ಬಾಂದಾರಗೆ ನೀರು: ಪಾಟೀಲ ಚಾಲನೆ


Team Udayavani, Apr 25, 2020, 2:00 PM IST

25-April-17

ಬಸವನಬಾಗೇವಾಡಿ: ಹೋರಿಮಟ್ಟಿ ಗುಡ್ಡದ ಹತ್ತಿರದ ಉಪ ಕಾಲುವೆಯಿಂದ ಪೈಪ್‌ ಮೂಲಕ ಬಾಂದಾರಕ್ಕೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ಶಿವಾನಂದ ಪಾಟೀಲ ಚಾಲನೆ ನೀಡಿದರು

ಬಸವನಬಾಗೇವಾಡಿ: ಪಟ್ಟಣದ ಹೊರ ವಲಯದಲ್ಲಿರುವ ಹೋರಿಮಟ್ಟಿ ಗುಡ್ಡದ ಹತ್ತಿರದ ಉಪ ಕಾಲವೆಯಿಂದ ಪೈಪ್‌ ಮೂಲಕ ಬಾಂದಾರಕ್ಕೆ ನೀರು ಹರಿಸುವ ಕಾರ್ಯಕ್ಕೆ ಗುರುವಾರ ಶಾಸಕ ಶಿವಾನಂದ ಪಾಟೀಲ ಗಂಗಾಪೂಜೆ ನೆರವೇರಿಸಿ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುದರಿಸಾಲವಾಡಗಿ ಉಪ ಕಾಲುವೆ ಮೂಲಕ ಬಾಂದಾರಗೆ ನೀರು ಹರಿಯುತ್ತಿರುವುದರಿಂದ ಜನ, ಜಾನುವಾರ ಸೇರಿದಂತೆ ಸುತ್ತ ಮುತ್ತಲಿನ ನೂರಾರು ರೈತರು ವಸತಿ ತೋಟದಲ್ಲಿರುವ ರೈತರಿಗೆ ಹಾಗೂ ಜನ ಜಾನುವಾರಗಳು, ಪಕ್ಷಿ ಪ್ರಾಣಿಗಳಿಗೆ ಕುಡಿಯುವ ನೀರು ಮತ್ತು ತೆರೆದ ಬಾವಿ, ಕೊಳವೆ ಬಾವಿಗಳಿಗೆ ಅಂತರ್ಜಲ ಹೆಚ್ಚಳವಾಗುವ ಸಾಧ್ಯತೆಯಿಂದ ಈ ಕಾರ್ಯ ಮಾಡಲಾಗಿದೆ ಎಂದರು.

ಕೂಡಗಿ ಬಳಿಯಿರುವ ಮುಳವಾಡ ಏತ ನೀರಾವರಿ ಯೋಜನೆಯ ಹಂತ-3ರ ವಿಜಯಪುರ ಮುಖ್ಯ ಹಾಗೂ ಬಸವನಬಾಗೇವಾಡಿ ಕಾಲುವೆಗೆ ಏ. 20ರಂದು ನೀರು ಹರಿಸಲಾಗಿದೆ. ಈ ಕಾಲುವೆಗಳ ಮೂಲಕ ಜಿಲ್ಲೆಯ ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿಯಿಂದ 97 ಕೆರೆಗಳಿಗೆ ನೀರನ್ನು ತುಂಬಿಸುವ ಮೂಲಕ ಬೇಸಿಗೆಯಲ್ಲಿ ಆ ಭಾಗದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಪೂರಕವಾಗುವದರೊಂದಿಗೆ ಜನ, ಜಾನುವಾರುಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ವಿರಕ್ತಮಠದ ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ಈ ಭಾಗದ ರೈತರು ಅಂತರ ಕಾಯ್ದುಕೊಂಡು ಕುದರಿಸಾಲವಾಡಗಿ ಉಪ ಕಾಲುವೆಯಿಂದ ಸುಮಾರು 600 ಮೀ.ವರೆಗೆ ಪೈಪ್‌ಲೈನ್‌ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅವರ ಶ್ರಮದ ಫಲವಾಗಿ ಎರಡು ಬಾಂದಾರಗಳಿಗೆ ನೀರು ಹರಿಸಲಾಗುತ್ತಿದೆ. ಈ ನೀರು ಹಿರೇಹಳ್ಳದ ಮಾರ್ಗವಾಗಿ ಆರೇಡಿಶಂಕರ ಕೆರೆಗೆ ಹೋಗಿ ತಲುಪಲಿದೆ ಎಂದರು.

ಈ ವೇಳೆ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಶ್ರೀ, ಗಂಗಯ್ಯ ಕಾಳಹಸ್ತೇಶ್ವರಮಠ, ಈರಣ್ಣ ಪಟ್ಟಣಶೆಟ್ಟಿ, ಶೇಖರ ಗೊಳಸಂಗಿ, ಸಂಗಮೇಶ ಓಲೇಕಾರ, ಬಸಣ್ಣ ದೇಸಾಯಿ, ಬಸವರಾಜ ಹಾರಿವಾಳ, ಭರತಕುಮಾರ ಅಗರವಾಲ, ಅರವಿಂದ ಕುಲಕರ್ಣಿ, ಬಸವರಾಜ ಗೊಳಸಂಗಿ, ಹರೀಶ ಅಗರವಾಲ, ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.