ಮಾರಾಟ ವ್ಯವಸ್ಥೆಯೊಂದಿಗೆ ಕೋಲ್ಡ್‌ ಸ್ಟೋರೇಜ್‌ಗಳ ಸಂಖ್ಯೆ ಹೆಚ್ಚಳವಾಗಬೇಕು. ಯಾವುದೇ ಒಂದು ಕಾರ್ಯ ಒಂದೇ ದಿನದಲ್ಲಿ ಪೂರ್ಣಗೊಳ್ಳುವುದಿಲ್ಲ. ಹಂತ ಹಂತವಾಗಿ ರೈತರ ಸಮಸ್ಯೆ ಪರಿಹರಿಸಬೇಕು. ಇಂತಹ ಕಾರ್ಯಗಳಿಗೆ ರೈತರ ಸಹಕಾರ ಅಗತ್ಯವಾಗಿದೆ ಎಂದರು.

ದ್ರಾಕ್ಷಿ ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪೀರಗೊಂಡ ಗದ್ಯಾಳ ಮಾತನಾಡಿ, ಬೇಸಿಗೆ ಕಾಲದಲ್ಲಿ ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಟ್ಯಾಂಕರ್‌ ನೀರಿಗೆ ಮೊರೆ ಹೋಗಿದ್ದಾರೆ. ಬೆಳೆಗೆ ಸೂಕ್ತ ಬೆಲೆ ಸಿಗದಿದ್ದಾಗ ರೈತರು ಸಂಕಷ್ಟ ಎದುರಿಸಬೇಕಾಗುತ್ತದೆ. ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗೆ ಸೂಕ್ತ ವಾತಾವರಣವಿದೆ. ದ್ರಾಕ್ಷಿ. ಒಣ ದ್ರಾಕ್ಷಿ ಮಾರಾಟದಲ್ಲಿ ಜಿಲ್ಲೆ ಅಂತಾರಾಷ್ಟ್ರೀಯ ಮಾರುಕಟ್ಟೆ ಕೇಂದ್ರವಾಗಬೇಕಿದೆ. ದ್ರಾಕ್ಷಿ ಬೆಳೆಗಾರರಿಗೆ ರಾಜ್ಯ ಸರಕಾರ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ಬೆಳೆದ ಬೆಳೆಯನ್ನು ಅನ್ಯ ರಾಜ್ಯದ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಡಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿ ಪೀರ್‌ಜಾರದೆ, ಎಪಿಎಂಸಿ ಅಧ್ಯಕ್ಷ ಸುರೇಶಗೌಡ ಬಿರಾದಾರ, ಎಪಿಎಂಸಿ ನಿರ್ದೇಶಕರಾದ ಶೇಖರ ಗೊಳಸಂಗಿ, ಚಂದ್ರಶೇಖರ ಪಾಟೀಲ, ವಿಶ್ವನಾಥ ಪಾಟೀಲ, ರಾಜುಗೌಡ ಪಾಟೀಲ, ಪಿಕೆಪಿಎಸ್‌ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಎಸ್‌.ಎಸ್‌. ಜಾಲಗೇರಿ, ಡಾ| ಕರುಣಾಕರ ಚೌಧರಿ, ಎಪಿಎಂಸಿ ಸಹಾಯಕ ಕಾರ್ಯದರ್ಶಿ ಬಿ.ಎಲ್‌. ಜುಮನಾಳ, ನವೀನ ಪಾಟೀಲ ಸೇರಿದಂತೆ ಅನೇಕರು ಇದ್ದರು. ಐ.ಎಸ್‌. ಅವರಂಗಬಾದ ಸ್ವಾಗತಿಸಿದರು. ಧನರಾಜ ಪಟ್ಟಣಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.